ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌ ಪರಿಣಾಮ: ಚಿಕ್ಕಬಳ್ಳಾಪುರದಲ್ಲಿ ಸರಳ ಗುರು ಪೂರ್ಣಿಮೆ

ಲಾಕ್‌ಡೌನ್‌ ಕಾರಣಕ್ಕೆ ಅದ್ದೂರಿತನ ಕೈಬಿಟ್ಟ ಭಕ್ತರು, ಪಲ್ಲಕ್ಕಿ ಮೆರವಣಿಗೆ ರದ್ದು
Last Updated 5 ಜುಲೈ 2020, 11:08 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಆಷಾಢ ಮಾಸದ ಹುಣ್ಣಿಮೆಯ ದಿನವಾದ ಭಾನುವಾರ, ಲಾಕ್‌ಡೌನ್‌ ನಡುವೆಯೇ ಜಿಲ್ಲೆಯಾದ್ಯಂತ ಸರಳವಾಗಿ ಶ್ರದ್ಧಾಭಕ್ತಿಯಿಂದ ಗುರು ಪೂರ್ಣಿಮೆಯನ್ನು ಆಚರಿಸಲಾಯಿತು.

ಶಿರಡಿ ಸಾಯಿ ಬಾಬಾ ಮಂದಿರಗಳಲ್ಲಿ ದಿನವೀಡಿ ವಿಶೇಷ ಧಾರ್ಮಿಕ ಕೈಂಕರ್ಯಗಳು ಜರುಗಿದವು. ಲಾಕ್‌ಡೌನ್‌ ಕಾರಣಕ್ಕೆ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ವಿರಳವಾಗಿ ಕಂಡುಬಂತು.

ನಗರದ ಎಂ.ಜಿ.ರಸ್ತೆಯ ಮುನ್ಸಿಪಲ್‌ ಬಡಾವಣೆಯಲ್ಲಿರುವ ಸಿದ್ಧಿವಿನಾಯಕ, ಶಿರಡಿ ಸಾಯಿಬಾಬಾ ಹಾಗೂ ಅನ್ನಪೂರ್ಣೇಶ್ವರಿ ದೇವಾಲಯ ಮತ್ತು ಎಚ್‌.ಎಸ್.ಗಾರ್ಡನ್‌ನಲ್ಲಿರುವ ಸುಬ್ರಹ್ಮಣ್ಯೇಶ್ವರ, ಶನೈಶ್ವರ, ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆದವು.

ಈ ಎರಡು ದೇವಸ್ಥಾನಗಳಲ್ಲಿ ಸಾಯಿ ಬಾಬಾ ಅವರ ಮೂರ್ತಿಗಳಿಗೆ ವಿವಿಧ ಅಭಿಷೇಕ ನೆರವೇರಿಸಲಾಯಿತು. ಹೂವಿನ ಅಲಂಕಾರ ಮಾಡಲಾಗಿತ್ತು. ಲಾಕ್‌ಡೌನ್‌ನಿಂದಾಗಿ ಬಾಬಾ ಅವರ ಪಲ್ಲಕ್ಕಿ ಮೆರವಣಿಗೆ ರದ್ದುಪಡಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT