<p><strong>ಚಿಕ್ಕಬಳ್ಳಾಪುರ</strong>: ರಾಜ್ಯದಾದ್ಯಂತ ಸೋಮವಾರದಿಂದ ಅಂಗನವಾಡಿಗಳು ಆರಂಭವಾಗಿದ್ದು ಜಿಲ್ಲೆಯಲ್ಲಿಯೂ ಚಿಣ್ಣರಿಗೆ ಸಿಹಿ ನೀಡಿ ಅಂಗನವಾಡಿಗಳಿಗೆ ಬರ ಮಾಡಿಕೊಳ್ಳಲಾಯಿತು. ಒಂದೂಮುಕ್ಕಾಲು ವರ್ಷಗಳ ನಂತರ ಅಂಗನವಾಡಿಗೆ ಬಂದ ಮಕ್ಕಳಿಗೆ ಗಣ್ಯರು ಮತ್ತು ಅಧಿಕಾರಿಗಳು ಸಿಹಿ ತಿನ್ನಿಸಿದರು. ಮಕ್ಕಳ ಜತೆಗೆ ಪೋಷಕರೂ ಬಂದಿದ್ದರು.</p>.<p>‘ಅಂಗನವಾಡಿ ಮಕ್ಕಳ ಪ್ರವೇಶೋತ್ಸವ’ ಪ್ರಯುಕ್ತ ಕೇಂದ್ರಗಳಲ್ಲಿ ಬಲೂನ್, ತೋರಣ ಕಟ್ಟಲಾಗಿತ್ತು. ಮಕ್ಕಳಿಗೆ ಕಾರ್ಯಕರ್ತೆಯರು ಹೂವು, ಚಾಕೊಲೆಟ್, ಬಿಸ್ಕತ್ ನೀಡಲಾಯಿತು.</p>.<p>ನಗರದ ಎಚ್.ಎಸ್ ಗಾರ್ಡನ್ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ‘ಅಂಗನವಾಡಿ ಮಕ್ಕಳ ಪ್ರವೇಶೋತ್ಸವ’ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಆರ್.ಲತಾ ಕೇಕ್ ಕತ್ತರಿಸಿ ಮಕ್ಕಳಿಗೆ ತಿನ್ನಿಸುವ ಮೂಲಕ ಉದ್ಘಾಟಿಸಿದರು.</p>.<p>ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿ ಮಗುವಿನ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಕೋವಿಡ್ ಸೋಂಕು ಜಿಲ್ಲೆಯ ಯಾವ ಮಗುವಿಗೂ ಹರಡದಂತೆ ಹೆಚ್ಚಿನ ಗಮನವಹಿಸಬೇಕು ಎಂದು ಆರ್.ಲತಾ ಸೂಚಿಸಿದರು.</p>.<p>ಅಂಗನವಾಡಿ ಕೇಂದ್ರಗಳು ಆರಂಭಗೊಳ್ಳುತ್ತಿರುವುದು ಸಂತಸದ ಬೆಳವಣಿಗೆ. ಮಕ್ಕಳ ಸುರಕ್ಷತೆ ಬಹಳ ಮುಖ್ಯ. ಅಂಗನವಾಡಿ ಕೇಂದ್ರಗಳ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಅಂಗನವಾಡಿಗಳ ಮಕ್ಕಳು ಬಹಳ ಚಿಕ್ಕವರಾಗಿದ್ದಾರೆ. ಅವರಿಗೆ ಹೆಚ್ಚಿನ ಕಾಳಜಿಯ ಹಾಗೂ ಪಾಲನೆಯ ಅವಶ್ಯಕತೆ ಇದೆ ಎಂದರು.</p>.<p>ಜಿಲ್ಲೆಯಲ್ಲಿ ಈಗಾಗಲೇ ಎಲ್ಲ ತರಗತಿಗಳು ನಡೆಯುತ್ತಿವೆ. ಇಲ್ಲಿಯವರೆಗೆ ಯಾವ ಶಾಲಾ ಮಕ್ಕಳಿಗೂ ಕೋವಿಡ್ ಬಂದಿಲ್ಲ. ಜಿಲ್ಲೆಯಲ್ಲಿ ಕೋವಿಡ್ ಗಣನೀಯವಾಗಿ ಕಡಿಮೆ ಆಗಿದೆ. ಅಂದಮಾತ್ರಕ್ಕೆ ಯಾರೂ ನಿರ್ಲಕ್ಷ್ಯವಹಿಸಬಾರದು. ಕೋವಿಡ್ ಪ್ರಕರಣಗಳನ್ನು ಶೂನ್ಯಗೊಳಿಸಲು ಸಹಕರಿಸಬೇಕು ಎಂದು ಕೋರಿದರು.</p>.