<p><strong>ಶಿಡ್ಲಘಟ್ಟ (ಚಿಕ್ಕಬಳ್ಳಾಪುರ)</strong>: ಕೈಗಾರಿಕೆ ವಲಯ ಸ್ಥಾಪನೆಗಾಗಿ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2,823 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದ ನಂತರ ಸೋಮವಾರ ಜಮೀನು ಪರಿಶೀಲನೆಗೆ ತೆರಳಿದ್ದ ಅಧಿಕಾರಿಗಳ ತಂಡವನ್ನು ಅಡ್ಡಗಟ್ಟಿದ ರೈತರು ಗ್ರಾಮದೊಳಗೆ ಪ್ರವೇಶಿಸಲು ಬಿಡದೆ ಘೇರಾವ್ ಹಾಕಿದ್ದಾರೆ.</p><p>ಪೊಲೀಸ್ ಭದ್ರತೆಯಲ್ಲಿ ಜಂಗಮಕೋಟೆ ಹೋಬಳಿಗೆ ಜಮೀನು ಪರಿಶೀಲನೆಗೆ ತೆರಳಿದ್ದ ಕೆಐಎಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿ ಹರಿಶಿಲ್ಪಾ ನೇತೃತ್ವದ ಅಧಿಕಾರಿಗಳ ತಂಡ ಕೆಲವು ಕಡೆಗಳಲ್ಲಿ ಗ್ರಾಮಸ್ಥರು ಹಾಗೂ</p><p>ರೈತರ ಆಕ್ರೋಶದ ಬಿಸಿ ಎದುರಿಸಬೇಕಾಯಿತು. </p><p>ಯಣ್ಣಂಗೂರು ಗ್ರಾಮಕ್ಕೆ ಹೋದ ಅಧಿಕಾರಿಗಳ ತಂಡವನ್ನು ಊರ ಪ್ರವೇಶ ದ್ವಾರದಲ್ಲಿಯೇ ತಡೆದ ರೈತರು ರಸ್ತೆಗೆ ಅಡ್ಡಲಾಗಿ ಕುಳಿತರು. ‘ಗ್ರಾಮದೊಳಗೆ ಬಿಡುವುದಿಲ್ಲ. ಮರಳಿ ಹೋಗಿ’ ಎಂದು ಅಧಿಕಾರಿಗಳು ಮತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪೊಲೀಸರ ಮನವೊಲಿಕೆಗೂ ರೈತರು ಪಟ್ಟು ಸಡಿಲಿಸಲಿಲ್ಲ.</p><p>ಇದಕ್ಕೆ ಪ್ರತಿಯಾಗಿ ಮತ್ತೊಂದು ರೈತರ ತಂಡ ‘ಭೂಮಿ ಕೊಡಲು ನಾವು ಸಿದ್ಧ. ಅಧಿಕಾರಿಗಳು ಬಂದು ಸ್ಥಳ ಪರಿಶೀಲಿಸಲಿ. ನಮ್ಮದೇನೂ ಅಭ್ಯಂತರ ಇಲ್ಲ’ ಎಂದು ರಸ್ತೆಗಿಳಿದರು. </p><p>ಪರಿಸ್ಥಿತಿಯ ಗಂಭೀರತೆ ಅರಿತ ಪೊಲೀಸರು, ಅಧಿಕಾರಿಗಳನ್ನು ಜಮೀನುಗಳಿಗೆ ಕರೆದೊಯ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ (ಚಿಕ್ಕಬಳ್ಳಾಪುರ)</strong>: ಕೈಗಾರಿಕೆ ವಲಯ ಸ್ಥಾಪನೆಗಾಗಿ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2,823 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದ ನಂತರ ಸೋಮವಾರ ಜಮೀನು ಪರಿಶೀಲನೆಗೆ ತೆರಳಿದ್ದ ಅಧಿಕಾರಿಗಳ ತಂಡವನ್ನು ಅಡ್ಡಗಟ್ಟಿದ ರೈತರು ಗ್ರಾಮದೊಳಗೆ ಪ್ರವೇಶಿಸಲು ಬಿಡದೆ ಘೇರಾವ್ ಹಾಕಿದ್ದಾರೆ.</p><p>ಪೊಲೀಸ್ ಭದ್ರತೆಯಲ್ಲಿ ಜಂಗಮಕೋಟೆ ಹೋಬಳಿಗೆ ಜಮೀನು ಪರಿಶೀಲನೆಗೆ ತೆರಳಿದ್ದ ಕೆಐಎಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿ ಹರಿಶಿಲ್ಪಾ ನೇತೃತ್ವದ ಅಧಿಕಾರಿಗಳ ತಂಡ ಕೆಲವು ಕಡೆಗಳಲ್ಲಿ ಗ್ರಾಮಸ್ಥರು ಹಾಗೂ</p><p>ರೈತರ ಆಕ್ರೋಶದ ಬಿಸಿ ಎದುರಿಸಬೇಕಾಯಿತು. </p><p>ಯಣ್ಣಂಗೂರು ಗ್ರಾಮಕ್ಕೆ ಹೋದ ಅಧಿಕಾರಿಗಳ ತಂಡವನ್ನು ಊರ ಪ್ರವೇಶ ದ್ವಾರದಲ್ಲಿಯೇ ತಡೆದ ರೈತರು ರಸ್ತೆಗೆ ಅಡ್ಡಲಾಗಿ ಕುಳಿತರು. ‘ಗ್ರಾಮದೊಳಗೆ ಬಿಡುವುದಿಲ್ಲ. ಮರಳಿ ಹೋಗಿ’ ಎಂದು ಅಧಿಕಾರಿಗಳು ಮತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪೊಲೀಸರ ಮನವೊಲಿಕೆಗೂ ರೈತರು ಪಟ್ಟು ಸಡಿಲಿಸಲಿಲ್ಲ.</p><p>ಇದಕ್ಕೆ ಪ್ರತಿಯಾಗಿ ಮತ್ತೊಂದು ರೈತರ ತಂಡ ‘ಭೂಮಿ ಕೊಡಲು ನಾವು ಸಿದ್ಧ. ಅಧಿಕಾರಿಗಳು ಬಂದು ಸ್ಥಳ ಪರಿಶೀಲಿಸಲಿ. ನಮ್ಮದೇನೂ ಅಭ್ಯಂತರ ಇಲ್ಲ’ ಎಂದು ರಸ್ತೆಗಿಳಿದರು. </p><p>ಪರಿಸ್ಥಿತಿಯ ಗಂಭೀರತೆ ಅರಿತ ಪೊಲೀಸರು, ಅಧಿಕಾರಿಗಳನ್ನು ಜಮೀನುಗಳಿಗೆ ಕರೆದೊಯ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>