<p><strong>ಶಿಡ್ಲಘಟ್ಟ:</strong> ತಾಲ್ಲೂಕಿನ ಜಂಗಮಕೋಟೆ ಕ್ರಾಸ್ನಲ್ಲಿನ ಜಂಗಮಕೋಟೆ ರೇಷ್ಮೆ ರೈತ ಉತ್ಪಾದಕರ ಕಂಪನಿಗೆ ನಬಾರ್ಡ್ನ ಜಿಲ್ಲಾ ಪ್ರಾದೇಶಿಕ ಉಪ ವ್ಯವಸ್ಥಾಪಕಿ ಆರತಿ ಶುಕ್ಲಾ ಗುರುವಾರ ಭೇಟಿ ನೀಡಿದರು. </p>.<p>ಈ ವೇಳೆ ಮಾತನಾಡಿದ ಅವರು, ‘ಈ ಭಾಗದಲ್ಲಿ ಶೀಘ್ರವೇ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ಆರಂಭವಾಗಲಿದೆ. ಈಗ ಉತ್ಪಾದನೆಯಾಗುತ್ತಿರುವುದಕ್ಕಿಂತಲೂ ಹೆಚ್ಚಿನ ಪ್ರಮಾಣದ ರೇಷ್ಮೆಗೂಡು ಉತ್ಪಾದನೆಯಾಗಬೇಕಿದೆ. ಈ ನಿಟ್ಟಿನಲ್ಲಿ ರೇಷ್ಮೆ ಬೆಳೆಯುವುದಕ್ಕೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು’ ಎಂದು ಹೇಳಿದರು. </p>.<p>ಈ ಭಾಗದಲ್ಲಿ ಹೆಚ್ಚು ಪ್ರಮಾಣದ ದಾಳಿಂಬೆ, ಹೂವು, ಹಣ್ಣು ತರಕಾರಿ ಬೆಳೆಯಲಾಗುತ್ತಿದೆ. ಇದರಿಂದಾಗಿ ಹಿಪ್ಪುನೇರಳೆ ಸೊಪ್ಪು ಬೆಳೆ ಮತ್ತು ರೇಷ್ಮೆಗೂಡು ಉತ್ಪಾದನೆ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದೆ. ವರ್ಷಗಳು ಕಳೆದಂತೆ ರೇಷ್ಮೆಗೂಡು ಉತ್ಪಾದನೆ ಪ್ರಮಾಣ ಕುಸಿಯುತ್ತಿದೆ ಎಂದು ಹೇಳಿದರು. </p>.<p>ದ್ವಿತಳಿ ರೇಷ್ಮೆಗೂಡು ಬೆಳೆಯುವ ಪ್ರಮಾಣ ಹೆಚ್ಚಿಸಲು ಸರ್ಕಾರ, ಇಲಾಖೆ ಜತೆಗೆ ರೈತ ಕಂಪನಿಗಳು ಕೂಡ ಶ್ರಮಿಸಬೇಕು ಎಂದು ಮನವಿ ಮಾಡಿದರು.</p>.<p>ಜೆ.ವೆಂಕಟಾಪುರಕ್ಕೆ ಭೇಟಿ ನೀಡಿದ್ದ ಅವರು ಅಲ್ಲಿ ರೇಷ್ಮೆನೂಲು ನೇಯ್ಗೆ ಚಟುವಟಿಕೆಗಳನ್ನು ವೀಕ್ಷಿಸಿ ನೇಯ್ಗೆಕಾರರ ಸಮಸ್ಯೆಗಳು, ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಚರ್ಚಿಸಿದರು.</p>.<p>ನಬಾರ್ಡ್ನ ಹರ್ಷಿತ, ಮಂಡ್ಯದ ವಿಕಸನ ಸಂಸ್ಥೆ ಮುಖ್ಯ ಸಂಯೋಜಕ ಕೆಂಪಯ್ಯ, ಜ್ಯೋತಿ, ಲವಕಮಾರ್, ರೈತ ಕಂಪನಿ ಅಧ್ಯಕ್ಷ ಭಕ್ತರಹಳ್ಳಿ ಚಿದಾನಂದಮೂರ್ತಿ, ನಿರ್ದೇಶಕ ನಾಗಮಂಗಲ ತಮ್ಮಣ್ಣ, ಹೊಸಪೇಟೆ ಮಂಜುನಾಥ್ ಗೌಡ, ಕೆ.ಕುಮಾರ್, ಎಸ್.ಜಿ.