<p><strong>ಶಿಡ್ಲಘಟ್ಟ</strong>: ಕನಿಷ್ಠ ಬೆಂಬಲ ಬೆಲೆಗೆ ರಾಗಿ ನೀಡಲು ನೋಂದಾಯಿಸಿಕೊಂಡ ತಾಲ್ಲೂಕಿನ ಎಲ್ಲ ರೈತರು ಆದಷ್ಟು ಬೇಗ ರಾಗಿಯನ್ನು ಖರೀದಿ ಕೇಂದ್ರಕ್ಕೆ ತಂದು ಮಾರಾಟ ಮಾಡಬೇಕು ಎಂದು ತಹಶೀಲ್ದಾರ್ ಎನ್.ಗಗನ ಸಿಂಧು ಅವರು ರೈತರಲ್ಲಿ ಮನವಿ ಮಾಡಿದರು.</p>.<p>ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳ ಜೊತೆ ವರದಹಳ್ಳಿಯಲ್ಲಿನ ರಾಜ್ಯ ಉಗ್ರಾಣ ನಿಗಮದ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ತಾಲ್ಲೂಕಿನ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಅತಿ ಹೆಚ್ಚು ರೈತರು (2055 ಮಂದಿ) ರಾಗಿ ಮಾರಾಟ ಮಾಡಲು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ ಇದುವರೆಗೂ 130 ರೈತರಷ್ಟೇ ರಾಗಿಯನ್ನು ತಂದು ಮಾರಾಟ ಮಾಡಿದ್ದಾರೆ.</p>.<p>44,474.50 ಕ್ವಿಂಟಾಲ್ ರಾಗಿ ಪೈಕಿ 2,995.50 ಕ್ವಿಂಟಾಲ್ನಷ್ಟು ರಾಗಿ ಮಾತ್ರ ಖರೀದಿ ಕೇಂದ್ರದಲ್ಲಿ ಮಾರಾಟವಾಗಿದೆ ಎಂದರು.</p>.<p>ಬೆಂಬಲ ಬೆಲೆಯಡಿ ರಾಗಿ ಖರೀದಿ ಯೋಜನೆಯು ಮಾರ್ಚ್ 26ರಂದು ಕೊನೆಯ ದಿನವಾಗಿದೆ. ಉಳಿದ ರೈತರು ವೇ ಬ್ರಿಜ್ಗಳಲ್ಲಿ ತೂಕ ಮಾಡಿಸಿಕೊಂಡು ಬಂದು ರಾಗಿ ಮಾರಾಟ ಮಾಡಬೇಕು ಎಂದು ರೈತರಲ್ಲಿ ಮನವಿ ಮಾಡಿದರು. </p>.<p>ಆಹಾರ ಶಿರಸ್ತೇದಾರ್ ಮೋಹನ್ ಕುಮಾರ್ ಮಾತನಾಡಿ, ತಾಲ್ಲೂಕಿನ ಹನುಮಂತಪುರ ಗೇಟ್ ಬಳಿಯಿರುವ ಸುಮುಖ ವೇ ಬ್ರಿಜ್ ಹಾಗೂ ನಗರದ ದಿಬ್ಬೂರಹಳ್ಳಿಯ ಬೈಪಾಸ್ ರಸ್ತೆಯ ಮಾರುತಿ ವೇ ಬ್ರಿಜ್ಗಳನ್ನು ಗುರುತಿಸಲಾಗಿದ್ದು, ರೈತರು ಅಲ್ಲಿ ರಾಗಿ ತೂಕ ಮಾಡಿಸಿಕೊಂಡು ಸೂಕ್ತ ದಾಖಲೆ ತರಬೇಕು ಎಂದರು. </p>.<p>ಮಾರ್ಚ್ 26ರವರೆಗೆ ಮಾತ್ರ ರಾಗಿ ಖರೀದಿ ಕೇಂದ್ರ ಕಾರ್ಯನಿರ್ವಹಿಸಲಿದೆ. ನೋಂದಾಯಿಸಿರುವ ರೈತರ ಪೈಕಿ ಶೇ 10ಷ್ಟು ರೈತರು ಮಾತ್ರವೇ ರಾಗಿ ಮಾರಾಟ ಮಾಡಿದ್ದು, ಇನ್ನುಳಿದ ರೈತರು ಆದಷ್ಟು ಬೇಗ ರಾಗಿ ಮಾರಾಟ ಮಾಡಬೇಕು ಎಂದು ಹೇಳಿದರು. </p>.