<p><strong>ಶಿಡ್ಲಘಟ್ಟ:</strong> ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷರಾಗಿ ಎ.ಶಶಿಕುಮಾರ್ ಆಯ್ಕೆಯಾಗಿದ್ದಾರೆ.</p>.<p>ಶಿಡ್ಲಘಟ್ಟದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿ ಸೊ.ಸು.ನಾಗೇಂದ್ರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ನವಮೋಹನ್, ದೇವರಾಜ್ ನೇತೃತ್ವದಲ್ಲಿ ಭಾನುವಾರ ಪತ್ರಕರ್ತರ ಸಂಘದ ಅಧ್ಯಕ್ಷರ ಆಯ್ಕೆ ಸಂಬಂಧ ಚುನಾವಣೆ ನಡೆಯಿತು.</p>.<p>ಚುನಾವಣೆಯಲ್ಲಿ ಎ.ಶಶಿಕುಮಾರ್ 10 ಮತ, ಎನ್.ಇ.ಜಗದೀಶ್ ಬಾಬು 7 ಮತ ಪಡೆದರು.</p>.<p>ಉಪಾಧ್ಯಕ್ಷರಾಗಿ ಎನ್.ಇ.ಜಗದೀಶ್ ಬಾಬು, ಪ್ರಧಾನ ಕಾರ್ಯದರ್ಶಿ ಎಸ್.ಮಂಜುನಾಥ್, ಕಾರ್ಯದರ್ಶಿ ಬಿ.ವಿ.ಲೋಕೇಶ್, ಖಜಾಂಚಿ ವೆಂಕಟೇಶ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿ.ಇ.ಕರಗಪ್ಪ, ಇ.ನರಸಿಂಹಗೌಡ, ಎನ್.ನಾರಾಯಣಸ್ವಾಮಿ, ಎನ್.ಮಹೇಶ್, ಎನ್.ವಿ.ಶಿವಕುಮಾರ್, ಆರ್.ರಾಜೇಶ್ ಅವಿರೋಧವಾಗಿ ಆಯ್ಕೆಯಾದರು.</p>.<p>ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜಪ್ಪ, ಉಪಾಧ್ಯಕ್ಷ ಮುಬಶಿರ್ ಅಹಮ್ಮದ್, ಜಿಲ್ಲಾ ಕಾರ್ಯದರ್ಶಿ ಡಿ.ಜಿ.ಮಲ್ಲಿಕಾರ್ಜುನ, ಕಾರ್ಯಕಾರಿ ಸಮಿತಿ ಸದಸ್ಯ ಕೆ.ವಿ.ಮುನೇಗೌಡ, ಛಾಯಾ ರಮೇಶ್, ಮಿಥುನ್ ಕುಮಾರ್ ಹಾಗೂ ತಮೀಮ್ ಪಾಷ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷರಾಗಿ ಎ.ಶಶಿಕುಮಾರ್ ಆಯ್ಕೆಯಾಗಿದ್ದಾರೆ.</p>.<p>ಶಿಡ್ಲಘಟ್ಟದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿ ಸೊ.ಸು.ನಾಗೇಂದ್ರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ನವಮೋಹನ್, ದೇವರಾಜ್ ನೇತೃತ್ವದಲ್ಲಿ ಭಾನುವಾರ ಪತ್ರಕರ್ತರ ಸಂಘದ ಅಧ್ಯಕ್ಷರ ಆಯ್ಕೆ ಸಂಬಂಧ ಚುನಾವಣೆ ನಡೆಯಿತು.</p>.<p>ಚುನಾವಣೆಯಲ್ಲಿ ಎ.ಶಶಿಕುಮಾರ್ 10 ಮತ, ಎನ್.ಇ.ಜಗದೀಶ್ ಬಾಬು 7 ಮತ ಪಡೆದರು.</p>.<p>ಉಪಾಧ್ಯಕ್ಷರಾಗಿ ಎನ್.ಇ.ಜಗದೀಶ್ ಬಾಬು, ಪ್ರಧಾನ ಕಾರ್ಯದರ್ಶಿ ಎಸ್.ಮಂಜುನಾಥ್, ಕಾರ್ಯದರ್ಶಿ ಬಿ.ವಿ.ಲೋಕೇಶ್, ಖಜಾಂಚಿ ವೆಂಕಟೇಶ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿ.ಇ.ಕರಗಪ್ಪ, ಇ.ನರಸಿಂಹಗೌಡ, ಎನ್.ನಾರಾಯಣಸ್ವಾಮಿ, ಎನ್.ಮಹೇಶ್, ಎನ್.ವಿ.ಶಿವಕುಮಾರ್, ಆರ್.ರಾಜೇಶ್ ಅವಿರೋಧವಾಗಿ ಆಯ್ಕೆಯಾದರು.</p>.<p>ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜಪ್ಪ, ಉಪಾಧ್ಯಕ್ಷ ಮುಬಶಿರ್ ಅಹಮ್ಮದ್, ಜಿಲ್ಲಾ ಕಾರ್ಯದರ್ಶಿ ಡಿ.ಜಿ.ಮಲ್ಲಿಕಾರ್ಜುನ, ಕಾರ್ಯಕಾರಿ ಸಮಿತಿ ಸದಸ್ಯ ಕೆ.ವಿ.ಮುನೇಗೌಡ, ಛಾಯಾ ರಮೇಶ್, ಮಿಥುನ್ ಕುಮಾರ್ ಹಾಗೂ ತಮೀಮ್ ಪಾಷ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>