<p><strong>ಶಿಡ್ಲಘಟ್ಟ</strong>: ಶಕ್ತಿ ಯೋಜನೆ ಆರಂಭವಾದ ಎರಡು ವರ್ಷದಲ್ಲಿ ತಾಲ್ಲೂಕಿನಲ್ಲಿ 85,90,102 ಮಹಿಳೆಯರು ಪ್ರಯಾಣಿಸಿದ್ದು, ₹30,71,48,142 ಮೊತ್ತದ ಟಿಕೆಟ್ ವಿತರಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಘಟಕ ವ್ಯವಸ್ಥಾಪಕ ಟಿ.ವಿ.ನಾಗೇಶ್ ತಿಳಿಸಿದರು.</p>.<p>ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಸೋಮವಾರ ಶಕ್ತಿ ಯೋಜನೆಯ ಎರಡು ವರ್ಷ ಪೂರೈಸಿರುವ ಸಂಭ್ರಮಾಚರಣೆ ಪ್ರಯುಕ್ತ ಬಸ್ಗೆ ಪೂಜೆ ಸಲ್ಲಿಸಿ, ಸಿಹಿ ಹಂಚಿ ಅವರು ಮಾತನಾಡಿದರು.</p>.<p>ಯೋಜನೆ ಆರಂಭವಾದ ಎರಡು ವರ್ಷದ ಅವಧಿಯಲ್ಲಿ ವಿದ್ಯಾರ್ಥಿನಿಯರು, ಉದ್ಯೋಗಕ್ಕೆ ಹೋಗುವ ಹೆಣ್ಣುಮಕ್ಕಳು ಹಾಗೂ ಮಹಿಳೆಯರು ‘ಶಕ್ತಿ’ ಯೋಜನೆ ಪ್ರಯೋಜನೆ ಪಡೆದುಕೊಂಡಿದ್ದಾರೆ. ಇದರಿಂದ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿದದು, ಹೆಚ್ಚುವರಿ ಬಸ್ಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.</p>.<p>ಘಟಕ ಉಸ್ತುವಾರಿ ಅಧಿಕಾರಿ ಜೆ.ವಿ.ಶ್ರೀಧರ್, ಬಸ್ ನಿಲ್ದಾಣಾಧಿಕಾರಿ ಬಿ.ವಿ.ಚಲಪತಿ, ಘಟಕದ ಸಂಚಾರಿ ನಿರೀಕ್ಷಕ ಪರಮೇಶ್ವರ ಸಿಂಘಿ , ಗಣಕ ಮೇಲ್ವಿಚಾರಕ ಪಿ.ಎಂ. ನಾರಾಯಣಸ್ವಾಮಿ, ಸಿಬ್ಬಂದಿ ಬಾಬಾ, ಅರುಣ , ವಸಂತ್ ಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ಶಕ್ತಿ ಯೋಜನೆ ಆರಂಭವಾದ ಎರಡು ವರ್ಷದಲ್ಲಿ ತಾಲ್ಲೂಕಿನಲ್ಲಿ 85,90,102 ಮಹಿಳೆಯರು ಪ್ರಯಾಣಿಸಿದ್ದು, ₹30,71,48,142 ಮೊತ್ತದ ಟಿಕೆಟ್ ವಿತರಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಘಟಕ ವ್ಯವಸ್ಥಾಪಕ ಟಿ.ವಿ.ನಾಗೇಶ್ ತಿಳಿಸಿದರು.</p>.<p>ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಸೋಮವಾರ ಶಕ್ತಿ ಯೋಜನೆಯ ಎರಡು ವರ್ಷ ಪೂರೈಸಿರುವ ಸಂಭ್ರಮಾಚರಣೆ ಪ್ರಯುಕ್ತ ಬಸ್ಗೆ ಪೂಜೆ ಸಲ್ಲಿಸಿ, ಸಿಹಿ ಹಂಚಿ ಅವರು ಮಾತನಾಡಿದರು.</p>.<p>ಯೋಜನೆ ಆರಂಭವಾದ ಎರಡು ವರ್ಷದ ಅವಧಿಯಲ್ಲಿ ವಿದ್ಯಾರ್ಥಿನಿಯರು, ಉದ್ಯೋಗಕ್ಕೆ ಹೋಗುವ ಹೆಣ್ಣುಮಕ್ಕಳು ಹಾಗೂ ಮಹಿಳೆಯರು ‘ಶಕ್ತಿ’ ಯೋಜನೆ ಪ್ರಯೋಜನೆ ಪಡೆದುಕೊಂಡಿದ್ದಾರೆ. ಇದರಿಂದ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿದದು, ಹೆಚ್ಚುವರಿ ಬಸ್ಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.</p>.<p>ಘಟಕ ಉಸ್ತುವಾರಿ ಅಧಿಕಾರಿ ಜೆ.ವಿ.ಶ್ರೀಧರ್, ಬಸ್ ನಿಲ್ದಾಣಾಧಿಕಾರಿ ಬಿ.ವಿ.ಚಲಪತಿ, ಘಟಕದ ಸಂಚಾರಿ ನಿರೀಕ್ಷಕ ಪರಮೇಶ್ವರ ಸಿಂಘಿ , ಗಣಕ ಮೇಲ್ವಿಚಾರಕ ಪಿ.ಎಂ. ನಾರಾಯಣಸ್ವಾಮಿ, ಸಿಬ್ಬಂದಿ ಬಾಬಾ, ಅರುಣ , ವಸಂತ್ ಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>