<p><strong>ಶಿಡ್ಲಘಟ್ಟ:</strong> ಸಕ್ರಿಯ ರಾಜಕೀಯದಿಂದ ನಿವೃತ್ತರಾಗಿದ್ದ ಮಾಜಿ ಶಾಸಕ ವಿ.ಮುನಿಯಪ್ಪ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಜವಾಬ್ದಾರಿ ನೀಡಲಾಗಿದೆ. ಮತ್ತೊಂದು ಕಡೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದ ಪುಟ್ಟು ಆಂಜನಪ್ಪ ಅವರನ್ನು ಮರಳಿ ಕೈ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. </p>.<p>ಈ ಮೂಲಕ ಶಿಡ್ಲಘಟ್ಟ ಕ್ಷೇತ್ರದ ಕಾಂಗ್ರೆಸ್ ರಾಜಕಾರಣದಲ್ಲಿ ನಾನಾ ಚರ್ಚೆಗಳು ಗರಿಗೆದರಿವೆ. ಅಲ್ಲೋಲ ಕಲ್ಲೋಲ ಎನ್ನುವ ಸ್ಥಿತಿ ಎದುರಾಗಿದೆ. ಈ ಎಲ್ಲ ಬೆಳವಣಿಗೆಗಳು ಮುಖಂಡ ರಾಜೀವ್ ಗೌಡ ಅಸಮಾಧಾನಕ್ಕೆ ಕಾರಣವಾಗಿದೆ.</p>.<p>ಕಳೆದ ವಿಧಾನಸಭೆ ಚುನಾವಣೆಯಲ್ಲಿ ವಿ.ಮುನಿಯಪ್ಪ ಸ್ಪರ್ಧಿಸಲಿಲ್ಲ. ರಾಜಕೀಯವಾಗಿ ನಿವೃತ್ತ ಎನ್ನುವ ಸ್ಥಿತಿಗೆ ಬಂದರು. ಅವರು ತಮ್ಮ ಉಡಿಯಲ್ಲಿದ್ದ ಕಾಂಗ್ರೆಸ್ ಟಿಕೆಟ್ ಅನ್ನು ಸಮಾಜಸೇವಕ ರಾಜೀವ್ ಗೌಡ ಅವರಿಗೆ ನೀಡಿದ್ದರು.</p>.<p>ಆ ಸಂದರ್ಭದಲ್ಲಿ ಮುನಿಯಪ್ಪ ನೀಡಿದ್ದ ಹೇಳಿಕೆ ಚರ್ಚೆಗೆ ಕಾರಣವಾಗಿತ್ತು. ₹ 30 ಕೋಟಿ ನೀಡಲು ರಾಜೀವ್ ಗೌಡ ಬಂದಿದ್ದರು. ಅದನ್ನು ನಿರಾಕರಿಸಿದೆ ಎಂದು ಮುನಿಯಪ್ಪ ಹೇಳಿದ್ದರು. ಆ ಮಾತು ಹೇಳಿದ ಸ್ವಲ್ಪ ದಿನಕ್ಕೆ ರಾಜೀವ್ ಗೌಡ ಪರ ವಾಲಿದ್ದರು.</p>.<p>ಇನ್ನೊಬ್ಬ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಂಜಿನಪ್ಪ ಪುಟ್ಟು ಪಕ್ಷೇತರರಾಗಿ ಸ್ಪರ್ಧಿಸಿದರು. ಪುಟ್ಟು ಆಂಜನಿನಪ್ಪ, ವಿ.ಮುನಿಯಪ್ಪ ಮತ್ತು ರಾಜೀವ್ ಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು.</p>.<p>2023 ರ ವಿಧಾನಸಭೆ ಚುನಾವಣೆಯಲ್ಲಿ 52,160 ಮತಗಳನ್ನು ಪಡೆದರು. 2018ರ ಚುನಾವಣೆಯಲ್ಲಿಯೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು ಪುಟ್ಟು ಆಂಜನಪ್ಪ. ಆಗಲೂ ಟಿಕೆಟ್ ಸಿಗದೆ ಪಕ್ಷೇತರ ಅಭ್ಯರ್ಥಿ ಆಗಿ ಸ್ಪರ್ಧಿಸಿದ್ದರು. 10,986 ಮತಗಳನ್ನು ಪಡೆದಿದ್ದರು</p>.<p>2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ 36,157 ಮತಗಳನ್ನು ಪಡೆದರು. ಕಾಂಗ್ರೆಸ್ ವಿರುದ್ಧದ ವಾಗ್ದಾಳಿ ಹಾಗೂ ಬಂಡಾಯದ ಕಾರಣ ಪುಟ್ಟು ಅಂಜಿನಪ್ಪ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿತ್ತು. </p>.