ಚಿಕ್ಕಬಳ್ಳಾಪುರ ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ‘ಈ ನೂತನ ಮಾರುಕಟ್ಟೆಯಲ್ಲಿ ಸಮರ್ಪಕವಾಗಿ ಮೂಲಸೌಕರ್ಯ ಕಲ್ಪಿಸಲಾಗಿದೆ. ಪ್ರಾಣಿಗಳನ್ನು ನಿಲ್ಲಿಸಲು, ಕುಡಿಯುವ ನೀರು, ವಾಹನದಿಂದ ಇಳಿಸಲು, ಏರಿಸಲು ರ್ಯಾಂಪ್ ವ್ಯವಸ್ಥೆ, ಅತ್ಯಾಧುನಿಕ ತೂಕದ ಯಂತ್ರ ಮಾರುಕಟ್ಟೆಯಲ್ಲಿ ಅಳವಡಿಸಲಾಗಿದೆ. ಜಿಲ್ಲೆಯ ರೈತರು ಎಲ್ಲೆಂದರಲ್ಲಿ ಕುರಿ, ಮೇಕೆಗಳನ್ನು ಮಾರಾಟ ಮಾಡಿ ನಷ್ಟ ಅನುಭವಿಸುವ ಬದಲು ಇಲ್ಲಿ ಬಂದು ತಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.