<p><strong>ಚಿಕ್ಕಬಳ್ಳಾಪುರ</strong>: ತಾಲ್ಲೂಕಿನಶ್ರೀನಿವಾಸ ಸಾಗರ ಜಲಾಶಯ ಈಗ ತುಂಬಿದೆ. ಕೋಡಿ ಹರಿಯುತ್ತಿದೆ. ಇಂತಹ ಸಂದರ್ಭದಲ್ಲಿ ಸಾಗರವು ಪ್ರವಾಸಿಗರು ಹಾಗೂ ಯುವ ಸಮುದಾಯಕ್ಕೆ ಆಕರ್ಷಣೆಯ ಕೇಂದ್ರವಾಗುತ್ತದೆ.</p>.<p>ನಿತ್ಯ ಅಪಾರ ಸಂಖ್ಯೆಯಲ್ಲಿ ಇಲ್ಲಿಗೆಜನರು ಭೇಟಿ ನೀಡುತ್ತಾರೆ. ಆದರೆ ನೀರಿನಲ್ಲಿ ಆಟಕ್ಕೆ ಬರುವವರ ‘ಹುಚ್ಚಾಟ’ಗಳು ಸಹ ಹೆಚ್ಚಿವೆ. ಶ್ರೀನಿವಾಸ ಸಾಗರದ ಕೋಡಿಯ ತಡೆಗೋಡೆಯ ಮೇಲೆ ಏರಲು ಯುವಕರು ತಾ ಮುಂದು ನಾ ಮುಂದು ಎಂದು ಮುಗಿ ಬೀಳುತ್ತಿದ್ದಾರೆ.</p>.<p>ಭಾನುವಾರ ಹೀಗೆ ತಡೆಗೋಡೆಯ ಮೇಲೆ ಹತ್ತಿದ ಯುವಕನೊಬ್ಬ ಏಕಾಏಕಿ ಬಿದ್ದಿದ್ದಾನೆ. ಆದರೆ ಯಾವುದೇ ಪ್ರಾಣಾಪಾಯ ಆಗಿಲ್ಲ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈತ ಗೌರಿಬಿದನೂರು ತಾಲ್ಲೂಕು ಮೂಲದವರು ಎನ್ನಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೀಗೆ ತಡೆಗೋಡೆಯ ಮೇಲೆ ಹತ್ತುವವರ ಸಂಖ್ಯೆ ನಿತ್ಯಹೆಚ್ಚುತ್ತಲೇ ಇದೆ.</p>.<p>ಧುಮುಕುವ ನೀರಿನಲ್ಲಿನಾಲ್ಕಾರು ಯುವಕರು ಒಟ್ಟಿಗೆ ತಡೆಗೋಡೆಯನ್ನು ಹತ್ತುವುದು, ಪೈಪೋಟಿಗೆ ಬಿದ್ದಂತೆ ಮೇಲೆ ಏರುವುದು...ಇಂತಹ ದೃಶ್ಯಗಳು ಸಾಮಾನ್ಯ ಎನಿಸಿವೆ. ಕಡಿದಾದ ತಡೆಗೋಡೆಯಿಂದ ಸ್ವಲ್ಪ ಜಾರಿದರೂ ಕೆಳಕ್ಕೆ ಬೀಳಬೇಕಾಗುತ್ತದೆ.</p>.<p>‘ಇಲ್ಲಿ ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಕಲ್ಪಿಸಬೇಕು. ನೀರಿನಲ್ಲಿ ಆಟವಾಡಲಿ. ಆದರೆ ಹೀಗೆ ಹುಚ್ಚಾಟಗಳು ಅನಗತ್ಯ’ ಎನ್ನುತ್ತಾರೆ ಪ್ರವಾಸಿಗರ ಚಿಕ್ಕಬಳ್ಳಾಪುರದ ರಮೇಶ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ತಾಲ್ಲೂಕಿನಶ್ರೀನಿವಾಸ ಸಾಗರ ಜಲಾಶಯ ಈಗ ತುಂಬಿದೆ. ಕೋಡಿ ಹರಿಯುತ್ತಿದೆ. ಇಂತಹ ಸಂದರ್ಭದಲ್ಲಿ ಸಾಗರವು ಪ್ರವಾಸಿಗರು ಹಾಗೂ ಯುವ ಸಮುದಾಯಕ್ಕೆ ಆಕರ್ಷಣೆಯ ಕೇಂದ್ರವಾಗುತ್ತದೆ.</p>.<p>ನಿತ್ಯ ಅಪಾರ ಸಂಖ್ಯೆಯಲ್ಲಿ ಇಲ್ಲಿಗೆಜನರು ಭೇಟಿ ನೀಡುತ್ತಾರೆ. ಆದರೆ ನೀರಿನಲ್ಲಿ ಆಟಕ್ಕೆ ಬರುವವರ ‘ಹುಚ್ಚಾಟ’ಗಳು ಸಹ ಹೆಚ್ಚಿವೆ. ಶ್ರೀನಿವಾಸ ಸಾಗರದ ಕೋಡಿಯ ತಡೆಗೋಡೆಯ ಮೇಲೆ ಏರಲು ಯುವಕರು ತಾ ಮುಂದು ನಾ ಮುಂದು ಎಂದು ಮುಗಿ ಬೀಳುತ್ತಿದ್ದಾರೆ.</p>.<p>ಭಾನುವಾರ ಹೀಗೆ ತಡೆಗೋಡೆಯ ಮೇಲೆ ಹತ್ತಿದ ಯುವಕನೊಬ್ಬ ಏಕಾಏಕಿ ಬಿದ್ದಿದ್ದಾನೆ. ಆದರೆ ಯಾವುದೇ ಪ್ರಾಣಾಪಾಯ ಆಗಿಲ್ಲ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈತ ಗೌರಿಬಿದನೂರು ತಾಲ್ಲೂಕು ಮೂಲದವರು ಎನ್ನಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೀಗೆ ತಡೆಗೋಡೆಯ ಮೇಲೆ ಹತ್ತುವವರ ಸಂಖ್ಯೆ ನಿತ್ಯಹೆಚ್ಚುತ್ತಲೇ ಇದೆ.</p>.<p>ಧುಮುಕುವ ನೀರಿನಲ್ಲಿನಾಲ್ಕಾರು ಯುವಕರು ಒಟ್ಟಿಗೆ ತಡೆಗೋಡೆಯನ್ನು ಹತ್ತುವುದು, ಪೈಪೋಟಿಗೆ ಬಿದ್ದಂತೆ ಮೇಲೆ ಏರುವುದು...ಇಂತಹ ದೃಶ್ಯಗಳು ಸಾಮಾನ್ಯ ಎನಿಸಿವೆ. ಕಡಿದಾದ ತಡೆಗೋಡೆಯಿಂದ ಸ್ವಲ್ಪ ಜಾರಿದರೂ ಕೆಳಕ್ಕೆ ಬೀಳಬೇಕಾಗುತ್ತದೆ.</p>.<p>‘ಇಲ್ಲಿ ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಕಲ್ಪಿಸಬೇಕು. ನೀರಿನಲ್ಲಿ ಆಟವಾಡಲಿ. ಆದರೆ ಹೀಗೆ ಹುಚ್ಚಾಟಗಳು ಅನಗತ್ಯ’ ಎನ್ನುತ್ತಾರೆ ಪ್ರವಾಸಿಗರ ಚಿಕ್ಕಬಳ್ಳಾಪುರದ ರಮೇಶ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>