<p><strong>ಶಿಡ್ಲಘಟ್ಟ</strong>: ಶಿಡ್ಲಘಟ್ಟ-ದಿಬ್ಬೂರಹಳ್ಳಿ ಮಾರ್ಗದ ಹನುಮಂತಪುರ ಗೇಟ್ನ ಆಂಜನೇಯ ಗುಡಿಯಿಂದ ಬಸ್ ನಿಲ್ದಾಣದ ಸಲ್ಲಾಪುರಮ್ಮ ದೇವಾಲಯದವರೆಗೆ ಸಾಗಿದ ಶ್ರೀರಾಮ ಶೋಭಾಯಾತ್ರೆಯ ವೈಭವವನ್ನು ನಾಗರೀಕರು ಭಾನುವಾರ ಕಣ್ತುಂಬಿಕೊಂಡರು.</p>.<p>ಆಂಜನೇಯ ಗುಡಿಯಲ್ಲಿ ಪೂಜೆ ಸಲ್ಲಿಸಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಂಸದ ಎಸ್.ಮುನಿಸ್ವಾಮಿ ಹಾಗೂ ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಅವರು ಶ್ರೀರಾಮನ ಪ್ರತಿಮೆಯಿದ್ದ ಟ್ರ್ಯಾಕ್ಟರ್ ಚಲಾಯಿಸಿ ಯಾತ್ರೆಗೆ ಚಾಲನೆ ನೀಡಿದರು.</p>.<p>ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಹಿಂದೂ ಧರ್ಮದ ಅತಿದೊಡ್ಡದ ಅಸ್ಮಿತೆ ಶ್ರೀರಾಮ ಪ್ರಭು. ಶೋಭಾಯಾತ್ರೆಯು ನಮ್ಮೆಲ್ಲರ ಅಸ್ಮಿತೆಯಾಗಿದೆ.<br> ಹಿಂದೂ ಧರ್ಮದ ಆಚಾರ ವಿಚಾರ, ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಕಾಯಕವನ್ನು ನಾವೆಲ್ಲರೂ ಮಾಡುವ ಜತೆಗೆ ನಮ್ಮ ಮಕ್ಕಳು ಕೂಡ ಧರ್ಮವನ್ನು ಪಾಲಿಸಿಕೊಂಡು ಹೋಗುವ ಕೆಲಸ ಮಾಡಬೇಕಿದೆ ಎಂದರು.</p>.<p>ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಏರ್ಪಡಿಸಿರುವ ಶೋಭಾಯಾತ್ರೆಗೆ ರೈತಪರ, ದಲಿತಪರ, ಕನ್ನಡಪರ, ಪ್ರಗತಿಪರ ಸಂಘಟನೆಗಳು ಬೆಂಬಲ ನೀಡಿರುವುದು ಸಂತಸದ ವಿಚಾರ ಎಂದರು.</p>.<p>ಸೀಕಲ್ ರಾಮಚಂದ್ರಗೌಡ ಮಾತನಾಡಿ, ಶ್ರೀರಾಮನನ್ನು ನಾವು ಪಿತೃವಾಕ್ಯ ಪರಿಪಾಲಕನಾಗಿ ನೋಡುತ್ತೇವೆ. ಜಗತ್ತಿನ ಕೋಟ್ಯಂತರ ಮಂದಿಗೆ ಆದರ್ಶ ಪುರುಷನಾಗಿದ್ದಾನೆ ಎಂದರು.</p>.<p>ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ, ಅಖಂಡ ಭಾರತದಲ್ಲಿರುವ ನಾವೆಲ್ಲರೂ ಒಂದೆ ಎನ್ನುವ ಭಾವನೆ ಮೂಡಬೇಕಿದೆ. 12ನೇ ಶತಮಾನದಲ್ಲಿ ಬಸವಣ್ಣ ಹೇಳಿದಂತೆ ನಾವೆಲ್ಲರೂ ಸಂವಿಧಾನವನ್ನು ಪಾಲಿಸಬೇಕು. ಎಲ್ಲರೂ ಒಂದೆಂಬ ಭಾವನೆಯನ್ನು ಇನ್ನೂ ಹೆಚ್ಚು ಬೆಳೆಸಿಕೊಳ್ಳಬೇಕು ಎಂದರು.</p>.<p>ಆಂಜನೇಯ ವೇಷಧಾರಿ, ಡೊಳ್ಳು ಕುಣಿತ, ತಮಟೆ, ಚೆಂಡೆ ಇನ್ನಿತರೆ ಜನಪದ ಕಲಾ ತಂಡಗಳು ಶೋಭಾಯಾತ್ರೆಗೆ ಕಳೆ ನೀಡಿತು. ಪತಂಜಲಿ ಯೋಗ ಶಿಕ್ಷಣ ಸಮಿತಿ ಸದಸ್ಯರು, ಸಂಸ್ಕಾರ ಭಾರತಿ ಸದಸ್ಯರು ಶ್ರೀರಾಮನ ಹಾಡು ಹಾಡುತ್ತಾ ಸಾಥ್ ನೀಡಿದರು.</p>.<p>ಡಿವೈಎಸ್ಪಿ ಮುರಳೀಧರ್, ಸರ್ಕಲ್ ಇನ್ಸ್ಪೆಕ್ಟರ್ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ವಿಶ್ವ ಹಿಂದೂ ಪರಿಷತ್ನ ಅಧ್ಯಕ್ಷ ಚಲುವರಾಜು, ಬಜರಂಗದಳದ ವೆಂಕೋಬರಾವ್, ಕನ್ನಪ್ಪನಹಳ್ಳಿ ಮಲ್ಲೇಶ್ ಸೇರಿದಂತೆ ಮುಖಂಡರು, ನಾನಾ ಸಂಘ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ಶಿಡ್ಲಘಟ್ಟ-ದಿಬ್ಬೂರಹಳ್ಳಿ ಮಾರ್ಗದ ಹನುಮಂತಪುರ ಗೇಟ್ನ ಆಂಜನೇಯ ಗುಡಿಯಿಂದ ಬಸ್ ನಿಲ್ದಾಣದ ಸಲ್ಲಾಪುರಮ್ಮ ದೇವಾಲಯದವರೆಗೆ ಸಾಗಿದ ಶ್ರೀರಾಮ ಶೋಭಾಯಾತ್ರೆಯ ವೈಭವವನ್ನು ನಾಗರೀಕರು ಭಾನುವಾರ ಕಣ್ತುಂಬಿಕೊಂಡರು.