ನಾರಾಯಣಸ್ವಾಮಿ, ಮುರಳಿ, ಕಂಪನಿ ಸಿಇಒ ಸುರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ತಾಲ್ಲೂಕಿನ ಜಂಗಮಕೋಟೆ ಕ್ರಾಸ್ನಲ್ಲಿನ ಜಂಗಮಕೋಟೆ ರೇಷ್ಮೆ ರೈತ ಉತ್ಪಾದಕರ ಕಂಪನಿಗೆ ನಬಾರ್ಡ್ನ ಜಿಲ್ಲಾ ಪ್ರಾದೇಶಿಕ ಉಪ ವ್ಯವಸ್ಥಾಪಕಿ ಆರತಿ ಶುಕ್ಲಾ ಗುರುವಾರ ಭೇಟಿ ನೀಡಿದರು. </p>.<p>ಈ ವೇಳೆ ಮಾತನಾಡಿದ ಅವರು, ‘ಈ ಭಾಗದಲ್ಲಿ ಶೀಘ್ರವೇ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ಆರಂಭವಾಗಲಿದೆ. ಈಗ ಉತ್ಪಾದನೆಯಾಗುತ್ತಿರುವುದಕ್ಕಿಂತಲೂ ಹೆಚ್ಚಿನ ಪ್ರಮಾಣದ ರೇಷ್ಮೆಗೂಡು ಉತ್ಪಾದನೆಯಾಗಬೇಕಿದೆ. ಈ ನಿಟ್ಟಿನಲ್ಲಿ ರೇಷ್ಮೆ ಬೆಳೆಯುವುದಕ್ಕೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು’ ಎಂದು ಹೇಳಿದರು. </p>.<p>ಈ ಭಾಗದಲ್ಲಿ ಹೆಚ್ಚು ಪ್ರಮಾಣದ ದಾಳಿಂಬೆ, ಹೂವು, ಹಣ್ಣು ತರಕಾರಿ ಬೆಳೆಯಲಾಗುತ್ತಿದೆ. ಇದರಿಂದಾಗಿ ಹಿಪ್ಪುನೇರಳೆ ಸೊಪ್ಪು ಬೆಳೆ ಮತ್ತು ರೇಷ್ಮೆಗೂಡು ಉತ್ಪಾದನೆ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದೆ. ವರ್ಷಗಳು ಕಳೆದಂತೆ ರೇಷ್ಮೆಗೂಡು ಉತ್ಪಾದನೆ ಪ್ರಮಾಣ ಕುಸಿಯುತ್ತಿದೆ ಎಂದು ಹೇಳಿದರು. </p>.<p>ದ್ವಿತಳಿ ರೇಷ್ಮೆಗೂಡು ಬೆಳೆಯುವ ಪ್ರಮಾಣ ಹೆಚ್ಚಿಸಲು ಸರ್ಕಾರ, ಇಲಾಖೆ ಜತೆಗೆ ರೈತ ಕಂಪನಿಗಳು ಕೂಡ ಶ್ರಮಿಸಬೇಕು ಎಂದು ಮನವಿ ಮಾಡಿದರು.</p>.<p>ಜೆ.ವೆಂಕಟಾಪುರಕ್ಕೆ ಭೇಟಿ ನೀಡಿದ್ದ ಅವರು ಅಲ್ಲಿ ರೇಷ್ಮೆನೂಲು ನೇಯ್ಗೆ ಚಟುವಟಿಕೆಗಳನ್ನು ವೀಕ್ಷಿಸಿ ನೇಯ್ಗೆಕಾರರ ಸಮಸ್ಯೆಗಳು, ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಚರ್ಚಿಸಿದರು.</p>.<p>ನಬಾರ್ಡ್ನ ಹರ್ಷಿತ, ಮಂಡ್ಯದ ವಿಕಸನ ಸಂಸ್ಥೆ ಮುಖ್ಯ ಸಂಯೋಜಕ ಕೆಂಪಯ್ಯ, ಜ್ಯೋತಿ, ಲವಕಮಾರ್, ರೈತ ಕಂಪನಿ ಅಧ್ಯಕ್ಷ ಭಕ್ತರಹಳ್ಳಿ ಚಿದಾನಂದಮೂರ್ತಿ, ನಿರ್ದೇಶಕ ನಾಗಮಂಗಲ ತಮ್ಮಣ್ಣ, ಹೊಸಪೇಟೆ ಮಂಜುನಾಥ್ ಗೌಡ, ಕೆ.ಕುಮಾರ್, ಎಸ್.ಜಿ.ನಾರಾಯಣಸ್ವಾಮಿ, ಮುರಳಿ, ಕಂಪನಿ ಸಿಇಒ ಸುರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>