<p><strong>ಶಿಡ್ಲಘಟ್ಟ:</strong> ನಂದಿನಿ ಹಾಲು, ಹಾಲಿನ ಉತ್ಪನ್ನಗಳನ್ನು ಜನರು ಹೆಚ್ಚಾಗಿ ಬಳಸಿ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಹಾಲು ಉತ್ಪಾದಕರು ಹಾಗೂ ಸಹಕಾರ ಸಂಘಗಳ ಉಳಿವಿಗೆ ಸಹಕರಿಸಬೇಕು ಎಂದು ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ತಿಳಿಸಿದರು.</p>.<p>ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ನಗರದ ಚಿಮುಲ್ ಶಿಬಿರ ಘಟಕದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಸೋಮವಾರ ಉಚಿತವಾಗಿ ನಂದಿನಿ ಗುಡ್ಲೈಫ್ ಹಾಲನ್ನು ವಿತರಿಸಿ ಅವರು ಮಾತನಾಡಿದರು.</p>.<p>‘ಉತ್ತಮ ಗುಣಮಟ್ಟದ ನಂದಿನಿ ಹಾಲನ್ನು ಎಲ್ಲರೂ ಬಳಸುವಂತಾಗಬೇಕು. ನಂದಿನಿ ಹಾಲಿನ ಖರೀದಿಯಿಂದ ಬರುವಂತಹ ಹಣವು ನೇರವಾಗಿ ಉತ್ಪಾದಕರಿಗೆ ತಲುಪುತ್ತದೆ ಹಾಗೂ ಸಹಕಾರ ಸಂಘಗಳು ಸಹ ಬಲವರ್ಧನೆಯಾಗುತ್ತವೆ’ ಎಂದರು.</p>.<p>ಚಿಮುಲ್ ನಿರ್ದೇಶಕ ಹುಜಗೂರು ರಾಮಯ್ಯ ಮಾತನಾಡಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಡಾ.ಮನೋಹರ್, ಶಿಬಿರ ಘಟಕದ ವ್ಯವಸ್ಥಾಪಕ ಡಾ.ರವಿಕಿರಣ್, ಅಧಿಕಾರಿಗಳಾದ ಜಯಚಂದ್ರ, ಎಂ.ಆರ್.ಮಂಜುನಾಥ್, ನರಸಿಂಹಯ್ಯ, ಡಿ.ಮಂಜುನಾಥ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-16-364842829</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ನಂದಿನಿ ಹಾಲು, ಹಾಲಿನ ಉತ್ಪನ್ನಗಳನ್ನು ಜನರು ಹೆಚ್ಚಾಗಿ ಬಳಸಿ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಹಾಲು ಉತ್ಪಾದಕರು ಹಾಗೂ ಸಹಕಾರ ಸಂಘಗಳ ಉಳಿವಿಗೆ ಸಹಕರಿಸಬೇಕು ಎಂದು ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ತಿಳಿಸಿದರು.</p>.<p>ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ನಗರದ ಚಿಮುಲ್ ಶಿಬಿರ ಘಟಕದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಸೋಮವಾರ ಉಚಿತವಾಗಿ ನಂದಿನಿ ಗುಡ್ಲೈಫ್ ಹಾಲನ್ನು ವಿತರಿಸಿ ಅವರು ಮಾತನಾಡಿದರು.</p>.<p>‘ಉತ್ತಮ ಗುಣಮಟ್ಟದ ನಂದಿನಿ ಹಾಲನ್ನು ಎಲ್ಲರೂ ಬಳಸುವಂತಾಗಬೇಕು. ನಂದಿನಿ ಹಾಲಿನ ಖರೀದಿಯಿಂದ ಬರುವಂತಹ ಹಣವು ನೇರವಾಗಿ ಉತ್ಪಾದಕರಿಗೆ ತಲುಪುತ್ತದೆ ಹಾಗೂ ಸಹಕಾರ ಸಂಘಗಳು ಸಹ ಬಲವರ್ಧನೆಯಾಗುತ್ತವೆ’ ಎಂದರು.</p>.<p>ಚಿಮುಲ್ ನಿರ್ದೇಶಕ ಹುಜಗೂರು ರಾಮಯ್ಯ ಮಾತನಾಡಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಡಾ.ಮನೋಹರ್, ಶಿಬಿರ ಘಟಕದ ವ್ಯವಸ್ಥಾಪಕ ಡಾ.ರವಿಕಿರಣ್, ಅಧಿಕಾರಿಗಳಾದ ಜಯಚಂದ್ರ, ಎಂ.ಆರ್.ಮಂಜುನಾಥ್, ನರಸಿಂಹಯ್ಯ, ಡಿ.ಮಂಜುನಾಥ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-16-364842829</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>