</p>.<p>ಆಂಜನೇಯ ಗುಡಿಯಲ್ಲಿ ಪೂಜೆ ಸಲ್ಲಿಸಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಂಸದ ಎಸ್.ಮುನಿಸ್ವಾಮಿ ಹಾಗೂ ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಅವರು ಶ್ರೀರಾಮನ ಪ್ರತಿಮೆಯಿದ್ದ ಟ್ರ್ಯಾಕ್ಟರ್ ಚಲಾಯಿಸಿ ಯಾತ್ರೆಗೆ ಚಾಲನೆ ನೀಡಿದರು.</p>.<p>ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಹಿಂದೂ ಧರ್ಮದ ಅತಿದೊಡ್ಡದ ಅಸ್ಮಿತೆ ಶ್ರೀರಾಮ ಪ್ರಭು. ಶೋಭಾಯಾತ್ರೆಯು ನಮ್ಮೆಲ್ಲರ ಅಸ್ಮಿತೆಯಾಗಿದೆ.<br> ಹಿಂದೂ ಧರ್ಮದ ಆಚಾರ ವಿಚಾರ, ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಕಾಯಕವನ್ನು ನಾವೆಲ್ಲರೂ ಮಾಡುವ ಜತೆಗೆ ನಮ್ಮ ಮಕ್ಕಳು ಕೂಡ ಧರ್ಮವನ್ನು ಪಾಲಿಸಿಕೊಂಡು ಹೋಗುವ ಕೆಲಸ ಮಾಡಬೇಕಿದೆ ಎಂದರು.</p>.<p>ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಏರ್ಪಡಿಸಿರುವ ಶೋಭಾಯಾತ್ರೆಗೆ ರೈತಪರ, ದಲಿತಪರ, ಕನ್ನಡಪರ, ಪ್ರಗತಿಪರ ಸಂಘಟನೆಗಳು ಬೆಂಬಲ ನೀಡಿರುವುದು ಸಂತಸದ ವಿಚಾರ ಎಂದರು.</p>.<p>ಸೀಕಲ್ ರಾಮಚಂದ್ರಗೌಡ ಮಾತನಾಡಿ, ಶ್ರೀರಾಮನನ್ನು ನಾವು ಪಿತೃವಾಕ್ಯ ಪರಿಪಾಲಕನಾಗಿ ನೋಡುತ್ತೇವೆ. ಜಗತ್ತಿನ ಕೋಟ್ಯಂತರ ಮಂದಿಗೆ ಆದರ್ಶ ಪುರುಷನಾಗಿದ್ದಾನೆ ಎಂದರು.</p>.<p>ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ, ಅಖಂಡ ಭಾರತದಲ್ಲಿರುವ ನಾವೆಲ್ಲರೂ ಒಂದೆ ಎನ್ನುವ ಭಾವನೆ ಮೂಡಬೇಕಿದೆ. 12ನೇ ಶತಮಾನದಲ್ಲಿ ಬಸವಣ್ಣ ಹೇಳಿದಂತೆ ನಾವೆಲ್ಲರೂ ಸಂವಿಧಾನವನ್ನು ಪಾಲಿಸಬೇಕು. ಎಲ್ಲರೂ ಒಂದೆಂಬ ಭಾವನೆಯನ್ನು ಇನ್ನೂ ಹೆಚ್ಚು ಬೆಳೆಸಿಕೊಳ್ಳಬೇಕು ಎಂದರು.</p>.<p>ಆಂಜನೇಯ ವೇಷಧಾರಿ, ಡೊಳ್ಳು ಕುಣಿತ, ತಮಟೆ, ಚೆಂಡೆ ಇನ್ನಿತರೆ ಜನಪದ ಕಲಾ ತಂಡಗಳು ಶೋಭಾಯಾತ್ರೆಗೆ ಕಳೆ ನೀಡಿತು. ಪತಂಜಲಿ ಯೋಗ ಶಿಕ್ಷಣ ಸಮಿತಿ ಸದಸ್ಯರು, ಸಂಸ್ಕಾರ ಭಾರತಿ ಸದಸ್ಯರು ಶ್ರೀರಾಮನ ಹಾಡು ಹಾಡುತ್ತಾ ಸಾಥ್ ನೀಡಿದರು.</p>.<p>ಡಿವೈಎಸ್ಪಿ ಮುರಳೀಧರ್, ಸರ್ಕಲ್ ಇನ್ಸ್ಪೆಕ್ಟರ್ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ವಿಶ್ವ ಹಿಂದೂ ಪರಿಷತ್ನ ಅಧ್ಯಕ್ಷ ಚಲುವರಾಜು, ಬಜರಂಗದಳದ ವೆಂಕೋಬರಾವ್, ಕನ್ನಪ್ಪನಹಳ್ಳಿ ಮಲ್ಲೇಶ್ ಸೇರಿದಂತೆ ಮುಖಂಡರು, ನಾನಾ ಸಂಘ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>