<p><strong>ಶಿಡ್ಲಘಟ್ಟ:</strong> ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಯಶಸ್ವಿಯಾಗಲು ಕೇವಲ ಪುಸ್ತಕದ ಓದಷ್ಟೇ ಸಾಲದು, ಪ್ರಾಯೋಗಿಕ ವ್ಯವಹಾರ ಜ್ಞಾನ ಅತ್ಯಗತ್ಯ ಎಂದು ಮಳ್ಳೂರು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎನ್. ರಾಮಾಂಜಿನಪ್ಪ ಹೇಳಿದರು.</p>.<p>ತಾಲ್ಲೂಕಿನ ಮಳ್ಳೂರಿನ ಸ್ವಾಮಿ ವಿವೇಕಾನಂದ ಪದವಿ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದರು.</p>.<p>ಹಣಕಾಸಿನ ಸಾಕ್ಷರತೆ, ಮಾರುಕಟ್ಟೆ ವಿಶ್ಲೇಷಣೆ, ತೆರಿಗೆ, ಕಾನೂನು ಮತ್ತು ಡಿಜಿಟಲ್ ಕೌಶಲಗಳನ್ನು ವಿದ್ಯಾರ್ಥಿಗಳಲ್ಲಿ ವೃದ್ಧಿಸುವ ಉದ್ದೇಶದಿಂದ ಕಾಲೇಜು ವಿದ್ಯಾರ್ಥಿಗಳಿಂದ ಆಹಾರ ಮೇಳ ಆಯೋಜಿಸಿದ್ದೇವೆ ಎಂದರು.</p>.<p>ಆಹಾರ ಮೇಳ ವಿದ್ಯಾರ್ಥಿಗಳಿಗೆ ಪಾಕ ಕಲೆ, ಪೌಷ್ಟಿಕಾಂಶ, ತಂಡದ ಕೆಲಸ ಮತ್ತು ಉದ್ಯಮಶೀಲತೆಯ ಪ್ರಾಯೋಗಿಕ ಜ್ಞಾನ ಒದಗಿಸುತ್ತವೆ. ವಿವಿಧ ಸಂಸ್ಕೃತಿಗಳ ಆಹಾರ ಪರಿಚಯ, ಆರೋಗ್ಯಕರ ಆಹಾರ ಪದ್ಧತಿ, ಸ್ವಚ್ಛತೆ, ಹಣಕಾಸಿನ ನಿರ್ವಹಣೆ, ಮತ್ತು ಸಂವಹನ ಕೌಶಲಗಳನ್ನು ವಿದ್ಯಾರ್ಥಿಗಳು ಕಲಿಯಬಹುದು ಎಂದರು.</p>.<p>ಆಹಾರ ಮೇಳದಲ್ಲಿ ವಿದ್ಯಾರ್ಥಿಗಳು ಸಾವಯವ ಪದಾರ್ಥಗಳಿಂದ ತಯಾರಿಸಿದ ತಿನಿಸುಗಳನ್ನು ಮಾರಾಟ ಮಾಡುವ ಮೂಲಕ ಗಮನ ಸೆಳೆದರು. ಪ್ರೌಢಶಾಲೆ, ಪ್ರಾಥಮಿಕ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು ಮೇಳದಲ್ಲಿ ತಿನಿಸುಗಳನ್ನು ಕೊಳ್ಳುವ ಮೂಲಕ ಮೇಳದ ಕಳೆ ಹೆಚ್ಚಿಸಿದ್ದರು.</p>.<p>ಸಿ.ನಾರಾಯಣಸ್ವಾಮಿ, ಕೆ. ಮುನಿರೆಡ್ಡಿ, ಸಿ.ಎಂ. ದೇವರಾಜು, ಸಿ.ಎಂ.