<p><strong>ಚಿಕ್ಕಬಳ್ಳಾಪುರ:</strong> ‘ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ನಾಡಗೀತೆಯನ್ನು ತಿರುಚಿ ಅವಮಾನ ಮಾಡಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ವೇಳೆ ಮನುವಾದವನ್ನು ತುಂಬಿದ್ದಾರೆ’ ಅವರ ವಿರುದ್ಧ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು’ ಎಂದು ಸಮತಾ ಸೈನಿಕ ದಳದ ಮುಖಂಡರು ಆಗ್ರಹಿಸಿದರು.</p>.<p>ಇಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮತಾ ಸೈನಿದ ದಳದ ಜಿಲ್ಲಾ ಅಧ್ಯಕ್ಷ ಜಿ.ಸಿ.ವೆಂಕಟರಮಣಪ್ಪ, ‘ಬಿಜೆಪಿ ಸರ್ಕಾರ ಶಿಕ್ಷಣವನ್ನು ಕೇಸರಿಮಯಗೊಳಿಸಲು ಹೊರಟಿದೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಪಠ್ಯ ಪುಸ್ತಕ ಪರಿಷ್ಕರಣೆಯ ವಿಚಾರ ಈ ಮಟ್ಟಿನ ವಿವಾದ ಆಗಿರುವುದು ಇದೇ ಮೊದಲು’ ಎಂದು ಹೇಳಿದರು.</p>.<p>ಬಿಜೆಪಿ ನಡೆಯಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಗೊಂಡಿದ್ದಾರೆ. ರಾಜಕೀಯಕ್ಕಾಗಿ ವಿದ್ಯಾರ್ಥಿಗಳ ಜತೆ ಚೆಲ್ಲಾಟವಾಡುತ್ತಿದ್ದಾರೆ. ಬಿಜೆಪಿಗೆ ಕೋಮುಗಲಭೆ, ಜಾತಿ ವಿಚಾರ ಮುಗಿಯಿತು. ಈಗ ಮಕ್ಕಳ ವಿಚಾರದಲ್ಲಿಯೂ ವಿಷ ಉಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮಕೈಗೊಳ್ಳುವಂತೆ ಮತ್ತು ಈ ಸಮಿತಿಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸದಂತೆ ಸಮತಾ ಸೈನಿಕ ದಳವು ರಾಜ್ಯ ಮಟ್ಟದಲ್ಲಿ ಸಹಿ ಸಂಗ್ರಹ ಆಂದೋಲನವನ್ನು ಶೀಘ್ರದಲ್ಲಿಯೇ ನಡೆಸಲಿದೆ ಎಂದು ಹೇಳಿದರು.</p>.<p>ರಾಜ್ಯ ಬಿಜೆಪಿ ಸರ್ಕಾರ ಸಂವಿಧಾನ ಬದ್ಧವಾಗಿ ಆಡಳಿತವನ್ನು ನೀಡಬೇಕು. ಆದರೆ ಇವರು ಮನುವಾದದ ಮೇಲೆ ಆಡಳಿತ ನಡೆಸುತ್ತಿದ್ದಾರೆ. ಮನುವಾದದ ಮೂಲಕ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ದೂರಿದರು.</p>.<p>ಪಿಎಸ್ಐ ಹಗರಣದ ಹಿನ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆಗೆ ಮುಂದಾಗಿದೆ. ಇದರಿಂದ ಪ್ರತಿಭಾವಂತ ಮತ್ತು ಪರಿಶ್ರಮದಿಂದ ವ್ಯಾಸಂಗ ನಡೆಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. 32 ಮಂದಿ ಈ ಅಕ್ರಮದಲ್ಲಿ ಭಾಗಿ ಆಗಿದ್ದಾರೆ ಎಂದು ತನಿಖಾ ಅಧಿಕಾರಿಗಳು ಹೇಳುತ್ತಿದ್ದಾರೆ. ಮರು ಪರೀಕ್ಷೆಯಿಂದ ಪ್ರತಿಭಾವಂತರಿಗೆ ಅನ್ಯಾಯವಾಗಲಿದೆ ಎಂದರು.</p>.