<p>ಆ ನಂತರ ವಿ.ಮುನಿಯಪ್ಪ ಶಿಡ್ಲಘಟ್ಟ ಕಾಂಗ್ರೆಸ್ನಿಂದ ದೂರವಾದರು. ಪುಟ್ಟು ಆಂಜನಪ್ಪ ಅವರನ್ನು ಉಚ್ಛಾಟಿಸಲಾಯಿತು. ಈ ಎಲ್ಲ ಬೆಳವಣಿಗೆಳ ಪರಿಣಾಮ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ರಾಜೀವ್ ಗೌಡ ಅವರು ತಮ್ಮ ಪತ್ನಿಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿಸಿದರು. </p>.<p>ಆದರೆ ಈಗ ಪುಟ್ಟು ಆಂಜನಪ್ಪ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ವಿ.ಮುನಿಯಪ್ಪ ರಾಜ್ಯ ಉಪಾಧ್ಯಕ್ಷರಾಗಿದ್ದಾರೆ. ಈ ಎಲ್ಲ ಬೆಳವಣಿಗೆಗಳು ಶಿಡ್ಲಘಟ್ಟ ಕಾಂಗ್ರೆಸ್ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾಗಿದೆ.</p>.<p>ಪುಟ್ಟು ಆಂಜನಪ್ಪ ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳುವುದನ್ನು ವಿರೋಧಿಸಿ ರಾಜೀವ್ ಗೌಡ ಬೆಂಬಲಿಗರು ಪ್ರತಿಭಟನೆ ಸಹ ನಡೆಸಿದ್ದರು. ಈಗ ಶಿಡ್ಲಘಟ್ಟ ಕಾಂಗ್ರೆಸ್ ಕದಡಿದ ನೀರು ಎನ್ನುವಂತೆ ಆಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಸಕ್ರಿಯ ರಾಜಕೀಯದಿಂದ ನಿವೃತ್ತರಾಗಿದ್ದ ಮಾಜಿ ಶಾಸಕ ವಿ.ಮುನಿಯಪ್ಪ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಜವಾಬ್ದಾರಿ ನೀಡಲಾಗಿದೆ. ಮತ್ತೊಂದು ಕಡೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದ ಪುಟ್ಟು ಆಂಜನಪ್ಪ ಅವರನ್ನು ಮರಳಿ ಕೈ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. </p>.<p>ಈ ಮೂಲಕ ಶಿಡ್ಲಘಟ್ಟ ಕ್ಷೇತ್ರದ ಕಾಂಗ್ರೆಸ್ ರಾಜಕಾರಣದಲ್ಲಿ ನಾನಾ ಚರ್ಚೆಗಳು ಗರಿಗೆದರಿವೆ. ಅಲ್ಲೋಲ ಕಲ್ಲೋಲ ಎನ್ನುವ ಸ್ಥಿತಿ ಎದುರಾಗಿದೆ. ಈ ಎಲ್ಲ ಬೆಳವಣಿಗೆಗಳು ಮುಖಂಡ ರಾಜೀವ್ ಗೌಡ ಅಸಮಾಧಾನಕ್ಕೆ ಕಾರಣವಾಗಿದೆ.</p>.<p>ಕಳೆದ ವಿಧಾನಸಭೆ ಚುನಾವಣೆಯಲ್ಲಿ ವಿ.ಮುನಿಯಪ್ಪ ಸ್ಪರ್ಧಿಸಲಿಲ್ಲ. ರಾಜಕೀಯವಾಗಿ ನಿವೃತ್ತ ಎನ್ನುವ ಸ್ಥಿತಿಗೆ ಬಂದರು. ಅವರು ತಮ್ಮ ಉಡಿಯಲ್ಲಿದ್ದ ಕಾಂಗ್ರೆಸ್ ಟಿಕೆಟ್ ಅನ್ನು ಸಮಾಜಸೇವಕ ರಾಜೀವ್ ಗೌಡ ಅವರಿಗೆ ನೀಡಿದ್ದರು.</p>.