<p><strong>ಶಿಡ್ಲಘಟ್ಟ:</strong> ನಗರದ ಉಲ್ಲೂರುಪೇಟೆ ವಿಜಯನಗರ ಹೆಬ್ಬಾಗಿಲ ಅಶ್ವತ್ಥಕಟ್ಟೆ ಬಳಿ ಕಂದಾಯ ಇಲಾಖೆಯಿಂದ ಇ–ಪೌತಿ ಅಂದೋಲನವನ್ನು ಬುಧವಾರ ಹಮ್ಮಿಕೊಳ್ಳಲಾಯಿತು. </p>.<p>ತಹಶೀಲ್ದಾರ್ ಗಗನ ಸಿಂಧೂ ಮಾತನಾಡಿ, ‘ಕಂದಾಯ ಅಧಿಕಾರಿಗಳು, ಸಿಬ್ಬಂದಿ ನಿಮ್ಮ ಮನೆ ಬಾಗಿಲಿಗೆ ಬಂದಿದ್ದು, ಮೃತಪಟ್ಟ ನಿಮ್ಮ ಹಿರಿಯರ ಹೆಸರಿನಲ್ಲಿರುವ ಆಸ್ತಿಗಳ ದಾಖಲೆಗಳನ್ನು ಕುಟುಂಬದ ವಾರಸುದಾರರ ಹೆಸರಿಗೆ ಮಾಡಿಸಿಕೊಳ್ಳಿ. ಈ ಮೂಲಕ ನಿಮ್ಮ ಪೂರ್ವಜರ ಆಸ್ತಿಯನ್ನು ಜೋಪಾನ ಮಾಡಿಕೊಳ್ಳಿ’ ಎಂದು ಹೇಳಿದರು. </p>.<p>ತಾಲೂಕಿನಲ್ಲಿ ಅನೇಕ ಕುಟುಂಬ ಸದಸ್ಯರಿಗೆ ಸಂಬಂಧಿಸಿದ ಆಸ್ತಿಗಳ ದಾಖಲೆಗಳು ಮೃತಪಟ್ಟವರ ಹಿರಿಯರ ಹೆಸರಿನಲ್ಲೇ ಇವೆ. ಮೃತಪಟ್ಟು ವರ್ಷಗಳೇ ಕಳೆದಿದ್ದರೂ ಆ ಆಸ್ತಿಯ ದಾಖಲೆಗಳನ್ನು ಅವರ ಮಕ್ಕಳು, ಮೊಮ್ಮಕ್ಕಳ ಹೆಸರಿಗೆ ಬದಲಿಸಿಕೊಂಡಿಲ್ಲ. ಇದರಿಂದ ಆಸ್ತಿಯ ಭಾಗ, ಪಾಲುದಾರಿಕೆ, ಮಾರಾಟ, ಬ್ಯಾಂಕ್ನಲ್ಲಿ ಅಡ ಇಟ್ಟು ಸಾಲ ಪಡೆಯುವುದು, ಅಸ್ತಿ ದಾಖಲೆಗಳನ್ನು ಭದ್ರಪಡಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದರು. </p>.<p>ಇದು ಒಂದೇ ಕುಟುಂಬದ ಅಣ್ಣ, ತಮ್ಮಂದಿರು, ಅಕ್ಕ, ತಂಗಿಯರ ನಡುವೆ ಕಲಹಗಳಿಗೂ ಕಾರಣವಾಗುತ್ತಿದೆ. ಇದೆಲ್ಲವನ್ನೂ ಗಮನಿಸಿ ಸರ್ಕಾರವು ಪೌತಿ ಖಾತೆ ಆಂದೋಲನ ಹಮ್ಮಿಕೊಂಡಿದ್ದು, ಕಂದಾಯ ಇಲಾಖೆ ಸಿಬ್ಬಂದಿ ಮನೆ ಬಾಗಿಲಿಗೆ ಬಂದಿದ್ದಾರೆ ಎಂದರು. </p>.<p>ಅಗತ್ಯ ದಾಖಲೆಗಳನ್ನು ಹಾಜರುಪಡಿಸಿ ಕುಟುಂಬದ ಎಲ್ಲರೂ ಒಮ್ಮತದಿಂದ ನಿರ್ಧಾರ ಮಾಡಿ ಆಸ್ತಿಯ ಇ–ಪೌತಿ ಖಾತೆ ಮಾಡಿಸಿಕೊಳ್ಳಬಹುದು. ಇದರಿಂದ ನೀವು ಪೌತಿ ಖಾತೆಗಾಗಿ ತಾಲ್ಲೂಕು ಕಚೇರಿ, ನಾಡ ಕಚೇರಿಗೆ ವಿನಾಕಾರಣ ಅಲೆದಾಡುವ ತಾಪತ್ರಯ ತಪ್ಪಲಿದೆ. ಹಣ, ಸಮಯ, ಉಳಿತಾಯ ಆಗಲಿದೆ ಎಂದರು.</p>.<p>ಪೌತಿ ಖಾತೆ ಆಂದೋಲನಕ್ಕೆ ಸಂಬಂಧಿಸಿ ಏನಾದರೂ ಅನುಮಾನ, ಸಮಸ್ಯೆಗಳು ಇದ್ದಲ್ಲಿ ತಿಳಿಸುವಂತೆ ಎಂದರು. </p>.<p>ಉಪ ತಹಶೀಲ್ದಾರ್ ಚೇತನ್, ಕಸಬಾ ಕಂದಾಯ ಅಧಿಕಾರಿ ವೇಣುಗೋಪಾಲ್, ವಿ.ಎ. ನಾಗರಾಜ್, ರೈತರಾದ ಬಿ.