ಶಿಡ್ಲಘಟ್ಟ: ದೇಶದಾದ್ಯಂತ ಪದೇ ಪದೇ ಹೆಣ್ಣುಮಕ್ಕಳ ಮೇಲೆನಡೆಯುತ್ತಿರುವ ಅತ್ಯಾಚಾರ ತಡೆಗಟ್ಟಲು ಕೇಂದ್ರ ಸರ್ಕಾರ ಕಠಿಣ ಕಾನೂನು ರೂಪಿಸಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ)ದ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಪ್ರಸನ್ನಕುಮಾರ್ ಒತ್ತಾಯಿಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಎನ್ಎಸ್ಯುಐ ಪದಾಧಿಕಾರಿಗಳ ನೇತೃತ್ವದಲ್ಲಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.
ಎನ್ಎಸ್ಯುಐ ತಾಲ್ಲೂಕು ಉಪಾಧ್ಯಕ್ಷ ಅಫ್ರಿದ್ ಪಾಷ, ಪದಾಧಿಕಾರಿಗಳಾದ ಬಿ. ಹರೀಶ್, ಎಸ್.ವಿ. ನಂದೀಶ್ಹಾಜರಿದ್ದರು.