<p><strong>ಚಿಕ್ಕಬಳ್ಳಾಪುರ</strong>: ಏಪ್ರಿಲ್ವರೆಗೆ 90 ದಿನಗಳ ಕಾಲ ವಿಶೇಷ ಮಧ್ಯಸ್ಥಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಸಾರ್ವಜನಿಕರು ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ರಾಮಲಿಂಗೇಗೌಡ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ವರ್ಷ ಜು.1ರಿಂದ ನವೆಂಬರ್ವರೆಗೆ ಮಧ್ಯಸ್ಥಿಕೆ ಅಭಿಯಾನ ನಡೆದಿತ್ತು. ಆಗ 2,092 ಪ್ರಕರಣಗಳು ಮಧ್ಯಸ್ಥಿಕೆಗೆ ನೋಂದಣಿಯಾಗಿತ್ತು. ಈ ಪೈಕಿ 1,069 ಪ್ರಕರಣಗಳನ್ನು ಮಧ್ಯಸ್ಥಿಕೆ ಅಭಿಯಾನ ಪ್ರಕ್ರಿಯೆಗೆ ಒಳಪಡಿಸಿ 190 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿತ್ತು. ಈ ವರ್ಷದ ಆರಂಭದಲ್ಲೇ ಎರಡನೇ ಹಂತದ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.</p>.<p>ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ನಿರ್ದೇಶನದಂತೆ ಜ.2 ರಿಂದ ಏಪ್ರಿಲ್ವರೆಗೆ 90 ದಿನ ಜಿಲ್ಲೆಯಲ್ಲಿಯೂ ವಿಶೇಷ ಮಧ್ಯಸ್ಥಿಕೆ 2.0 ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ ಎಂದು ಹೇಳಿದರು. </p>.<p>ಚೆಕ್ಬೌನ್ಸ್, ವೈವಾಹಿಕ, ಅಪಘಾತ, ಕೌಟುಂಬಿಕ ದೌರ್ಜನ್ಯ, ವಾಣಿಜ್ಯ ವಿವಾದ, ಸೇವಾ ವಿಷಯ, ಸಾಲದ ವಸೂಲಾತಿ, ಕಾರ್ಮಿಕ, ಭೂ ಸ್ವಾಧೀನ ಪ್ರಕರಣಗಳು ಸೇರಿದಂತೆ ಸೂಕ್ತ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳನ್ನು ಅಭಿಯಾನದಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.</p>.<p>ಕೆಲವು ಪ್ರಕರಣಗಳಲ್ಲಿ ಮಧ್ಯಸ್ಥಿಕೆವಹಿಸುವವರ ಪಾತ್ರ ಹಾಗೂ ಮಧ್ಯಸ್ಥಿಕೆಯು ಬಹಳ ಮುಖ್ಯವಾಗಿರುತ್ತದೆ. ಈ ಅಭಿಯಾನದಡಿ ಕಕ್ಷಿದಾರ ಹಾಗೂ ಎದುರುದಾರರ ಮಧ್ಯೆ ಸೂಕ್ತ ಸಂವಹನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು.</p>.<p>ಪರಸ್ಪರರು ತಮ್ಮ ಸಮ್ಮತಿ ಮತ್ತು ಒಪ್ಪಿಗೆ ಮೂಲಕ ವಿವಾದಗಳನ್ನು ಪರಿಹರಿಸಿಕೊಳ್ಳುವುದರಿಂದ ಉನ್ನತ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಕಾನೂನು ಸೇರಿದಂತೆ ಇತರ ದೃಷ್ಟಿಕೋನಗಳಲ್ಲಿಯೂ ಪ್ರಕರಣಗಳನ್ನು ಅವಲೋಕಿಸಿ ಅಭಿಯಾನದಲ್ಲಿ ಇತ್ಯರ್ಥಪಡಿಸಲಾಗುತ್ತದೆ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಜಿ. ಪ್ರಭು, ಜಿಲ್ಲಾ ಪಂಚಾಯಿತಿ ಸಿಇಒ ಡಾ. ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಏಪ್ರಿಲ್ವರೆಗೆ 90 ದಿನಗಳ ಕಾಲ ವಿಶೇಷ ಮಧ್ಯಸ್ಥಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಸಾರ್ವಜನಿಕರು ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ರಾಮಲಿಂಗೇಗೌಡ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ವರ್ಷ ಜು.1ರಿಂದ ನವೆಂಬರ್ವರೆಗೆ ಮಧ್ಯಸ್ಥಿಕೆ ಅಭಿಯಾನ ನಡೆದಿತ್ತು. ಆಗ 2,092 ಪ್ರಕರಣಗಳು ಮಧ್ಯಸ್ಥಿಕೆಗೆ ನೋಂದಣಿಯಾಗಿತ್ತು. ಈ ಪೈಕಿ 1,069 ಪ್ರಕರಣಗಳನ್ನು ಮಧ್ಯಸ್ಥಿಕೆ ಅಭಿಯಾನ ಪ್ರಕ್ರಿಯೆಗೆ ಒಳಪಡಿಸಿ 190 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿತ್ತು. ಈ ವರ್ಷದ ಆರಂಭದಲ್ಲೇ ಎರಡನೇ ಹಂತದ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.</p>.<p>ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ನಿರ್ದೇಶನದಂತೆ ಜ.2 ರಿಂದ ಏಪ್ರಿಲ್ವರೆಗೆ 90 ದಿನ ಜಿಲ್ಲೆಯಲ್ಲಿಯೂ ವಿಶೇಷ ಮಧ್ಯಸ್ಥಿಕೆ 2.0 ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ ಎಂದು ಹೇಳಿದರು. </p>.<p>ಚೆಕ್ಬೌನ್ಸ್, ವೈವಾಹಿಕ, ಅಪಘಾತ, ಕೌಟುಂಬಿಕ ದೌರ್ಜನ್ಯ, ವಾಣಿಜ್ಯ ವಿವಾದ, ಸೇವಾ ವಿಷಯ, ಸಾಲದ ವಸೂಲಾತಿ, ಕಾರ್ಮಿಕ, ಭೂ ಸ್ವಾಧೀನ ಪ್ರಕರಣಗಳು ಸೇರಿದಂತೆ ಸೂಕ್ತ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳನ್ನು ಅಭಿಯಾನದಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.</p>.<p>ಕೆಲವು ಪ್ರಕರಣಗಳಲ್ಲಿ ಮಧ್ಯಸ್ಥಿಕೆವಹಿಸುವವರ ಪಾತ್ರ ಹಾಗೂ ಮಧ್ಯಸ್ಥಿಕೆಯು ಬಹಳ ಮುಖ್ಯವಾಗಿರುತ್ತದೆ. ಈ ಅಭಿಯಾನದಡಿ ಕಕ್ಷಿದಾರ ಹಾಗೂ ಎದುರುದಾರರ ಮಧ್ಯೆ ಸೂಕ್ತ ಸಂವಹನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು.</p>.<p>ಪರಸ್ಪರರು ತಮ್ಮ ಸಮ್ಮತಿ ಮತ್ತು ಒಪ್ಪಿಗೆ ಮೂಲಕ ವಿವಾದಗಳನ್ನು ಪರಿಹರಿಸಿಕೊಳ್ಳುವುದರಿಂದ ಉನ್ನತ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಕಾನೂನು ಸೇರಿದಂತೆ ಇತರ ದೃಷ್ಟಿಕೋನಗಳಲ್ಲಿಯೂ ಪ್ರಕರಣಗಳನ್ನು ಅವಲೋಕಿಸಿ ಅಭಿಯಾನದಲ್ಲಿ ಇತ್ಯರ್ಥಪಡಿಸಲಾಗುತ್ತದೆ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಜಿ. ಪ್ರಭು, ಜಿಲ್ಲಾ ಪಂಚಾಯಿತಿ ಸಿಇಒ ಡಾ. ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>