<p><strong>ಚಿಕ್ಕಬಳ್ಳಾಪುರ: </strong>ಕೋವಿಡ್–19ಗೆ ತುತ್ತಾಗಿ ಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾಗಿ ಸೋಮವಾರ ಕರ್ತವ್ಯಕ್ಕೆ ವಾಪಾಸಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ವೈರ್ಲೆಸ್ ವಿಭಾಗದ ಹೆಡ್ ಕಾನ್ಸ್ಟೆಬಲ್ ಚಂದ್ರಶೇಖರ್ ಅವರಿಗೆ ಎಸ್ಪಿ ಕಚೇರಿಯಲ್ಲಿ ವಿಶೇಷ ಸ್ವಾಗತ ನೀಡಲಾಯಿತು.</p>.<p>ಸೋಮವಾರ ಕರ್ತವ್ಯಕ್ಕೆ ಮರಳಿದ ಚಂದ್ರಶೇಖರ್ ಅವರನ್ನು ಕೇದ್ರ ವಲಯ ಐಜಿಪಿ ಕೆ.ವಿ.ಶರತ್ಚಂದ್ರ ಮತ್ತು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಅವರು ಶಾಲು ಹೊದೆಸಿ, ಫಲಪುಷ್ಪ ನೀಡಿ ಸ್ವಾಗತಿಸುವ ಮೂಲಕ ಆರೋಗ್ಯದ ಬಗ್ಗೆ ವಿಚಾರಿಸಿ, ಆತ್ಮಸ್ಥೈರ್ಯ ತುಂಬಿದರು.</p>.<p>ಚಂದ್ರಶೇಖರ್ ಅವರು ಎಸ್ಪಿ ಕಚೇರಿ ಪ್ರವೇಶದ ವೇಳೆ ಪ್ರವೇಶದ್ವಾರದಲ್ಲಿ ಮಹಿಳಾ ಸಿಬ್ಬಂದಿ ಅವರ ಮೇಲೆ ಹೂವುಗಳನ್ನು ಎರಚಿ ಸ್ವಾಗತಿಸಿದ್ದು ವಿಶೇಷವಾಗಿತ್ತು.</p>.<p>ಮೇ ತಿಂಗಳಲ್ಲಿ ರಜೆಯ ಮೇಲೆ ಕೆಲ ದಿನ ತುಮಕೂರಿಗೆ ಹೋಗಿ ವಾಪಾಸಾಗಿದ್ದ ಚಂದ್ರಶೇಖರ್ ಅವರಿಗೆ ಕೋವಿಡ್ ತಗುಲಿರುವುದು ಮೇ 29 ರಂದು ಪತ್ತೆಯಾಗಿತ್ತು. ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಾನ್ಸ್ಟೆಬಲ್ ಒಬ್ಬರಿಗೆ ಕೋವಿಡ್ ತಗುಲಿದ್ದು ಕೇಳಿ ಪೊಲೀಸ್ ಇಲಾಖೆ ಬೆಚ್ಚಿತ್ತು.</p>.<p>ಸೋಂಕಿತ ಕಾನ್ಸ್ಟೆಬಲ್ ಪ್ರಾಥಮಿಕ ಸಂಪರ್ಕಕ್ಕೆ ಬಂದ ಸಹದ್ಯೋಗಿಗಳನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು. ಜತೆಗೆ, ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿರುವ ಪೊಲೀಸ್ ವಸತಿ ಸಂಕಿರ್ಣಗಳ ಪೈಕಿ ಎರಡು ಸಂಕೀರ್ಣಗಳನ್ನು ಸೀಲ್ಡೌನ್ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ಕೋವಿಡ್–19ಗೆ ತುತ್ತಾಗಿ ಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾಗಿ ಸೋಮವಾರ ಕರ್ತವ್ಯಕ್ಕೆ ವಾಪಾಸಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ವೈರ್ಲೆಸ್ ವಿಭಾಗದ ಹೆಡ್ ಕಾನ್ಸ್ಟೆಬಲ್ ಚಂದ್ರಶೇಖರ್ ಅವರಿಗೆ ಎಸ್ಪಿ ಕಚೇರಿಯಲ್ಲಿ ವಿಶೇಷ ಸ್ವಾಗತ ನೀಡಲಾಯಿತು.</p>.<p>ಸೋಮವಾರ ಕರ್ತವ್ಯಕ್ಕೆ ಮರಳಿದ ಚಂದ್ರಶೇಖರ್ ಅವರನ್ನು ಕೇದ್ರ ವಲಯ ಐಜಿಪಿ ಕೆ.ವಿ.ಶರತ್ಚಂದ್ರ ಮತ್ತು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಅವರು ಶಾಲು ಹೊದೆಸಿ, ಫಲಪುಷ್ಪ ನೀಡಿ ಸ್ವಾಗತಿಸುವ ಮೂಲಕ ಆರೋಗ್ಯದ ಬಗ್ಗೆ ವಿಚಾರಿಸಿ, ಆತ್ಮಸ್ಥೈರ್ಯ ತುಂಬಿದರು.</p>.<p>ಚಂದ್ರಶೇಖರ್ ಅವರು ಎಸ್ಪಿ ಕಚೇರಿ ಪ್ರವೇಶದ ವೇಳೆ ಪ್ರವೇಶದ್ವಾರದಲ್ಲಿ ಮಹಿಳಾ ಸಿಬ್ಬಂದಿ ಅವರ ಮೇಲೆ ಹೂವುಗಳನ್ನು ಎರಚಿ ಸ್ವಾಗತಿಸಿದ್ದು ವಿಶೇಷವಾಗಿತ್ತು.</p>.<p>ಮೇ ತಿಂಗಳಲ್ಲಿ ರಜೆಯ ಮೇಲೆ ಕೆಲ ದಿನ ತುಮಕೂರಿಗೆ ಹೋಗಿ ವಾಪಾಸಾಗಿದ್ದ ಚಂದ್ರಶೇಖರ್ ಅವರಿಗೆ ಕೋವಿಡ್ ತಗುಲಿರುವುದು ಮೇ 29 ರಂದು ಪತ್ತೆಯಾಗಿತ್ತು. ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಾನ್ಸ್ಟೆಬಲ್ ಒಬ್ಬರಿಗೆ ಕೋವಿಡ್ ತಗುಲಿದ್ದು ಕೇಳಿ ಪೊಲೀಸ್ ಇಲಾಖೆ ಬೆಚ್ಚಿತ್ತು.</p>.<p>ಸೋಂಕಿತ ಕಾನ್ಸ್ಟೆಬಲ್ ಪ್ರಾಥಮಿಕ ಸಂಪರ್ಕಕ್ಕೆ ಬಂದ ಸಹದ್ಯೋಗಿಗಳನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು. ಜತೆಗೆ, ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿರುವ ಪೊಲೀಸ್ ವಸತಿ ಸಂಕಿರ್ಣಗಳ ಪೈಕಿ ಎರಡು ಸಂಕೀರ್ಣಗಳನ್ನು ಸೀಲ್ಡೌನ್ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>