<p><strong>ಚಿಕ್ಕಬಳ್ಳಾಪುರ</strong>: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲಿ ಮುಖ್ಯವಾದ ‘ಶಕ್ತಿ’ ಯೋಜನೆಯಿಂದ ಜಿಲ್ಲೆಯಲ್ಲಿ ಇದುವರೆಗೂ 7,28,53,367 ಉಚಿತ ಟಿಕೆಟ್ಗಳನ್ನು ಪಡೆದು ಮಹಿಳೆಯರು ಪ್ರಯಾಣಿಸಿದ್ದಾರೆ. ಇದಕ್ಕೆ ಸರ್ಕಾರವು ಒಟ್ಟು ₹ 274,80,94,395 ಭರಿಸಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ತಿಳಿಸಿದರು.</p><p>ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಬಸ್ಗೆ ಪೂಜೆ ಸಲ್ಲಿಸಿ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. </p><p>ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಕೆಎಸ್ಆರ್ಟಿಸಿಯು ಒಂದು ಸಾವಿರ ಅಶ್ವಮೇಧ ಮಾದರಿಯ ಬಸ್ಗಳನ್ನು ಖರೀದಿಸುವ ಪ್ರಕ್ರಿಯೆಯು ಟೆಂಡರ್ ಹಂತದಲ್ಲಿದೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ. ಸದ್ಯದಲ್ಲೆ ಹೊಸ ವಾಹನಗಳು ಎಲ್ಲ ಜಿಲ್ಲೆಗಳಿಗೆ ವಿತರಣೆ ಆಗಲಿವೆ ಎಂದರು.</p><p>ಯೋಜನೆಯು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಒದಗಿಸಿದೆ. ಆ ಮೂಲಕ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದೆ. 2023ರ ಜೂನ್ 11ರಂದು ಆರಂಭಗೊಂಡ ಈ ಯೋಜನೆಯು ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 500 ಕೋಟಿ ಉಚಿತ ಪ್ರಯಾಣಗಳನ್ನು ಜು.9ರಂದು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಹಿಳೆಯರಿಗೆ ಉಚಿತ ಬಸ್ ಟಿಕೆಟ್ ನೀಡುವ ಜೊತೆಗೆ ಸಿಹಿ ಹಂಚಿ ಸಂಭ್ರಮಿಸಲಾಗುತ್ತಿದೆ ಎಂದು ಹೇಳಿದರು.</p><p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ರಾಮಕೃಷ್ಣಪ್ಪ, ಚಿಕ್ಕಬಳ್ಳಾಪುರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಜಯರಾಮ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ನಾರಾಯಣಮ್ಮ ಪಾಲ್ಗೊಂಡಿದ್ದರು.</p><p><strong>616 ಸರ್ಕಾರಿ ಬಸ್</strong></p><p>ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜ್ ಮಾತನಾಡಿ, ಜಿಲ್ಲೆಯಲ್ಲಿ 616 ಸರ್ಕಾರಿ ಬಸ್ಗಳಿವೆ. 584 ಟ್ರಿಫ್ ಗಳನ್ನು ನಿತ್ಯ ಆಯೋಜಿಸಲಾಗುತ್ತಿದೆ ಎಂದರು.