ತಾಲ್ಲೂಕಿನ ನಂದಿಯಲ್ಲಿರುವ ಭೋಗ ನಂದೀಶ್ವರ ಸ್ವಾಮಿ, ನಂದಿ ಗಿರಿಧಾಮದ ಮೇಲಿರುವ ಭೋಗ ನಂದೀಶ್ವರ, ಎಂ.ಜಿ.ರಸ್ತೆಯಲ್ಲಿರುವ ಮರುಳ ಸಿದ್ದೇಶ್ವರ, ಪಾಪಾಗ್ನಿ ಮಠ, ಕೃಷ್ಣ ಚಿತ್ರಮಂದಿರ ರಸ್ತೆಯಲ್ಲಿರುವ ಪ್ರಸನ್ನೇಶ್ವರ ದೇವಸ್ಥಾನ, ಭುವನೇಶ್ವರಿ ವೃತ್ತದಲ್ಲಿರುವ ಗಂಗಾಧರೇಶ್ವರ ಸ್ವಾಮಿ ದೇಗುಲದಲ್ಲಿ ಭಕ್ತರು ಬೆಳಿಗ್ಗೆಯಿಂದಲೇ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದದ್ದು ಕಂಡುಬಂತು. ಶಿವರಾತ್ರಿ ಪ್ರಯುಕ್ತ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರದ ಜತೆಗೆ ಹೂವು, ಬಿಲ್ವಪತ್ರೆ, ಎಲೆಗಳಿಂದ ವಿಶೇಷ ಅರ್ಚನೆ ಮಾಡಲಾಗುತ್ತಿತ್ತು.