ನಾರಾಯಣಸ್ವಾಮಿ, ವೇಣುಗೋಪಾಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ನಗರದ ಉಲ್ಲೂರುಪೇಟೆ ವಿಜಯನಗರ ಹೆಬ್ಬಾಗಿಲ ಅಶ್ವತ್ಥಕಟ್ಟೆ ಬಳಿ ಕಂದಾಯ ಇಲಾಖೆಯಿಂದ ಇ–ಪೌತಿ ಅಂದೋಲನವನ್ನು ಬುಧವಾರ ಹಮ್ಮಿಕೊಳ್ಳಲಾಯಿತು. </p>.<p>ತಹಶೀಲ್ದಾರ್ ಗಗನ ಸಿಂಧೂ ಮಾತನಾಡಿ, ‘ಕಂದಾಯ ಅಧಿಕಾರಿಗಳು, ಸಿಬ್ಬಂದಿ ನಿಮ್ಮ ಮನೆ ಬಾಗಿಲಿಗೆ ಬಂದಿದ್ದು, ಮೃತಪಟ್ಟ ನಿಮ್ಮ ಹಿರಿಯರ ಹೆಸರಿನಲ್ಲಿರುವ ಆಸ್ತಿಗಳ ದಾಖಲೆಗಳನ್ನು ಕುಟುಂಬದ ವಾರಸುದಾರರ ಹೆಸರಿಗೆ ಮಾಡಿಸಿಕೊಳ್ಳಿ. ಈ ಮೂಲಕ ನಿಮ್ಮ ಪೂರ್ವಜರ ಆಸ್ತಿಯನ್ನು ಜೋಪಾನ ಮಾಡಿಕೊಳ್ಳಿ’ ಎಂದು ಹೇಳಿದರು. </p>.<p>ತಾಲೂಕಿನಲ್ಲಿ ಅನೇಕ ಕುಟುಂಬ ಸದಸ್ಯರಿಗೆ ಸಂಬಂಧಿಸಿದ ಆಸ್ತಿಗಳ ದಾಖಲೆಗಳು ಮೃತಪಟ್ಟವರ ಹಿರಿಯರ ಹೆಸರಿನಲ್ಲೇ ಇವೆ. ಮೃತಪಟ್ಟು ವರ್ಷಗಳೇ ಕಳೆದಿದ್ದರೂ ಆ ಆಸ್ತಿಯ ದಾಖಲೆಗಳನ್ನು ಅವರ ಮಕ್ಕಳು, ಮೊಮ್ಮಕ್ಕಳ ಹೆಸರಿಗೆ ಬದಲಿಸಿಕೊಂಡಿಲ್ಲ. ಇದರಿಂದ ಆಸ್ತಿಯ ಭಾಗ, ಪಾಲುದಾರಿಕೆ, ಮಾರಾಟ, ಬ್ಯಾಂಕ್ನಲ್ಲಿ ಅಡ ಇಟ್ಟು ಸಾಲ ಪಡೆಯುವುದು, ಅಸ್ತಿ ದಾಖಲೆಗಳನ್ನು ಭದ್ರಪಡಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದರು. </p>.<p>ಇದು ಒಂದೇ ಕುಟುಂಬದ ಅಣ್ಣ, ತಮ್ಮಂದಿರು, ಅಕ್ಕ, ತಂಗಿಯರ ನಡುವೆ ಕಲಹಗಳಿಗೂ ಕಾರಣವಾಗುತ್ತಿದೆ. ಇದೆಲ್ಲವನ್ನೂ ಗಮನಿಸಿ ಸರ್ಕಾರವು ಪೌತಿ ಖಾತೆ ಆಂದೋಲನ ಹಮ್ಮಿಕೊಂಡಿದ್ದು, ಕಂದಾಯ ಇಲಾಖೆ ಸಿಬ್ಬಂದಿ ಮನೆ ಬಾಗಿಲಿಗೆ ಬಂದಿದ್ದಾರೆ ಎಂದರು. </p>.<p>ಅಗತ್ಯ ದಾಖಲೆಗಳನ್ನು ಹಾಜರುಪಡಿಸಿ ಕುಟುಂಬದ ಎಲ್ಲರೂ ಒಮ್ಮತದಿಂದ ನಿರ್ಧಾರ ಮಾಡಿ ಆಸ್ತಿಯ ಇ–ಪೌತಿ ಖಾತೆ ಮಾಡಿಸಿಕೊಳ್ಳಬಹುದು. ಇದರಿಂದ ನೀವು ಪೌತಿ ಖಾತೆಗಾಗಿ ತಾಲ್ಲೂಕು ಕಚೇರಿ, ನಾಡ ಕಚೇರಿಗೆ ವಿನಾಕಾರಣ ಅಲೆದಾಡುವ ತಾಪತ್ರಯ ತಪ್ಪಲಿದೆ. ಹಣ, ಸಮಯ, ಉಳಿತಾಯ ಆಗಲಿದೆ ಎಂದರು.</p>.<p>ಪೌತಿ ಖಾತೆ ಆಂದೋಲನಕ್ಕೆ ಸಂಬಂಧಿಸಿ ಏನಾದರೂ ಅನುಮಾನ, ಸಮಸ್ಯೆಗಳು ಇದ್ದಲ್ಲಿ ತಿಳಿಸುವಂತೆ ಎಂದರು. </p>.<p>ಉಪ ತಹಶೀಲ್ದಾರ್ ಚೇತನ್, ಕಸಬಾ ಕಂದಾಯ ಅಧಿಕಾರಿ ವೇಣುಗೋಪಾಲ್, ವಿ.ಎ. ನಾಗರಾಜ್, ರೈತರಾದ ಬಿ.ನಾರಾಯಣಸ್ವಾಮಿ, ವೇಣುಗೋಪಾಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>