<p><strong>ಶಿಡ್ಲಘಟ್ಟ:</strong> ಶಾಲಾ ಶಿಕ್ಷಣ ಇಲಾಖೆ, ಸರ್ ಎಂ. ವಿಶ್ವೇಶ್ವರಯ್ಯ ವಿಜ್ಞಾನ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯಗಳ ಆಶ್ರಯದಲ್ಲಿ ನಗರದ ಗರುಡಾದ್ರಿ ಶಾಲೆಯಲ್ಲಿ ಪ್ರೌಢಶಾಲಾ ಹಂತದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗಳಿಗೆ ಶನಿವಾರ ಚಾಲನೆ ನೀಡಲಾಯಿತು. </p>.<p>ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಎಸ್. ರುದ್ರೇಶಮೂರ್ತಿ ಮಾತನಾಡಿ, ‘ಎಳೆಯ ವಯಸ್ಸಿನಿಂದಲೇ ಎಲ್ಲವನ್ನೂ ಪ್ರಶ್ನಿಸಿ ತಿಳಿದುಕೊಂಡು ಮೂಢನಂಬಿಕೆಗಳನ್ನು ಹತ್ತಿಕ್ಕುವ ಗುಣ ಬೆಳೆಸಿಕೊಳ್ಳಬೇಕು. ಕಲಿಯುವ ಅವಧಿಯಲ್ಲಿ ಪ್ರಯೋಗಶೀಲತೆ, ಚಿಂತನಾತ್ಮಕ ಮತ್ತು ರಚನಾತ್ಮಕತೆ ಮೂಲಕ ಹೊಸತನ್ನು ಅನ್ವೇಷಿಸುವ ಮನೋಧೋರಣೆ ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು. </p>.<p>ವಿದ್ಯಾರ್ಥಿ ದಿಸೆಯಿಂದಲೇ ವೈಜ್ಞಾನಿಕ ಮನೋಭಾವನೆ ವೃದ್ಧಿಯಾದರೆ ಯುವ ವಿಜ್ಞಾನಿಗಳು ಹೊರಹೊಮ್ಮಬಹುದು. ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನವನ್ನು ಒಳ್ಳೆಯದಕ್ಕಾಗಿ ಮಾತ್ರ ಬಳಸಿಕೊಳ್ಳಬೇಕು ಎಂದರು.</p>.<p>ಶಿಕ್ಷಣ ಸಂಯೋಜಕ ಯು.ವೈ.ಮಂಜುನಾಥ್ ಮಾತನಾಡಿ, ಮೂಲವಿಜ್ಞಾನದ ಅರಿವು ಹೆಚ್ಚಾಗಬೇಕು. ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯು ಹೆಚ್ಚಿ ಸ್ಪರ್ಧೆಗಳಲ್ಲಿ ಭಾಗವಹಿಸುವ ಗುಣ ಬೆಳೆಸಿಕೊಳ್ಳಬೆಕು ಎಂದರು.</p>.<p>ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವಿ.ವೆಂಕಟರೆಡ್ಡಿ ಮಾತನಾಡಿದರು.</p>.<p>ಸಾಮೂಹಿಕ ವಿಭಾಗದಲ್ಲಿ 14, ವೈಯಕ್ತಿಕ ವಿಭಾಗದಲ್ಲಿ 11 ತಂಡಗಳು ವಿವಿಧ ಮಾದರಿಗಳನ್ನು ಪ್ರದರ್ಶಿಸಿದವು. ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.</p>.<p>ಗರುಡಾದ್ರಿ ಶಾಲೆಯ ಪ್ರಾಂಶುಪಾಲೆ ರೂಪಾ ಕೆ. ರಮೇಶ್, ಶಿಕ್ಷಣ ಸಂಯೋಜಕ ಅಂಕಿರೆಡ್ಡಿ, ತೀರ್ಪುಗಾರ ಜಿ.