ಬಿ.ಬಿ.ರಸ್ತೆಯಲ್ಲಿರುವ ಶನೈಶ್ವರ ಸ್ವಾಮಿ ದೇವಾಲಯ, ಕಂದವಾರ ಪೇಟೆಯಲ್ಲಿರುವ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನಗಳಿಗೆ ದಿನವೀಡಿ ಭಕ್ತರ ಭೇಟಿ ನಡದೇ ಇತ್ತು. ದೇವಾಲಯದಲ್ಲಿ ಬೆಳಿಗ್ಗೆ 5.30ರಿಂದ 6.30ರ ವರೆಗೆ ಅಭಿಷೇಕ ಮತ್ತು ಸುಪ್ರಭಾತ ಸೇವೆ ನಡೆದವು. ಬಳಿಕ ಮಹಾಮಂಗಳಾರತಿ, ತೀರ್ಥ ಪ್ರಸಾಧ ವಿನಿಯೋಗ ನಡೆಯಿತು. ದಿನವೀಡಿ ಭಜನಾ, ಗಾಯನ ಕಾರ್ಯಕ್ರಮಗಳು ನಡೆದವು.