<p>ಗೃಹ ಸಚಿವ ಆರಗ ಜ್ಞಾನೇಂದ್ರ ಸರಿ ಇದಿದ್ದರೆ ಈ ಅಕ್ರಮ ನಡೆಯುತ್ತಿರಲಿಲ್ಲ. ಸರ್ಕಾರದ ತಪ್ಪಿಗೆ ವಿದ್ಯಾರ್ಥಿಗಳು ಬಲಿ ಆಗುತ್ತಿದ್ದಾರೆ. ಮರು ಪರೀಕ್ಷೆಯಿಂದ ಬಹಳಷ್ಟು ಅಭ್ಯರ್ಥಿಗಳ ಮಾನಸಿಕ ಸ್ಥೈರ್ಯ ಕುಗ್ಗಿದೆ ಎಂದರು.</p>.<p>ಮರು ಪರೀಕ್ಷೆ ಬೇಡ ಎಂದು ಮುಖ್ಯಮಂತ್ರಿಗೆ ಮನವಿ ನೀಡಿದ್ದೇವೆ. ಮೇ 28ರಂದು ಅಭ್ಯರ್ಥಿಗಳ ಜತೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದರು.</p>.<p>ವಕೀಲಮುನಿರಾಜು ಮಾತನಾಡಿ,ಬಹುಜನ ಸಾಹಿತ್ಯ ಮತ್ತು ಭೋಜನ ಸಾಹಿತ್ಯಕ್ಕೂ ವ್ಯತ್ಯಾಸವಿದೆ. ರೋಹಿತ್ ಚಕ್ರತೀರ್ಥ ಅವರಿಗೆ ಈ ನೆಲದ ಸಾಹಿತ್ಯ ಮತ್ತು ಪರಂಪರೆಯ ಅರಿವು ಇಲ್ಲ. ನಾಡಗೀತೆಯನ್ನು ವಿಕೃತಗೊಳಿಸಿರುವುದು ಈ ನೆಲಕ್ಕೆ ಮಾಡಿದ ಅಪಮಾನ. ಇವರ ವಿರುದ್ಧ ಸ್ವಯಂ ಪ್ರೇರಿತವಾಗಿ ಸರ್ಕಾರ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.</p>.<p>ಸಮತಾ ಸೈನಿಕ ದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಅಶ್ವತ್ಥಪ್ಪ, ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್, ಶಿವಕುಮಾರ್, ಗಂಗಾಧರ್, ಹರಿಪ್ರಸಾದ್ ಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ‘ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ನಾಡಗೀತೆಯನ್ನು ತಿರುಚಿ ಅವಮಾನ ಮಾಡಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ವೇಳೆ ಮನುವಾದವನ್ನು ತುಂಬಿದ್ದಾರೆ’ ಅವರ ವಿರುದ್ಧ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು’ ಎಂದು ಸಮತಾ ಸೈನಿಕ ದಳದ ಮುಖಂಡರು ಆಗ್ರಹಿಸಿದರು.</p>.<p>ಇಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮತಾ ಸೈನಿದ ದಳದ ಜಿಲ್ಲಾ ಅಧ್ಯಕ್ಷ ಜಿ.ಸಿ.ವೆಂಕಟರಮಣಪ್ಪ, ‘ಬಿಜೆಪಿ ಸರ್ಕಾರ ಶಿಕ್ಷಣವನ್ನು ಕೇಸರಿಮಯಗೊಳಿಸಲು ಹೊರಟಿದೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಪಠ್ಯ ಪುಸ್ತಕ ಪರಿಷ್ಕರಣೆಯ ವಿಚಾರ ಈ ಮಟ್ಟಿನ ವಿವಾದ ಆಗಿರುವುದು ಇದೇ ಮೊದಲು’ ಎಂದು ಹೇಳಿದರು.</p>.