<p><strong>ಚಿಕ್ಕಬಳ್ಳಾಪುರ</strong>: ‘ಸೋನಿಯಾ ಗಾಂಧಿ ಅವರಿಗೆ ಧರ್ಮಸ್ಥಳದ ಬಗ್ಗೆ ಏನು ಗೊತ್ತಿದೆ? ನನ್ನ ಮಗನನ್ನು ಪ್ರಧಾನಿ ಮಾಡಬೇಕು ಎನ್ನುವುದಷ್ಟೇ ಅವರ ತಲೆಯಲ್ಲಿದೆ’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. </p><p>ಧರ್ಮಸ್ಥಳದಲ್ಲಿ ಹಲವರ ಶವಗಳನ್ನು ಹೂಳಲಾಗಿದೆ. ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿರುವ ವಿಚಾರವಾಗಿ ಇಲ್ಲಿ ಶುಕ್ರವಾರ ವಿ.ಸೋಮಣ್ಣ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.</p><p>‘ಹೆಣ್ಣು ಮಕ್ಕಳಿಗೆ ಯಾರೊ ಹೇಳಿಕೊಟ್ಟು ಮಾಡಿಸಿರಬಹುದು. ಸಿದ್ದರಾಮಯ್ಯ ಮತ್ತು ಅವರ ತಂಡ ಹೊಸದ ಕಥೆಯಂತಿದೆ. ಡಿ.ಕೆ.ಶಿವಕುಮಾರ್ ಕುಮಾರ್ ಬುದ್ಧಿವಂತಿಕೆಗೆ ಬೇಸರ ಮಾಡಿಕೊಂಡಿರುವವರು ಹೀಗೆ ಮಾಡಿಸಿರಬಹುದು. ಇಂತಹದ್ದೆಲ್ಲವನ್ನೂ ಮಾಡುವುದೇ ಕಾಂಗ್ರೆಸ್ನವರ ಕುತಂತ್ರ ಎಂದರು.</p><p>ಸೋನಿಯಾ ಗಾಂಧಿ ಅವರ ಬಗ್ಗೆ ಅಪಾರ ಗೌರವವಿದೆ. ಒಳ್ಳೆಯವರು. ಅವರು ಯಾವ ಡಿ.ಕೆ.ಶಿವಕುಮಾರ್, ಯಾವ ಲಕ್ಷ್ಮಿ ಹೆಬ್ಬಾಳ್ಕರ್ ಎನ್ನುವ ಸ್ಥಿತಿಯಲ್ಲಿ ಇದ್ದಾರೆ. ನನ್ನ ಮಗ ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎನ್ನುವ ತವಕದಲ್ಲಿ ಜೀವನ ಸಾಗಿಸುತ್ತಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ‘ಸೋನಿಯಾ ಗಾಂಧಿ ಅವರಿಗೆ ಧರ್ಮಸ್ಥಳದ ಬಗ್ಗೆ ಏನು ಗೊತ್ತಿದೆ? ನನ್ನ ಮಗನನ್ನು ಪ್ರಧಾನಿ ಮಾಡಬೇಕು ಎನ್ನುವುದಷ್ಟೇ ಅವರ ತಲೆಯಲ್ಲಿದೆ’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. </p><p>ಧರ್ಮಸ್ಥಳದಲ್ಲಿ ಹಲವರ ಶವಗಳನ್ನು ಹೂಳಲಾಗಿದೆ. ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿರುವ ವಿಚಾರವಾಗಿ ಇಲ್ಲಿ ಶುಕ್ರವಾರ ವಿ.ಸೋಮಣ್ಣ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.</p><p>‘ಹೆಣ್ಣು ಮಕ್ಕಳಿಗೆ ಯಾರೊ ಹೇಳಿಕೊಟ್ಟು ಮಾಡಿಸಿರಬಹುದು. ಸಿದ್ದರಾಮಯ್ಯ ಮತ್ತು ಅವರ ತಂಡ ಹೊಸದ ಕಥೆಯಂತಿದೆ. ಡಿ.ಕೆ.ಶಿವಕುಮಾರ್ ಕುಮಾರ್ ಬುದ್ಧಿವಂತಿಕೆಗೆ ಬೇಸರ ಮಾಡಿಕೊಂಡಿರುವವರು ಹೀಗೆ ಮಾಡಿಸಿರಬಹುದು. ಇಂತಹದ್ದೆಲ್ಲವನ್ನೂ ಮಾಡುವುದೇ ಕಾಂಗ್ರೆಸ್ನವರ ಕುತಂತ್ರ ಎಂದರು.</p><p>ಸೋನಿಯಾ ಗಾಂಧಿ ಅವರ ಬಗ್ಗೆ ಅಪಾರ ಗೌರವವಿದೆ. ಒಳ್ಳೆಯವರು. ಅವರು ಯಾವ ಡಿ.ಕೆ.ಶಿವಕುಮಾರ್, ಯಾವ ಲಕ್ಷ್ಮಿ ಹೆಬ್ಬಾಳ್ಕರ್ ಎನ್ನುವ ಸ್ಥಿತಿಯಲ್ಲಿ ಇದ್ದಾರೆ. ನನ್ನ ಮಗ ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎನ್ನುವ ತವಕದಲ್ಲಿ ಜೀವನ ಸಾಗಿಸುತ್ತಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>