ಲಕ್ಷ್ಮಿಪ್ರಸಾದ್, ಬೃಂದಾ, ವಿಶ್ವನಾಥ್, ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಶಾಲಾ ಶಿಕ್ಷಣ ಇಲಾಖೆ, ಸರ್ ಎಂ. ವಿಶ್ವೇಶ್ವರಯ್ಯ ವಿಜ್ಞಾನ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯಗಳ ಆಶ್ರಯದಲ್ಲಿ ನಗರದ ಗರುಡಾದ್ರಿ ಶಾಲೆಯಲ್ಲಿ ಪ್ರೌಢಶಾಲಾ ಹಂತದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗಳಿಗೆ ಶನಿವಾರ ಚಾಲನೆ ನೀಡಲಾಯಿತು. </p>.<p>ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಎಸ್. ರುದ್ರೇಶಮೂರ್ತಿ ಮಾತನಾಡಿ, ‘ಎಳೆಯ ವಯಸ್ಸಿನಿಂದಲೇ ಎಲ್ಲವನ್ನೂ ಪ್ರಶ್ನಿಸಿ ತಿಳಿದುಕೊಂಡು ಮೂಢನಂಬಿಕೆಗಳನ್ನು ಹತ್ತಿಕ್ಕುವ ಗುಣ ಬೆಳೆಸಿಕೊಳ್ಳಬೇಕು. ಕಲಿಯುವ ಅವಧಿಯಲ್ಲಿ ಪ್ರಯೋಗಶೀಲತೆ, ಚಿಂತನಾತ್ಮಕ ಮತ್ತು ರಚನಾತ್ಮಕತೆ ಮೂಲಕ ಹೊಸತನ್ನು ಅನ್ವೇಷಿಸುವ ಮನೋಧೋರಣೆ ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು. </p>.<p>ವಿದ್ಯಾರ್ಥಿ ದಿಸೆಯಿಂದಲೇ ವೈಜ್ಞಾನಿಕ ಮನೋಭಾವನೆ ವೃದ್ಧಿಯಾದರೆ ಯುವ ವಿಜ್ಞಾನಿಗಳು ಹೊರಹೊಮ್ಮಬಹುದು. ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನವನ್ನು ಒಳ್ಳೆಯದಕ್ಕಾಗಿ ಮಾತ್ರ ಬಳಸಿಕೊಳ್ಳಬೇಕು ಎಂದರು.</p>.<p>ಶಿಕ್ಷಣ ಸಂಯೋಜಕ ಯು.ವೈ.ಮಂಜುನಾಥ್ ಮಾತನಾಡಿ, ಮೂಲವಿಜ್ಞಾನದ ಅರಿವು ಹೆಚ್ಚಾಗಬೇಕು. ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯು ಹೆಚ್ಚಿ ಸ್ಪರ್ಧೆಗಳಲ್ಲಿ ಭಾಗವಹಿಸುವ ಗುಣ ಬೆಳೆಸಿಕೊಳ್ಳಬೆಕು ಎಂದರು.</p>.<p>ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವಿ.ವೆಂಕಟರೆಡ್ಡಿ ಮಾತನಾಡಿದರು.</p>.<p>ಸಾಮೂಹಿಕ ವಿಭಾಗದಲ್ಲಿ 14, ವೈಯಕ್ತಿಕ ವಿಭಾಗದಲ್ಲಿ 11 ತಂಡಗಳು ವಿವಿಧ ಮಾದರಿಗಳನ್ನು ಪ್ರದರ್ಶಿಸಿದವು. ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.</p>.<p>ಗರುಡಾದ್ರಿ ಶಾಲೆಯ ಪ್ರಾಂಶುಪಾಲೆ ರೂಪಾ ಕೆ. ರಮೇಶ್, ಶಿಕ್ಷಣ ಸಂಯೋಜಕ ಅಂಕಿರೆಡ್ಡಿ, ತೀರ್ಪುಗಾರ ಜಿ.ಲಕ್ಷ್ಮಿಪ್ರಸಾದ್, ಬೃಂದಾ, ವಿಶ್ವನಾಥ್, ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>