<p><strong>ಚಿಂತಾಮಣಿ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳಂಕರಹಿತ ಮತ್ತು ಯಾರಿಗೂ ಸರಿಸಾಟಿ ಇಲ್ಲದ ನಾಯಕರಾಗಿದ್ದು, ನಿರಂತರವಾಗಿ ಬಡವರಪರ ಕಾರ್ಯಕ್ರಮಗಳನ್ನು ನೀಡುವ ಮೂಲಕ ಅಪೂರ್ವ ಸಾಧನೆ ಮಾಡಿದ್ದಾರೆ ಎಂದು ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದರು. </p>.<p>ಸಿದ್ದರಾಮಯ್ಯ ಅವರು ದೀರ್ಘಕಾಲ ಮುಖ್ಯಮಂತ್ರಿ ದಾಖಲೆ ಮಾಡಿದ ಹಿನ್ನೆಲೆಯಲ್ಲಿ ಕುರುಬರ ಸಂಘವು ಭಾನುವಾರ ನಗರದಲ್ಲಿ ಐತಿಹಾಸಿಕ ವಿಜಯೋತ್ಸವ ಮತ್ತು ಸ್ನೇಹಮಿಲನ ಕಾರ್ಯಕ್ರಮ ಹಮ್ಮಿಕೊಂಡಿತು.</p>.<p>ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಹಿಂದುಳಿದ ಬಡ ಕುಟುಂಬದಲ್ಲಿ ಜನಿಸಿ ಹಲವಾರು ಸಂಕಷ್ಟಗಳನ್ನು ಎದುರಿಸಿ, ರಾಜಕೀಯ ಏಳುಬೀಳುಗಳ ನಡುವೆ ಈ ಸಾಧನೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಜೀವನದ ಅನುಭವಗಳು ಕಲಿಸಿದ ಪಾಠದಿಂದಲೇ ಬಡವರಿಗೆ ಸ್ಪಂದಿಸುವುದನ್ನು ಕರಗತ ಮಾಡಿಕೊಂಡರು ಎಂದರು. </p>.<p>ಕಳಂಕರಹಿತ ರಾಜಕಾರಣಿಯಾಗಿದ್ದರೂ ವಿರೋಧಪಕ್ಷಗಳು ಅವರ ಆತ್ಮವಿಶ್ವಾಸ ಕುಂದಿಸುವ ಮತ್ತು ಮನ ನೋಯಿಸುವ ಕೆಲಸ ಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು. </p>.<p>ಮುನಿಶಾಮಿರೆಡ್ಡಿ, ಕುರುಬರ ಸಂಘದ ಅಧ್ಯಕ್ಷ ಮಂಜುನಾಥ್, ಪದಾಧಿಕಾರಿಗಳಾದ ವೆಂಕಟರವಣಪ್ಪ, ಎಂ.ಎ.ಪ್ರಕಾಶ್ ಹಾಗೂ ಸಮುದಾಯದ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳಂಕರಹಿತ ಮತ್ತು ಯಾರಿಗೂ ಸರಿಸಾಟಿ ಇಲ್ಲದ ನಾಯಕರಾಗಿದ್ದು, ನಿರಂತರವಾಗಿ ಬಡವರಪರ ಕಾರ್ಯಕ್ರಮಗಳನ್ನು ನೀಡುವ ಮೂಲಕ ಅಪೂರ್ವ ಸಾಧನೆ ಮಾಡಿದ್ದಾರೆ ಎಂದು ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದರು. </p>.<p>ಸಿದ್ದರಾಮಯ್ಯ ಅವರು ದೀರ್ಘಕಾಲ ಮುಖ್ಯಮಂತ್ರಿ ದಾಖಲೆ ಮಾಡಿದ ಹಿನ್ನೆಲೆಯಲ್ಲಿ ಕುರುಬರ ಸಂಘವು ಭಾನುವಾರ ನಗರದಲ್ಲಿ ಐತಿಹಾಸಿಕ ವಿಜಯೋತ್ಸವ ಮತ್ತು ಸ್ನೇಹಮಿಲನ ಕಾರ್ಯಕ್ರಮ ಹಮ್ಮಿಕೊಂಡಿತು.</p>.<p>ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಹಿಂದುಳಿದ ಬಡ ಕುಟುಂಬದಲ್ಲಿ ಜನಿಸಿ ಹಲವಾರು ಸಂಕಷ್ಟಗಳನ್ನು ಎದುರಿಸಿ, ರಾಜಕೀಯ ಏಳುಬೀಳುಗಳ ನಡುವೆ ಈ ಸಾಧನೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಜೀವನದ ಅನುಭವಗಳು ಕಲಿಸಿದ ಪಾಠದಿಂದಲೇ ಬಡವರಿಗೆ ಸ್ಪಂದಿಸುವುದನ್ನು ಕರಗತ ಮಾಡಿಕೊಂಡರು ಎಂದರು. </p>.<p>ಕಳಂಕರಹಿತ ರಾಜಕಾರಣಿಯಾಗಿದ್ದರೂ ವಿರೋಧಪಕ್ಷಗಳು ಅವರ ಆತ್ಮವಿಶ್ವಾಸ ಕುಂದಿಸುವ ಮತ್ತು ಮನ ನೋಯಿಸುವ ಕೆಲಸ ಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು. </p>.<p>ಮುನಿಶಾಮಿರೆಡ್ಡಿ, ಕುರುಬರ ಸಂಘದ ಅಧ್ಯಕ್ಷ ಮಂಜುನಾಥ್, ಪದಾಧಿಕಾರಿಗಳಾದ ವೆಂಕಟರವಣಪ್ಪ, ಎಂ.ಎ.ಪ್ರಕಾಶ್ ಹಾಗೂ ಸಮುದಾಯದ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>