<p>ಆ ಸಂದರ್ಭದಲ್ಲಿ ಮುನಿಯಪ್ಪ ನೀಡಿದ್ದ ಹೇಳಿಕೆ ಚರ್ಚೆಗೆ ಕಾರಣವಾಗಿತ್ತು. ₹ 30 ಕೋಟಿ ನೀಡಲು ರಾಜೀವ್ ಗೌಡ ಬಂದಿದ್ದರು. ಅದನ್ನು ನಿರಾಕರಿಸಿದೆ ಎಂದು ಮುನಿಯಪ್ಪ ಹೇಳಿದ್ದರು. ಆ ಮಾತು ಹೇಳಿದ ಸ್ವಲ್ಪ ದಿನಕ್ಕೆ ರಾಜೀವ್ ಗೌಡ ಪರ ವಾಲಿದ್ದರು.</p>.<p>ಇನ್ನೊಬ್ಬ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಂಜಿನಪ್ಪ ಪುಟ್ಟು ಪಕ್ಷೇತರರಾಗಿ ಸ್ಪರ್ಧಿಸಿದರು. ಪುಟ್ಟು ಆಂಜನಿನಪ್ಪ, ವಿ.ಮುನಿಯಪ್ಪ ಮತ್ತು ರಾಜೀವ್ ಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು.</p>.<p>2023 ರ ವಿಧಾನಸಭೆ ಚುನಾವಣೆಯಲ್ಲಿ 52,160 ಮತಗಳನ್ನು ಪಡೆದರು. 2018ರ ಚುನಾವಣೆಯಲ್ಲಿಯೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು ಪುಟ್ಟು ಆಂಜನಪ್ಪ. ಆಗಲೂ ಟಿಕೆಟ್ ಸಿಗದೆ ಪಕ್ಷೇತರ ಅಭ್ಯರ್ಥಿ ಆಗಿ ಸ್ಪರ್ಧಿಸಿದ್ದರು. 10,986 ಮತಗಳನ್ನು ಪಡೆದಿದ್ದರು</p>.<p>2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ 36,157 ಮತಗಳನ್ನು ಪಡೆದರು. ಕಾಂಗ್ರೆಸ್ ವಿರುದ್ಧದ ವಾಗ್ದಾಳಿ ಹಾಗೂ ಬಂಡಾಯದ ಕಾರಣ ಪುಟ್ಟು ಅಂಜಿನಪ್ಪ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿತ್ತು. </p>.<p>ಆ ನಂತರ ವಿ.ಮುನಿಯಪ್ಪ ಶಿಡ್ಲಘಟ್ಟ ಕಾಂಗ್ರೆಸ್ನಿಂದ ದೂರವಾದರು. ಪುಟ್ಟು ಆಂಜನಪ್ಪ ಅವರನ್ನು ಉಚ್ಛಾಟಿಸಲಾಯಿತು. ಈ ಎಲ್ಲ ಬೆಳವಣಿಗೆಳ ಪರಿಣಾಮ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ರಾಜೀವ್ ಗೌಡ ಅವರು ತಮ್ಮ ಪತ್ನಿಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿಸಿದರು. </p>.<p>ಆದರೆ ಈಗ ಪುಟ್ಟು ಆಂಜನಪ್ಪ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ವಿ.ಮುನಿಯಪ್ಪ ರಾಜ್ಯ ಉಪಾಧ್ಯಕ್ಷರಾಗಿದ್ದಾರೆ. ಈ ಎಲ್ಲ ಬೆಳವಣಿಗೆಗಳು ಶಿಡ್ಲಘಟ್ಟ ಕಾಂಗ್ರೆಸ್ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾಗಿದೆ.</p>.<p>ಪುಟ್ಟು ಆಂಜನಪ್ಪ ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳುವುದನ್ನು ವಿರೋಧಿಸಿ ರಾಜೀವ್ ಗೌಡ ಬೆಂಬಲಿಗರು ಪ್ರತಿಭಟನೆ ಸಹ ನಡೆಸಿದ್ದರು. ಈಗ ಶಿಡ್ಲಘಟ್ಟ ಕಾಂಗ್ರೆಸ್ ಕದಡಿದ ನೀರು ಎನ್ನುವಂತೆ ಆಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>