<p><strong>ಶಿಡ್ಲಘಟ್ಟ</strong>: ನಗರದ ಕೆ.ಎಚ್.ಬಿ ಕಾಲೊನಿಯಲ್ಲಿ ಮಹಾಗಣಪತಿ, ಗಾಯಿತ್ರಿ ದೇವಿ, ಕಲ್ಯಾಣ ವೆಂಕಟೇಶ್ವರಸ್ವಾಮಿ ಹಾಗೂ ಶನೇಶ್ವರ ದೇವಾಲಯದಲ್ಲಿ ಶನೇಶ್ವರ ಜಯಂತಿ ಹಾಗೂ ಶ್ರೀಮತ್ ಕಲ್ಯಾಣ ರಥೋತ್ಸವವು ಶನಿವಾರ ನಡೆಯಿತು.</p>.<p>29ನೇ ವರ್ಷದ ಶನೇಶ್ವರ ಜಯಂತಿ ಅಂಗವಾಗಿ ದೇವಾಲಯದಲ್ಲಿನ ಮಹಾಗಣಪತಿ, ಗಾಯಿತ್ರಿ ದೇವಿ, ಕಲ್ಯಾಣ ವೆಂಕಟೇಶ್ವರಸ್ವಾಮಿ ಹಾಗೂ ಶನೇಶ್ವರ ಮೂರ್ತಿಗಳಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಿ ಮಹಾ ಮಂಗಳಾರತಿ ಮಾಡಲಾಯಿತು.</p>.<p>108 ಲೀಟರ್ ಕ್ಷೀರಾಭಿಷೇಕ ನೆರವೇರಿಸಿದ ಬಳಿಕ ಭಕ್ತರು ಸಾಮೂಹಿಕವಾಗಿ ಎಳ್ಳು ದೀಪ ಬೆಳಗಿದರು. ನಂತರ ಉತ್ಸವ ಮೂರ್ತಿಯನ್ನು ಅಲಂಕೃತ ತೇರಿನಲ್ಲಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಕುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಭಕ್ತರು ತೇರನ್ನು ಎಳೆದರು.</p>.<p>ಪ್ರಧಾನ ಅರ್ಚಕ ವಿ.ಎನ್.ರಾಮ ಮೋಹನ್ ಶಾಸ್ತ್ರಿ ನೇತೃತ್ವದಲ್ಲಿ ಎಲ್ಲ ಪೂಜೆ, ಪುನಸ್ಕಾರಗಳು ನಡೆದವು.</p>.<p>ದೇವಾಲಯದ ಅಭಿವೃದ್ದಿ ಟ್ರಸ್ಟ್ ಅಧ್ಯಕ್ಷ ತೀರ್ಥಂಕರ, ಗೌರವಾಧ್ಯಕ್ಷ ಪ್ರಕಾಶ್, ಕೃಷ್ಣಪ್ಪ, ಮಣಿ, ನಾರಾಯಣಸ್ವಾಮಿ, ಶ್ರೀನಾಥ್, ಭಕ್ತರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-16-270769684</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ನಗರದ ಕೆ.ಎಚ್.ಬಿ ಕಾಲೊನಿಯಲ್ಲಿ ಮಹಾಗಣಪತಿ, ಗಾಯಿತ್ರಿ ದೇವಿ, ಕಲ್ಯಾಣ ವೆಂಕಟೇಶ್ವರಸ್ವಾಮಿ ಹಾಗೂ ಶನೇಶ್ವರ ದೇವಾಲಯದಲ್ಲಿ ಶನೇಶ್ವರ ಜಯಂತಿ ಹಾಗೂ ಶ್ರೀಮತ್ ಕಲ್ಯಾಣ ರಥೋತ್ಸವವು ಶನಿವಾರ ನಡೆಯಿತು.</p>.<p>29ನೇ ವರ್ಷದ ಶನೇಶ್ವರ ಜಯಂತಿ ಅಂಗವಾಗಿ ದೇವಾಲಯದಲ್ಲಿನ ಮಹಾಗಣಪತಿ, ಗಾಯಿತ್ರಿ ದೇವಿ, ಕಲ್ಯಾಣ ವೆಂಕಟೇಶ್ವರಸ್ವಾಮಿ ಹಾಗೂ ಶನೇಶ್ವರ ಮೂರ್ತಿಗಳಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಿ ಮಹಾ ಮಂಗಳಾರತಿ ಮಾಡಲಾಯಿತು.</p>.<p>108 ಲೀಟರ್ ಕ್ಷೀರಾಭಿಷೇಕ ನೆರವೇರಿಸಿದ ಬಳಿಕ ಭಕ್ತರು ಸಾಮೂಹಿಕವಾಗಿ ಎಳ್ಳು ದೀಪ ಬೆಳಗಿದರು. ನಂತರ ಉತ್ಸವ ಮೂರ್ತಿಯನ್ನು ಅಲಂಕೃತ ತೇರಿನಲ್ಲಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಕುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಭಕ್ತರು ತೇರನ್ನು ಎಳೆದರು.</p>.<p>ಪ್ರಧಾನ ಅರ್ಚಕ ವಿ.ಎನ್.ರಾಮ ಮೋಹನ್ ಶಾಸ್ತ್ರಿ ನೇತೃತ್ವದಲ್ಲಿ ಎಲ್ಲ ಪೂಜೆ, ಪುನಸ್ಕಾರಗಳು ನಡೆದವು.</p>.<p>ದೇವಾಲಯದ ಅಭಿವೃದ್ದಿ ಟ್ರಸ್ಟ್ ಅಧ್ಯಕ್ಷ ತೀರ್ಥಂಕರ, ಗೌರವಾಧ್ಯಕ್ಷ ಪ್ರಕಾಶ್, ಕೃಷ್ಣಪ್ಪ, ಮಣಿ, ನಾರಾಯಣಸ್ವಾಮಿ, ಶ್ರೀನಾಥ್, ಭಕ್ತರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-16-270769684</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>