<p><strong>ಶಿಡ್ಲಘಟ್ಟ</strong>: ತಾಲ್ಲೂಕಿನ ವರದನಾಯಕನಹಳ್ಲಿ ಗ್ರಾಮದಲ್ಲಿ ಮಂಗಳವಾರ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯ ಉತ್ತರ ವಲಯದ ವಿದ್ಯಾರ್ಥಿಗಳಿಂದ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಉದ್ಘಾಟನೆಯನ್ನು ನೆರವೇರಿಸಲಾಯಿತು.</p>.<p>ರೊಟೇರಿಯನ್ ಕ್ಲಬ್ ತರಬೇತುದಾರ ಅರಣ್ ಕುಮಾರ್ ಜಯದೇವಯ್ಯ ಮಾತನಾಡಿ, ‘ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳು ವಿದ್ಯಾರ್ಥಿಗಳಿಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಆಸಕ್ತಿ ಬೆಳೆಸುತ್ತವೆ. ಗ್ರಾಮೀಣ ಜೀವನ ವ್ಯವಸ್ಥೆಯ ಪರಿಚಯ ಮಾಡಿಕೊಡಲು ಉತ್ತಮ ವೇದಿಕೆಯಾಗಿವೆ’ ಎಂದು ಹೇಳಿದರು. </p>.<p>ಶಿಕ್ಷಣ ಪಡೆದು ಉದ್ಯೋಗ ಹಿಡಿಯುವುದೇ ಜೀವನದ ಗುರಿಯಾಗಬಾರದು. ಸಮಾಜಮುಖಿ ವ್ಯಕ್ತಿತ್ವ ರೂಢಿಸಿಕೊಂಡು ಸಮಾಜಮುಖಿಯಾಗಿ ಜೀವಿಸುವುದು ಪ್ರತಿ ಪ್ರಜೆಯ ಜವಾಬ್ದಾರಿಯಾಗಬೇಕು. ಎನ್ಎಸ್ಎಸ್ ಶಿಬಿರವು ಜನರಲ್ಲಿ ಸಮಾಜಮುಖಿ ವ್ಯಕ್ತಿತ್ವ ಬೆಳೆಸುತ್ತವೆ ಎಂದರು.</p>.<p>ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯ ಉತ್ತರ ವಲಯ ಎನ್.ಎಸ್.ಎಸ್ ಅಧಿಕಾರಿ ಪ್ರೊ.ಎಂ.ಜೆ ಶಂಕರ್ ಮಾತನಾಡಿ, ಏಳು ದಿನಗಳ ಶಿಬಿರದಲ್ಲಿ ನಡೆಯುವ ಕಾರ್ಯಗಳ ಬಗ್ಗೆ ವಿವರಿಸಿದರು.</p>.<p>ಈ ವೇಳೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿದ್ಯಾಲಯದ ಚಿಂತಾಮಣಿ ತಾಲ್ಲೂಕು ಉಸ್ತುವಾರಿ ರಾಜಯೋಗಿನಿ ಬಿ.ಕೆ.ಶಾಮಲ, ಉಪನ್ಯಾಸಕ ಪ್ರೊ.ಕೇಶವ, ಅಶ್ವಿನಿ, ಲೇಖನ, ವಿ.ಎಸ್.ಗೋಪಾಲಕೃಷ್ಣ, ಶಾಮಲ. ಜಿ, ಎಸ್ಡಿಎಂಸಿ ಅಧ್ಯಕ್ಷ ಗಂಗಾಧರ್, ಮುನಿರೆಡ್ಡಿ, ಈಧರೆ ಪ್ರಕಾಶ್, ಗೋಪಾಲಕೃಷ್ಣ, ಶಿವು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ತಾಲ್ಲೂಕಿನ ವರದನಾಯಕನಹಳ್ಲಿ ಗ್ರಾಮದಲ್ಲಿ ಮಂಗಳವಾರ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯ ಉತ್ತರ ವಲಯದ ವಿದ್ಯಾರ್ಥಿಗಳಿಂದ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಉದ್ಘಾಟನೆಯನ್ನು ನೆರವೇರಿಸಲಾಯಿತು.</p>.<p>ರೊಟೇರಿಯನ್ ಕ್ಲಬ್ ತರಬೇತುದಾರ ಅರಣ್ ಕುಮಾರ್ ಜಯದೇವಯ್ಯ ಮಾತನಾಡಿ, ‘ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳು ವಿದ್ಯಾರ್ಥಿಗಳಿಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಆಸಕ್ತಿ ಬೆಳೆಸುತ್ತವೆ. ಗ್ರಾಮೀಣ ಜೀವನ ವ್ಯವಸ್ಥೆಯ ಪರಿಚಯ ಮಾಡಿಕೊಡಲು ಉತ್ತಮ ವೇದಿಕೆಯಾಗಿವೆ’ ಎಂದು ಹೇಳಿದರು. </p>.<p>ಶಿಕ್ಷಣ ಪಡೆದು ಉದ್ಯೋಗ ಹಿಡಿಯುವುದೇ ಜೀವನದ ಗುರಿಯಾಗಬಾರದು. ಸಮಾಜಮುಖಿ ವ್ಯಕ್ತಿತ್ವ ರೂಢಿಸಿಕೊಂಡು ಸಮಾಜಮುಖಿಯಾಗಿ ಜೀವಿಸುವುದು ಪ್ರತಿ ಪ್ರಜೆಯ ಜವಾಬ್ದಾರಿಯಾಗಬೇಕು. ಎನ್ಎಸ್ಎಸ್ ಶಿಬಿರವು ಜನರಲ್ಲಿ ಸಮಾಜಮುಖಿ ವ್ಯಕ್ತಿತ್ವ ಬೆಳೆಸುತ್ತವೆ ಎಂದರು.</p>.<p>ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯ ಉತ್ತರ ವಲಯ ಎನ್.ಎಸ್.ಎಸ್ ಅಧಿಕಾರಿ ಪ್ರೊ.ಎಂ.ಜೆ ಶಂಕರ್ ಮಾತನಾಡಿ, ಏಳು ದಿನಗಳ ಶಿಬಿರದಲ್ಲಿ ನಡೆಯುವ ಕಾರ್ಯಗಳ ಬಗ್ಗೆ ವಿವರಿಸಿದರು.</p>.<p>ಈ ವೇಳೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿದ್ಯಾಲಯದ ಚಿಂತಾಮಣಿ ತಾಲ್ಲೂಕು ಉಸ್ತುವಾರಿ ರಾಜಯೋಗಿನಿ ಬಿ.ಕೆ.ಶಾಮಲ, ಉಪನ್ಯಾಸಕ ಪ್ರೊ.ಕೇಶವ, ಅಶ್ವಿನಿ, ಲೇಖನ, ವಿ.ಎಸ್.ಗೋಪಾಲಕೃಷ್ಣ, ಶಾಮಲ. ಜಿ, ಎಸ್ಡಿಎಂಸಿ ಅಧ್ಯಕ್ಷ ಗಂಗಾಧರ್, ಮುನಿರೆಡ್ಡಿ, ಈಧರೆ ಪ್ರಕಾಶ್, ಗೋಪಾಲಕೃಷ್ಣ, ಶಿವು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>