ಬುಧವಾರ ಇಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ‘ಚನ್ನಪಟ್ಟಣದಿಂದ ಸ್ಪರ್ಧಿಸುವಂತೆ ಡಿಕೆಎಸ್ ಸಹೋದರರು ಒತ್ತಾಯ ಮಾಡಿದ್ದಾರೆ. ಆದರೆ ನನಗೆ ಅದರಲ್ಲಿ ಆಸಕ್ತಿ ಇಲ್ಲ. ಮಾಗಡಿಯಲ್ಲಿ ಬಾಲಕೃಷ್ಣ ಪರ ಪ್ರಚಾರ ಮಾಡುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧಿಸಿದರೆ ಅಲ್ಲಿಗೂ ತೆರಳಿ ಪ್ರಚಾರ ಕೈಗೊಳ್ಳುತ್ತೇನೆ’ ಎಂದರು.