ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜ.19 ರಂದು ಬೆಳಿಗ್ಗೆ 7.30 ಕ್ಕೆ ಗೋ ಪೂಜೆ, ಗುರು ಪ್ರಾರ್ಥನೆ, ವೇದ ಪಾರಾಯಣ, ಆಂಜನೇಯ ಸಹಸ್ರನಾಮ ತುಳಸಿ ಅರ್ಚನೆ, ಪವಮಾನ ಹೋಮ ನಡೆಯಲಿವೆ. ಮಧ್ಯಾಹ್ನ 12.30 ಕ್ಕೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ 5ಕ್ಕೆ ಮೃದಂಗ ವಿದ್ವಾಂಸ ಆನೂರು ಅನಂತಕೃಷ್ಣಶರ್ಮ, ಸಂಗೀತ ವಿದುಷಿ ಸುನಿತಾ, ಮಂಗಳಾ ರವಿ, ಸಂಗೀತ ವಿದ್ವಾನ್ ರಘುರಾಮ್ ತಂಡದ ಸಂಗೀತ ಕಛೇರಿ ನಡೆಯಲಿದೆ’ ಎಂದು ತಿಳಿಸಿದರು.