<p><strong>ಗೌರಿಬಿದನೂರು: </strong>ತಾಲ್ಲೂಕಿನ ಜೋಡಿಬಿಸಲಹಳ್ಳಿಯಲ್ಲಿ ಜೂನ್ 14ರಂದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.</p>.<p>ಬಿ.ಎನ್. ಶ್ರೀನಿವಾಸಮೂರ್ತಿ (59) ಕೊಲೆಯಾದವರು.</p>.<p>ಅವರ ಹಿರಿಯ ಮಗನಾದ ರೋಹಿತ್ ತನ್ನ ಸ್ನೇಹಿತರಾದ ರಂಗನಾಥ್ ಹಾಗೂ ಶ್ರಾವಂಡಹಳ್ಳಿಯ ರವಿಕುಮಾರ್ಗೆ ತನ್ನ ತಂದೆಯನ್ನು ಹತ್ಯೆ ಮಾಡುವಂತೆ ₹ 1 ಲಕ್ಷ ಸುಪಾರಿ ನೀಡಿದ್ದ. ಬಳಿಕ ಈ ಮೂವರು ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಸೇರಿ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶ್ರೀನಿವಾಸಮೂರ್ತಿ ಎಂದಿನಂತೆ ರೇಷ್ಮೆ ತೋಟಕ್ಕೆ ನೀರು ಹಾಯಿಸಲು ಹೋಗಿದ್ದರು. ಆಗ ರಂಗನಾಥ್ ಮತ್ತು ರವಿಕುಮಾರ್ ಹೊಂಚು ಹಾಕಿ ಕಬ್ಬಿಣದ ರಾಡ್ನಿಂದ ಅವರ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು: </strong>ತಾಲ್ಲೂಕಿನ ಜೋಡಿಬಿಸಲಹಳ್ಳಿಯಲ್ಲಿ ಜೂನ್ 14ರಂದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.</p>.<p>ಬಿ.ಎನ್. ಶ್ರೀನಿವಾಸಮೂರ್ತಿ (59) ಕೊಲೆಯಾದವರು.</p>.<p>ಅವರ ಹಿರಿಯ ಮಗನಾದ ರೋಹಿತ್ ತನ್ನ ಸ್ನೇಹಿತರಾದ ರಂಗನಾಥ್ ಹಾಗೂ ಶ್ರಾವಂಡಹಳ್ಳಿಯ ರವಿಕುಮಾರ್ಗೆ ತನ್ನ ತಂದೆಯನ್ನು ಹತ್ಯೆ ಮಾಡುವಂತೆ ₹ 1 ಲಕ್ಷ ಸುಪಾರಿ ನೀಡಿದ್ದ. ಬಳಿಕ ಈ ಮೂವರು ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಸೇರಿ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಶ್ರೀನಿವಾಸಮೂರ್ತಿ ಎಂದಿನಂತೆ ರೇಷ್ಮೆ ತೋಟಕ್ಕೆ ನೀರು ಹಾಯಿಸಲು ಹೋಗಿದ್ದರು. ಆಗ ರಂಗನಾಥ್ ಮತ್ತು ರವಿಕುಮಾರ್ ಹೊಂಚು ಹಾಕಿ ಕಬ್ಬಿಣದ ರಾಡ್ನಿಂದ ಅವರ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>