<p><strong>ಶಿಡ್ಲಘಟ್ಟ</strong>: ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮದ ರೈತ ಎಸ್.ಆರ್.ಮಂಜುನಾಥ್ ಅವರು ತಮ್ಮ ತೋಟದಲ್ಲಿ ಬೆಳೆದಿದ್ದ ಶಾಮಂತಿ ಹೂವು ಔಷಧಿ ಸಿಂಪಡಣೆ ನಂತರ ಏಕಾಏಕಿ ಬಾಡತೊಡಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇದರಿಂದ ಹೂವು ಬೆಳೆದು ಲಾಭ ಗಳಿಸುವ ನಿರೀಕ್ಷೆಯಲ್ಲಿದ್ದ ರೈತ ಕಂಗಾಲಾಗಿದ್ದಾನೆ. </p>.<p>ಮಂಜುನಾಥ್ ಅವರು ತಮ್ಮ 25 ಗುಂಟೆ ಜಮೀನಿನಲ್ಲಿ ತ್ರಿಶಾಂಕಮ್ ಎಂಬ ತಳಿಯ ಶಾಮಂತಿ ಹೂ ಗಿಡ ನಾಟಿ ಮಾಡಿದ್ದರು. ಖಾಸಗಿ ಅಂಗಡಿಯಲ್ಲಿ ಖರೀದಿಸಿದ ಕೀಟ ನಾಶಕ ಸಿಂಪಡಣೆ ನಂತರ ಏಕಾಏಕಿ ಹೂ ಮತ್ತು ಗಿಡಗಳು ಬೆಂಕಿಗೆ ಸುಟ್ಟಂತೆ ಸುಟ್ಟು ಬಾಡತೊಡಗಿದ್ದವು.</p>.<p>ತೋಟಗಾರಿಕೆ, ಕೃಷಿ ಇಲಾಖೆ ಹಾಗೂ ಜಾಗೃತ ದಳದ ಅಧಿಕಾರಿಗಳು ತೋಟಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಹೂವಿನ ಸಸಿ ತಂದ ವಿವರ, ಕೀಟ ನಾಶಕ ಖರೀದಿಸಿದ ದಾಖಲೆಗಳನ್ನು ಪರಿಶೀಲಿಸಿದರು. ಈ ಸಂಬಂಧ ಕಂಪನಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಕ್ರಮ ವಹಿಸುವುದಾಗಿ ಅಧಿಕಾರಿಗಳು ರೈತನಿಗೆ ಭರವಸೆ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮದ ರೈತ ಎಸ್.ಆರ್.ಮಂಜುನಾಥ್ ಅವರು ತಮ್ಮ ತೋಟದಲ್ಲಿ ಬೆಳೆದಿದ್ದ ಶಾಮಂತಿ ಹೂವು ಔಷಧಿ ಸಿಂಪಡಣೆ ನಂತರ ಏಕಾಏಕಿ ಬಾಡತೊಡಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇದರಿಂದ ಹೂವು ಬೆಳೆದು ಲಾಭ ಗಳಿಸುವ ನಿರೀಕ್ಷೆಯಲ್ಲಿದ್ದ ರೈತ ಕಂಗಾಲಾಗಿದ್ದಾನೆ. </p>.<p>ಮಂಜುನಾಥ್ ಅವರು ತಮ್ಮ 25 ಗುಂಟೆ ಜಮೀನಿನಲ್ಲಿ ತ್ರಿಶಾಂಕಮ್ ಎಂಬ ತಳಿಯ ಶಾಮಂತಿ ಹೂ ಗಿಡ ನಾಟಿ ಮಾಡಿದ್ದರು. ಖಾಸಗಿ ಅಂಗಡಿಯಲ್ಲಿ ಖರೀದಿಸಿದ ಕೀಟ ನಾಶಕ ಸಿಂಪಡಣೆ ನಂತರ ಏಕಾಏಕಿ ಹೂ ಮತ್ತು ಗಿಡಗಳು ಬೆಂಕಿಗೆ ಸುಟ್ಟಂತೆ ಸುಟ್ಟು ಬಾಡತೊಡಗಿದ್ದವು.</p>.<p>ತೋಟಗಾರಿಕೆ, ಕೃಷಿ ಇಲಾಖೆ ಹಾಗೂ ಜಾಗೃತ ದಳದ ಅಧಿಕಾರಿಗಳು ತೋಟಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಹೂವಿನ ಸಸಿ ತಂದ ವಿವರ, ಕೀಟ ನಾಶಕ ಖರೀದಿಸಿದ ದಾಖಲೆಗಳನ್ನು ಪರಿಶೀಲಿಸಿದರು. ಈ ಸಂಬಂಧ ಕಂಪನಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಕ್ರಮ ವಹಿಸುವುದಾಗಿ ಅಧಿಕಾರಿಗಳು ರೈತನಿಗೆ ಭರವಸೆ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>