<p>ಶಿಡ್ಲಘಟ್ಟ: ರಾಜಕಾರಣವು ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿರಬೇಕೆ ಹೊರತು ರಾಜಕಾರಣವು ಹಣ ಹೂಡಿಕೆ ಮತ್ತು ಹಣ ಮಾಡು ಎಂಬಂತಾಗಬಾರದು ಎಂದು ಸಂಯುಕ್ತ ಜನತಾದಳ (ಜೆಡಿಯು) ರಾಜ್ಯ ಘಟಕದ ಅಧ್ಯಕ್ಷ ಮಹಿಮ ಪಟೇಲ್ ಹೇಳಿದರು.</p>.<p>ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>ರಾಜಕಾರಣ ಕೆಟ್ಟಿದೆ ಎನ್ನುವ ಮಾತುಗಳು ಕೇಳಿ ನಿರಾಶೆಯಾಗುವ ಬದಲಿಗೆ ಕೆಟ್ಟ ಪರಿಸ್ಥಿತಿ ಬದಲಿಸುವವರು ನಾವಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆಶಾವಾದಿಗಳಾಗಬೇಕು. ಈ ಹಿಂದೆ ರಾಜಕಾರಣಿಗಳಲ್ಲಿ ಸಾಮಾಜಿಕ ಕಳಕಳಿಯಿತ್ತು. ಆದರೆ, ಇದೀಗ ರಾಜಕೀಯ ಮಾಡುವ ಬಹುತೇಕರು ಹಣ ಹೂಡಿ, ಹಣ ಮಾಡುವವರೇ ಹೆಚ್ಚಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಆರೋಗ್ಯ, ಶಿಕ್ಷಣ, ಆಡಳಿತ, ಕೃಷಿ ಹಾಗೂ ಪರಿಸರದ ಕಡೆಯ ಆಶಯಗಳೊಂದಿಗೆ ರಾಜ್ಯದಾದ್ಯಂತ ಇರುವ ಪ್ರಜ್ಞಾವಂತರನ್ನು ಒಗ್ಗೂಡಿಸುವ ಮೂಲಕ ಜೆಡಿಯು ಪಕ್ಷ ಸಂಘಟನೆ ಮಾಡಲಾಗುತ್ತಿದೆ. ಹಾಗಾಗಿ ಮಠಾದೀಶರಿಂದ ಹಿಡಿದು ರಾಜಕಾರಣಿಗಳವರೆಗೆ ಎಲ್ಲ ಸಮಾನ ಮನಸ್ಕರು ಒಗ್ಗೂಡಿ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂದರು.</p>.<p>ಮುಂಬರುವ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡಾ.ಕೆ.ನಾಗರಾಜ್ ಅವರನ್ನು ಘೋಷಿಸಲಾಗಿದೆ. ಪ್ರಜ್ಞಾವಂತ ಪದವೀಧರರು ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.</p>.<p>ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಕೆ. ನಾಗರಾಜ್ ಮಾತನಾಡಿ, 2007ರ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಸೋಲನುಭವಿಸಿದ್ದೆ ಎಂದರು.</p>.<p>ಈ ಸಂದರ್ಭದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗಂಗೂರ್, ಕೆ.ರಂಗನಾಥ್, ಮಹಿಳಾ ಘಟಕದ ರಾಜ್ಯ ಘಟಕದ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಕೆ.ವಿ.ಶಿವರಾಂ, ಉಪಾಧ್ಯಕ್ಷೆ ಶಾಂತಕುಮಾರಿ, ಡಿ.ಜೆ.ಪ್ರಭು, ನಾರಾಯಣಸ್ವಾಮಿ ಗೌಡ, ಮನು, ಯಾರಬ್ ಬಾಬು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-16-1614269777</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ರಾಜಕಾರಣವು ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿರಬೇಕೆ ಹೊರತು ರಾಜಕಾರಣವು ಹಣ ಹೂಡಿಕೆ ಮತ್ತು ಹಣ ಮಾಡು ಎಂಬಂತಾಗಬಾರದು ಎಂದು ಸಂಯುಕ್ತ ಜನತಾದಳ (ಜೆಡಿಯು) ರಾಜ್ಯ ಘಟಕದ ಅಧ್ಯಕ್ಷ ಮಹಿಮ ಪಟೇಲ್ ಹೇಳಿದರು.</p>.<p>ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>ರಾಜಕಾರಣ ಕೆಟ್ಟಿದೆ ಎನ್ನುವ ಮಾತುಗಳು ಕೇಳಿ ನಿರಾಶೆಯಾಗುವ ಬದಲಿಗೆ ಕೆಟ್ಟ ಪರಿಸ್ಥಿತಿ ಬದಲಿಸುವವರು ನಾವಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆಶಾವಾದಿಗಳಾಗಬೇಕು. ಈ ಹಿಂದೆ ರಾಜಕಾರಣಿಗಳಲ್ಲಿ ಸಾಮಾಜಿಕ ಕಳಕಳಿಯಿತ್ತು. ಆದರೆ, ಇದೀಗ ರಾಜಕೀಯ ಮಾಡುವ ಬಹುತೇಕರು ಹಣ ಹೂಡಿ, ಹಣ ಮಾಡುವವರೇ ಹೆಚ್ಚಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಆರೋಗ್ಯ, ಶಿಕ್ಷಣ, ಆಡಳಿತ, ಕೃಷಿ ಹಾಗೂ ಪರಿಸರದ ಕಡೆಯ ಆಶಯಗಳೊಂದಿಗೆ ರಾಜ್ಯದಾದ್ಯಂತ ಇರುವ ಪ್ರಜ್ಞಾವಂತರನ್ನು ಒಗ್ಗೂಡಿಸುವ ಮೂಲಕ ಜೆಡಿಯು ಪಕ್ಷ ಸಂಘಟನೆ ಮಾಡಲಾಗುತ್ತಿದೆ. ಹಾಗಾಗಿ ಮಠಾದೀಶರಿಂದ ಹಿಡಿದು ರಾಜಕಾರಣಿಗಳವರೆಗೆ ಎಲ್ಲ ಸಮಾನ ಮನಸ್ಕರು ಒಗ್ಗೂಡಿ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂದರು.</p>.<p>ಮುಂಬರುವ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡಾ.ಕೆ.ನಾಗರಾಜ್ ಅವರನ್ನು ಘೋಷಿಸಲಾಗಿದೆ. ಪ್ರಜ್ಞಾವಂತ ಪದವೀಧರರು ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.</p>.<p>ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಕೆ. ನಾಗರಾಜ್ ಮಾತನಾಡಿ, 2007ರ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಸೋಲನುಭವಿಸಿದ್ದೆ ಎಂದರು.</p>.<p>ಈ ಸಂದರ್ಭದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗಂಗೂರ್, ಕೆ.ರಂಗನಾಥ್, ಮಹಿಳಾ ಘಟಕದ ರಾಜ್ಯ ಘಟಕದ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಕೆ.ವಿ.ಶಿವರಾಂ, ಉಪಾಧ್ಯಕ್ಷೆ ಶಾಂತಕುಮಾರಿ, ಡಿ.ಜೆ.ಪ್ರಭು, ನಾರಾಯಣಸ್ವಾಮಿ ಗೌಡ, ಮನು, ಯಾರಬ್ ಬಾಬು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260409-16-1614269777</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>