<p>ಬಾಗೇಪಲ್ಲಿ: ಕವಿ, ಸಾಹಿತಿ ದಿ. ಡಾ.ಸಿದ್ಧಲಿಂಗಯ್ಯ ಅವರ ಹೋರಾಟದ ಜ್ಞಾನ ಸಂಪತ್ತನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಹಸಂಘಟನಾ ಸಂಚಾಲಕ ಬಿ.ವಿ.ವೆಂಕಟರವಣ ಕರೆ ನೀಡಿದರು.</p>.<p>ಪಟ್ಟಣದ ಡಾ.ಅಂಬೇಡ್ಕರ್ ಪುತ್ಥಳಿ ಮುಂದೆ ಶನಿವಾರ ದಲಿತ ಸಂಘರ್ಷ ಸಮಿತಿಯಿಂದ ಹಮ್ಮಿಕೊಂಡಿದ್ದ ದಿ.ಸಿದ್ದಲಿಂಗಯ್ಯ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸಿದ್ಧಲಿಂಗಯ್ಯ ಕೇವಲ ದಲಿತ ಕವಿ ಆಗಿರಲಿಲ್ಲ. ಎಲ್ಲ ಸಮುದಾಯಗಳ ಹರಿಕಾರರಾಗಿದ್ದರು. ಅಂಬೇಡ್ಕರ್ ಜೀವನದ ಆದರ್ಶಗಳನ್ನು ರೂಢಿಸಿಕೊಂಡು, ಸಾಮಾಜಿಕ, ಬಡಜನರ ಬಗ್ಗೆ ಚಿಂತಕರಾಗಿದ್ದರು. ಕವಿ, ಸಾಹಿತಿಗಳಾಗಿ ಸಮಾಜಮುಖಿ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ದಲಿತ ಸಂಘರ್ಷ ಸಮಿತಿ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮಿನರಸಿಂಹಪ್ಪ, ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಲಕ್ಷ್ಮಿನರಸಿಂಹಪ್ಪ, ಮುಖಂಡ ಚಿನ್ನಪೂಜಪ್ಪ, ಪೈಪಾಳ್ಯರವಿ, ಗಂಗುಲಪ್ಪ, ಕೋಟಪ್ಪ, ಜಯಂತ್, ನರಸಿಂಹಪ್ಪ, ಜೀವಿಕಾ ಸಂಘಟನೆಯ ತಾಲ್ಲೂಕು ಸಂಚಾಲಕ ನಾರಾಯಣಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗೇಪಲ್ಲಿ: ಕವಿ, ಸಾಹಿತಿ ದಿ. ಡಾ.ಸಿದ್ಧಲಿಂಗಯ್ಯ ಅವರ ಹೋರಾಟದ ಜ್ಞಾನ ಸಂಪತ್ತನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಹಸಂಘಟನಾ ಸಂಚಾಲಕ ಬಿ.ವಿ.ವೆಂಕಟರವಣ ಕರೆ ನೀಡಿದರು.</p>.<p>ಪಟ್ಟಣದ ಡಾ.ಅಂಬೇಡ್ಕರ್ ಪುತ್ಥಳಿ ಮುಂದೆ ಶನಿವಾರ ದಲಿತ ಸಂಘರ್ಷ ಸಮಿತಿಯಿಂದ ಹಮ್ಮಿಕೊಂಡಿದ್ದ ದಿ.ಸಿದ್ದಲಿಂಗಯ್ಯ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸಿದ್ಧಲಿಂಗಯ್ಯ ಕೇವಲ ದಲಿತ ಕವಿ ಆಗಿರಲಿಲ್ಲ. ಎಲ್ಲ ಸಮುದಾಯಗಳ ಹರಿಕಾರರಾಗಿದ್ದರು. ಅಂಬೇಡ್ಕರ್ ಜೀವನದ ಆದರ್ಶಗಳನ್ನು ರೂಢಿಸಿಕೊಂಡು, ಸಾಮಾಜಿಕ, ಬಡಜನರ ಬಗ್ಗೆ ಚಿಂತಕರಾಗಿದ್ದರು. ಕವಿ, ಸಾಹಿತಿಗಳಾಗಿ ಸಮಾಜಮುಖಿ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ದಲಿತ ಸಂಘರ್ಷ ಸಮಿತಿ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮಿನರಸಿಂಹಪ್ಪ, ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಲಕ್ಷ್ಮಿನರಸಿಂಹಪ್ಪ, ಮುಖಂಡ ಚಿನ್ನಪೂಜಪ್ಪ, ಪೈಪಾಳ್ಯರವಿ, ಗಂಗುಲಪ್ಪ, ಕೋಟಪ್ಪ, ಜಯಂತ್, ನರಸಿಂಹಪ್ಪ, ಜೀವಿಕಾ ಸಂಘಟನೆಯ ತಾಲ್ಲೂಕು ಸಂಚಾಲಕ ನಾರಾಯಣಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>