ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಇಇ ಮಲ್ಲಿಕಾರ್ಜುನ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಮಧುಗಿರಿಯಿಂದ ಪ್ರಾರಂಭವಾಗಿ ಗೌರಿಬಿದನೂರು, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಚಿಂತಾಮಣಿ, ಶ್ರೀನಿವಾಸಪುರ, ಮುಳಬಾಗಿಲು ಗಡಿಯವರೆಗೆ ಚತುಷ್ಪಥ ರಸ್ತೆ ಮಾಡಲು ಅಳತೆ ಮತ್ತು ಸರ್ವೆ ಕಾರ್ಯ ಮುಗಿದಿದೆ. ಶಿಡ್ಲಘಟ್ಟ ನಗರದಲ್ಲಿ ಬೈಪಾಸ್ ರಸ್ತೆಗೆ ಜಾಗ ಗುರುತಿಸಿದ ನಂತರ ಸ್ಥಳೀಯ ಶಾಸಕರ ಗಮನಕ್ಕೆ ತಂದ ನಂತರ ಮುಂದಿನ ಕಾಮಗಾರಿ ನಡೆಸಲು ಮುಂದಾಗುತ್ತೇವೆ ಎಂದರು.