</p><p>ಸಿಬ್ಬಂದಿ ಕೊರತೆ ನೀಗಿಸಲು ಚಿಕ್ಕಬಳ್ಳಾಪುರ ವಿಭಾಗಕ್ಕೆ ಹೊಸದಾಗಿ 200 ಚಾಲಕ ಕಂ ನಿರ್ವಾಹಕರನ್ನು ಸರ್ಕಾರ ಒದಗಿಸಿದೆ. ಪ್ರಯಾಣಿಕರಿಗೆ ತೊಡಕಾಗದಂತೆ ವಾಹನ ವ್ಯವಸ್ಥೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಹೆಚ್ಚು ಓಡಾಟದ ಒತ್ತಡವಿರುವ ಕಡೆಗೆ ಹೆಚ್ಚು ಬಸ್ ನಿಯೋಜಿಸಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲಿ ಮುಖ್ಯವಾದ ‘ಶಕ್ತಿ’ ಯೋಜನೆಯಿಂದ ಜಿಲ್ಲೆಯಲ್ಲಿ ಇದುವರೆಗೂ 7,28,53,367 ಉಚಿತ ಟಿಕೆಟ್ಗಳನ್ನು ಪಡೆದು ಮಹಿಳೆಯರು ಪ್ರಯಾಣಿಸಿದ್ದಾರೆ. ಇದಕ್ಕೆ ಸರ್ಕಾರವು ಒಟ್ಟು ₹ 274,80,94,395 ಭರಿಸಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ತಿಳಿಸಿದರು.</p><p>ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಬಸ್ಗೆ ಪೂಜೆ ಸಲ್ಲಿಸಿ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. </p><p>ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಕೆಎಸ್ಆರ್ಟಿಸಿಯು ಒಂದು ಸಾವಿರ ಅಶ್ವಮೇಧ ಮಾದರಿಯ ಬಸ್ಗಳನ್ನು ಖರೀದಿಸುವ ಪ್ರಕ್ರಿಯೆಯು ಟೆಂಡರ್ ಹಂತದಲ್ಲಿದೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ. ಸದ್ಯದಲ್ಲೆ ಹೊಸ ವಾಹನಗಳು ಎಲ್ಲ ಜಿಲ್ಲೆಗಳಿಗೆ ವಿತರಣೆ ಆಗಲಿವೆ ಎಂದರು.</p><p>ಯೋಜನೆಯು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಒದಗಿಸಿದೆ. ಆ ಮೂಲಕ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದೆ. 2023ರ ಜೂನ್ 11ರಂದು ಆರಂಭಗೊಂಡ ಈ ಯೋಜನೆಯು ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 500 ಕೋಟಿ ಉಚಿತ ಪ್ರಯಾಣಗಳನ್ನು ಜು.9ರಂದು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಹಿಳೆಯರಿಗೆ ಉಚಿತ ಬಸ್ ಟಿಕೆಟ್ ನೀಡುವ ಜೊತೆಗೆ ಸಿಹಿ ಹಂಚಿ ಸಂಭ್ರಮಿಸಲಾಗುತ್ತಿದೆ ಎಂದು ಹೇಳಿದರು.</p><p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ರಾಮಕೃಷ್ಣಪ್ಪ, ಚಿಕ್ಕಬಳ್ಳಾಪುರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಜಯರಾಮ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ನಾರಾಯಣಮ್ಮ ಪಾಲ್ಗೊಂಡಿದ್ದರು.</p><p><strong>616 ಸರ್ಕಾರಿ ಬಸ್</strong></p><p>ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜ್ ಮಾತನಾಡಿ, ಜಿಲ್ಲೆಯಲ್ಲಿ 616 ಸರ್ಕಾರಿ ಬಸ್ಗಳಿವೆ. 584 ಟ್ರಿಫ್ ಗಳನ್ನು ನಿತ್ಯ ಆಯೋಜಿಸಲಾಗುತ್ತಿದೆ ಎಂದರು.</p><p>ಸಿಬ್ಬಂದಿ ಕೊರತೆ ನೀಗಿಸಲು ಚಿಕ್ಕಬಳ್ಳಾಪುರ ವಿಭಾಗಕ್ಕೆ ಹೊಸದಾಗಿ 200 ಚಾಲಕ ಕಂ ನಿರ್ವಾಹಕರನ್ನು ಸರ್ಕಾರ ಒದಗಿಸಿದೆ. ಪ್ರಯಾಣಿಕರಿಗೆ ತೊಡಕಾಗದಂತೆ ವಾಹನ ವ್ಯವಸ್ಥೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಹೆಚ್ಚು ಓಡಾಟದ ಒತ್ತಡವಿರುವ ಕಡೆಗೆ ಹೆಚ್ಚು ಬಸ್ ನಿಯೋಜಿಸಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>