ತಾಲ್ಲೂಕಿನ ಚಿತ್ರಾವತಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಹೇಳಿದ ಕಾರಣಕ್ಕೆ ನನ್ನ ಸಚಿವನನ್ನಾಗಿ ಮಾಡಿಲ್ಲ. ನಮ್ಮ ಪಕ್ಷದ ಸರ್ಕಾರ, ಮುಖ್ಯಮಂತ್ರಿ ಮತ್ತು ಜನರು ನನ್ನನ್ನು ಸಚಿವನನ್ನಾಗಿ ಮಾಡಿದ್ದಾರೆ. ಜನತಾದಳದಲ್ಲಿ ಇದ್ದಾಗ ಯಾಕೆ ಇವರನ್ನು ಮುಖ್ಯಮಂತ್ರಿ ಮಾಡಲಿಲ್ಲ’ ಎಂದು ಪ್ರಶ್ನಿಸಿದರು.