ಮಂಜುನಾಥ್ (22) ಆರೋಪಿಯಾಗಿದ್ದು, ಈತನು ತನ್ನ ತಂದೆ ಮುನೇಗೌಡ (48) ರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಬೆಳೆದು ನಿಂತ ಮಗ ನಿತ್ಯ ಮದ್ಯ ಸೇವನೆ ಮಾಡಿಕೊಂಡು ಮನೆಯಲ್ಲಿ ಹಾಗೂ ಗ್ರಾಮದಲ್ಲಿ ಗಲಾಟೆ ಮಾಡುತ್ತಿದ್ದ ಪರಿಣಾಮವಾಗಿ ಆತನ ಪೋಷಕರು ದಂಡಿಸಿಬುದ್ಧಿವಾದ ಹೇಳುತ್ತಿದ್ದರು ಎನ್ನಲಾಗಿದೆ. ಮಂಗಳವಾರ ಮದ್ಯ ಸೇವಿಸಿ ಮನೆಗೆ ಬಂದ ಮಗನಿಗೆ ಪೋಷಕರು ಬುದ್ದಿ ಮಾತನ್ನು ಹೇಳಿದ ಕಾರಣ ತನ್ನ ತಾಯಿಯನ್ನು ಮನೆಯಿಂದ ಹೊರಗೆ ತಳ್ಳಿ ಮನೆಯೊಳಗಿದ್ದ ತಂದೆ ಮುನೇಗೌಡ ರನ್ನು ಮಗ ಮಂಜುನಾಥ್ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.