ಸುರೇಶ್, ಕೆ. ಸುರೇಶ್, ವಿ. ವೆಂಕಟೇಶ್, ಎಂ. ಕೆ. ನವೀನ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಯಶಸ್ವಿಯಾಗಲು ಕೇವಲ ಪುಸ್ತಕದ ಓದಷ್ಟೇ ಸಾಲದು, ಪ್ರಾಯೋಗಿಕ ವ್ಯವಹಾರ ಜ್ಞಾನ ಅತ್ಯಗತ್ಯ ಎಂದು ಮಳ್ಳೂರು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎನ್. ರಾಮಾಂಜಿನಪ್ಪ ಹೇಳಿದರು.</p>.<p>ತಾಲ್ಲೂಕಿನ ಮಳ್ಳೂರಿನ ಸ್ವಾಮಿ ವಿವೇಕಾನಂದ ಪದವಿ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದರು.</p>.<p>ಹಣಕಾಸಿನ ಸಾಕ್ಷರತೆ, ಮಾರುಕಟ್ಟೆ ವಿಶ್ಲೇಷಣೆ, ತೆರಿಗೆ, ಕಾನೂನು ಮತ್ತು ಡಿಜಿಟಲ್ ಕೌಶಲಗಳನ್ನು ವಿದ್ಯಾರ್ಥಿಗಳಲ್ಲಿ ವೃದ್ಧಿಸುವ ಉದ್ದೇಶದಿಂದ ಕಾಲೇಜು ವಿದ್ಯಾರ್ಥಿಗಳಿಂದ ಆಹಾರ ಮೇಳ ಆಯೋಜಿಸಿದ್ದೇವೆ ಎಂದರು.</p>.<p>ಆಹಾರ ಮೇಳ ವಿದ್ಯಾರ್ಥಿಗಳಿಗೆ ಪಾಕ ಕಲೆ, ಪೌಷ್ಟಿಕಾಂಶ, ತಂಡದ ಕೆಲಸ ಮತ್ತು ಉದ್ಯಮಶೀಲತೆಯ ಪ್ರಾಯೋಗಿಕ ಜ್ಞಾನ ಒದಗಿಸುತ್ತವೆ. ವಿವಿಧ ಸಂಸ್ಕೃತಿಗಳ ಆಹಾರ ಪರಿಚಯ, ಆರೋಗ್ಯಕರ ಆಹಾರ ಪದ್ಧತಿ, ಸ್ವಚ್ಛತೆ, ಹಣಕಾಸಿನ ನಿರ್ವಹಣೆ, ಮತ್ತು ಸಂವಹನ ಕೌಶಲಗಳನ್ನು ವಿದ್ಯಾರ್ಥಿಗಳು ಕಲಿಯಬಹುದು ಎಂದರು.</p>.<p>ಆಹಾರ ಮೇಳದಲ್ಲಿ ವಿದ್ಯಾರ್ಥಿಗಳು ಸಾವಯವ ಪದಾರ್ಥಗಳಿಂದ ತಯಾರಿಸಿದ ತಿನಿಸುಗಳನ್ನು ಮಾರಾಟ ಮಾಡುವ ಮೂಲಕ ಗಮನ ಸೆಳೆದರು. ಪ್ರೌಢಶಾಲೆ, ಪ್ರಾಥಮಿಕ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು ಮೇಳದಲ್ಲಿ ತಿನಿಸುಗಳನ್ನು ಕೊಳ್ಳುವ ಮೂಲಕ ಮೇಳದ ಕಳೆ ಹೆಚ್ಚಿಸಿದ್ದರು.</p>.<p>ಸಿ.ನಾರಾಯಣಸ್ವಾಮಿ, ಕೆ. ಮುನಿರೆಡ್ಡಿ, ಸಿ.ಎಂ. ದೇವರಾಜು, ಸಿ.ಎಂ.ಸುರೇಶ್, ಕೆ. ಸುರೇಶ್, ವಿ. ವೆಂಕಟೇಶ್, ಎಂ. ಕೆ. ನವೀನ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>