<p>ಬಿಜೆಪಿ ನಡೆಯಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಗೊಂಡಿದ್ದಾರೆ. ರಾಜಕೀಯಕ್ಕಾಗಿ ವಿದ್ಯಾರ್ಥಿಗಳ ಜತೆ ಚೆಲ್ಲಾಟವಾಡುತ್ತಿದ್ದಾರೆ. ಬಿಜೆಪಿಗೆ ಕೋಮುಗಲಭೆ, ಜಾತಿ ವಿಚಾರ ಮುಗಿಯಿತು. ಈಗ ಮಕ್ಕಳ ವಿಚಾರದಲ್ಲಿಯೂ ವಿಷ ಉಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮಕೈಗೊಳ್ಳುವಂತೆ ಮತ್ತು ಈ ಸಮಿತಿಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸದಂತೆ ಸಮತಾ ಸೈನಿಕ ದಳವು ರಾಜ್ಯ ಮಟ್ಟದಲ್ಲಿ ಸಹಿ ಸಂಗ್ರಹ ಆಂದೋಲನವನ್ನು ಶೀಘ್ರದಲ್ಲಿಯೇ ನಡೆಸಲಿದೆ ಎಂದು ಹೇಳಿದರು.</p>.<p>ರಾಜ್ಯ ಬಿಜೆಪಿ ಸರ್ಕಾರ ಸಂವಿಧಾನ ಬದ್ಧವಾಗಿ ಆಡಳಿತವನ್ನು ನೀಡಬೇಕು. ಆದರೆ ಇವರು ಮನುವಾದದ ಮೇಲೆ ಆಡಳಿತ ನಡೆಸುತ್ತಿದ್ದಾರೆ. ಮನುವಾದದ ಮೂಲಕ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ದೂರಿದರು.</p>.<p>ಪಿಎಸ್ಐ ಹಗರಣದ ಹಿನ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆಗೆ ಮುಂದಾಗಿದೆ. ಇದರಿಂದ ಪ್ರತಿಭಾವಂತ ಮತ್ತು ಪರಿಶ್ರಮದಿಂದ ವ್ಯಾಸಂಗ ನಡೆಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. 32 ಮಂದಿ ಈ ಅಕ್ರಮದಲ್ಲಿ ಭಾಗಿ ಆಗಿದ್ದಾರೆ ಎಂದು ತನಿಖಾ ಅಧಿಕಾರಿಗಳು ಹೇಳುತ್ತಿದ್ದಾರೆ. ಮರು ಪರೀಕ್ಷೆಯಿಂದ ಪ್ರತಿಭಾವಂತರಿಗೆ ಅನ್ಯಾಯವಾಗಲಿದೆ ಎಂದರು.</p>.<p>ಗೃಹ ಸಚಿವ ಆರಗ ಜ್ಞಾನೇಂದ್ರ ಸರಿ ಇದಿದ್ದರೆ ಈ ಅಕ್ರಮ ನಡೆಯುತ್ತಿರಲಿಲ್ಲ. ಸರ್ಕಾರದ ತಪ್ಪಿಗೆ ವಿದ್ಯಾರ್ಥಿಗಳು ಬಲಿ ಆಗುತ್ತಿದ್ದಾರೆ. ಮರು ಪರೀಕ್ಷೆಯಿಂದ ಬಹಳಷ್ಟು ಅಭ್ಯರ್ಥಿಗಳ ಮಾನಸಿಕ ಸ್ಥೈರ್ಯ ಕುಗ್ಗಿದೆ ಎಂದರು.</p>.<p>ಮರು ಪರೀಕ್ಷೆ ಬೇಡ ಎಂದು ಮುಖ್ಯಮಂತ್ರಿಗೆ ಮನವಿ ನೀಡಿದ್ದೇವೆ. ಮೇ 28ರಂದು ಅಭ್ಯರ್ಥಿಗಳ ಜತೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದರು.</p>.<p>ವಕೀಲಮುನಿರಾಜು ಮಾತನಾಡಿ,ಬಹುಜನ ಸಾಹಿತ್ಯ ಮತ್ತು ಭೋಜನ ಸಾಹಿತ್ಯಕ್ಕೂ ವ್ಯತ್ಯಾಸವಿದೆ. ರೋಹಿತ್ ಚಕ್ರತೀರ್ಥ ಅವರಿಗೆ ಈ ನೆಲದ ಸಾಹಿತ್ಯ ಮತ್ತು ಪರಂಪರೆಯ ಅರಿವು ಇಲ್ಲ. ನಾಡಗೀತೆಯನ್ನು ವಿಕೃತಗೊಳಿಸಿರುವುದು ಈ ನೆಲಕ್ಕೆ ಮಾಡಿದ ಅಪಮಾನ. ಇವರ ವಿರುದ್ಧ ಸ್ವಯಂ ಪ್ರೇರಿತವಾಗಿ ಸರ್ಕಾರ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.</p>.<p>ಸಮತಾ ಸೈನಿಕ ದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಅಶ್ವತ್ಥಪ್ಪ, ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್, ಶಿವಕುಮಾರ್, ಗಂಗಾಧರ್, ಹರಿಪ್ರಸಾದ್ ಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>