<p>ಆಹಾರ ನಿರೀಕ್ಷಕ ಪ್ರಕಾಶ್, ರಾಗಿ ಮಾರಾಟ ಮಾಡಲು ಬಂದಿದ್ದ ರೈತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ಕನಿಷ್ಠ ಬೆಂಬಲ ಬೆಲೆಗೆ ರಾಗಿ ನೀಡಲು ನೋಂದಾಯಿಸಿಕೊಂಡ ತಾಲ್ಲೂಕಿನ ಎಲ್ಲ ರೈತರು ಆದಷ್ಟು ಬೇಗ ರಾಗಿಯನ್ನು ಖರೀದಿ ಕೇಂದ್ರಕ್ಕೆ ತಂದು ಮಾರಾಟ ಮಾಡಬೇಕು ಎಂದು ತಹಶೀಲ್ದಾರ್ ಎನ್.ಗಗನ ಸಿಂಧು ಅವರು ರೈತರಲ್ಲಿ ಮನವಿ ಮಾಡಿದರು.</p>.<p>ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳ ಜೊತೆ ವರದಹಳ್ಳಿಯಲ್ಲಿನ ರಾಜ್ಯ ಉಗ್ರಾಣ ನಿಗಮದ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ತಾಲ್ಲೂಕಿನ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಅತಿ ಹೆಚ್ಚು ರೈತರು (2055 ಮಂದಿ) ರಾಗಿ ಮಾರಾಟ ಮಾಡಲು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ ಇದುವರೆಗೂ 130 ರೈತರಷ್ಟೇ ರಾಗಿಯನ್ನು ತಂದು ಮಾರಾಟ ಮಾಡಿದ್ದಾರೆ.</p>.<p>44,474.50 ಕ್ವಿಂಟಾಲ್ ರಾಗಿ ಪೈಕಿ 2,995.50 ಕ್ವಿಂಟಾಲ್ನಷ್ಟು ರಾಗಿ ಮಾತ್ರ ಖರೀದಿ ಕೇಂದ್ರದಲ್ಲಿ ಮಾರಾಟವಾಗಿದೆ ಎಂದರು.</p>.<p>ಬೆಂಬಲ ಬೆಲೆಯಡಿ ರಾಗಿ ಖರೀದಿ ಯೋಜನೆಯು ಮಾರ್ಚ್ 26ರಂದು ಕೊನೆಯ ದಿನವಾಗಿದೆ. ಉಳಿದ ರೈತರು ವೇ ಬ್ರಿಜ್ಗಳಲ್ಲಿ ತೂಕ ಮಾಡಿಸಿಕೊಂಡು ಬಂದು ರಾಗಿ ಮಾರಾಟ ಮಾಡಬೇಕು ಎಂದು ರೈತರಲ್ಲಿ ಮನವಿ ಮಾಡಿದರು. </p>.<p>ಆಹಾರ ಶಿರಸ್ತೇದಾರ್ ಮೋಹನ್ ಕುಮಾರ್ ಮಾತನಾಡಿ, ತಾಲ್ಲೂಕಿನ ಹನುಮಂತಪುರ ಗೇಟ್ ಬಳಿಯಿರುವ ಸುಮುಖ ವೇ ಬ್ರಿಜ್ ಹಾಗೂ ನಗರದ ದಿಬ್ಬೂರಹಳ್ಳಿಯ ಬೈಪಾಸ್ ರಸ್ತೆಯ ಮಾರುತಿ ವೇ ಬ್ರಿಜ್ಗಳನ್ನು ಗುರುತಿಸಲಾಗಿದ್ದು, ರೈತರು ಅಲ್ಲಿ ರಾಗಿ ತೂಕ ಮಾಡಿಸಿಕೊಂಡು ಸೂಕ್ತ ದಾಖಲೆ ತರಬೇಕು ಎಂದರು. </p>.<p>ಮಾರ್ಚ್ 26ರವರೆಗೆ ಮಾತ್ರ ರಾಗಿ ಖರೀದಿ ಕೇಂದ್ರ ಕಾರ್ಯನಿರ್ವಹಿಸಲಿದೆ. ನೋಂದಾಯಿಸಿರುವ ರೈತರ ಪೈಕಿ ಶೇ 10ಷ್ಟು ರೈತರು ಮಾತ್ರವೇ ರಾಗಿ ಮಾರಾಟ ಮಾಡಿದ್ದು, ಇನ್ನುಳಿದ ರೈತರು ಆದಷ್ಟು ಬೇಗ ರಾಗಿ ಮಾರಾಟ ಮಾಡಬೇಕು ಎಂದು ಹೇಳಿದರು. </p>.<p>ಆಹಾರ ನಿರೀಕ್ಷಕ ಪ್ರಕಾಶ್, ರಾಗಿ ಮಾರಾಟ ಮಾಡಲು ಬಂದಿದ್ದ ರೈತರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>