<p>ಬಹುದಿನಗಳ ನಂತರ ಅಂಗನವಾಡಿ ಕೇಂದ್ರಕ್ಕೆ ಬಂದ ಮಕ್ಕಳಲ್ಲಿ ಉಂಟಾದ ಅನುಭವವನ್ನು ಹಾಗೂ ಮಕ್ಕಳ ಯೋಗಕ್ಷೇಮವನ್ನು ಜಿಲ್ಲಾಧಿಕಾರಿ ವಿಚಾರಿಸಿದರು.</p>.<p>ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ನಗರಸಭೆ ಅಧ್ಯಕ್ಷ ಆನಂದ ರೆಡ್ಡಿ ಬಾಬು, ಪೌರಾಯುಕ್ತ ಮಹಂತೇಶ್, ನಗರಸಭೆ ಸದಸ್ಯರಾದ ಸ್ವಾತಿ ಮಂಜುನಾಥ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಶ್ವತ್ಥಮ್ಮ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ರಾಜ್ಯದಾದ್ಯಂತ ಸೋಮವಾರದಿಂದ ಅಂಗನವಾಡಿಗಳು ಆರಂಭವಾಗಿದ್ದು ಜಿಲ್ಲೆಯಲ್ಲಿಯೂ ಚಿಣ್ಣರಿಗೆ ಸಿಹಿ ನೀಡಿ ಅಂಗನವಾಡಿಗಳಿಗೆ ಬರ ಮಾಡಿಕೊಳ್ಳಲಾಯಿತು. ಒಂದೂಮುಕ್ಕಾಲು ವರ್ಷಗಳ ನಂತರ ಅಂಗನವಾಡಿಗೆ ಬಂದ ಮಕ್ಕಳಿಗೆ ಗಣ್ಯರು ಮತ್ತು ಅಧಿಕಾರಿಗಳು ಸಿಹಿ ತಿನ್ನಿಸಿದರು. ಮಕ್ಕಳ ಜತೆಗೆ ಪೋಷಕರೂ ಬಂದಿದ್ದರು.</p>.<p>‘ಅಂಗನವಾಡಿ ಮಕ್ಕಳ ಪ್ರವೇಶೋತ್ಸವ’ ಪ್ರಯುಕ್ತ ಕೇಂದ್ರಗಳಲ್ಲಿ ಬಲೂನ್, ತೋರಣ ಕಟ್ಟಲಾಗಿತ್ತು. ಮಕ್ಕಳಿಗೆ ಕಾರ್ಯಕರ್ತೆಯರು ಹೂವು, ಚಾಕೊಲೆಟ್, ಬಿಸ್ಕತ್ ನೀಡಲಾಯಿತು.</p>.<p>ನಗರದ ಎಚ್.ಎಸ್ ಗಾರ್ಡನ್ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ‘ಅಂಗನವಾಡಿ ಮಕ್ಕಳ ಪ್ರವೇಶೋತ್ಸವ’ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಆರ್.ಲತಾ ಕೇಕ್ ಕತ್ತರಿಸಿ ಮಕ್ಕಳಿಗೆ ತಿನ್ನಿಸುವ ಮೂಲಕ ಉದ್ಘಾಟಿಸಿದರು.</p>.<p>ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿ ಮಗುವಿನ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಕೋವಿಡ್ ಸೋಂಕು ಜಿಲ್ಲೆಯ ಯಾವ ಮಗುವಿಗೂ ಹರಡದಂತೆ ಹೆಚ್ಚಿನ ಗಮನವಹಿಸಬೇಕು ಎಂದು ಆರ್.ಲತಾ ಸೂಚಿಸಿದರು.</p>.<p>ಅಂಗನವಾಡಿ ಕೇಂದ್ರಗಳು ಆರಂಭಗೊಳ್ಳುತ್ತಿರುವುದು ಸಂತಸದ ಬೆಳವಣಿಗೆ. ಮಕ್ಕಳ ಸುರಕ್ಷತೆ ಬಹಳ ಮುಖ್ಯ. ಅಂಗನವಾಡಿ ಕೇಂದ್ರಗಳ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಅಂಗನವಾಡಿಗಳ ಮಕ್ಕಳು ಬಹಳ ಚಿಕ್ಕವರಾಗಿದ್ದಾರೆ. ಅವರಿಗೆ ಹೆಚ್ಚಿನ ಕಾಳಜಿಯ ಹಾಗೂ ಪಾಲನೆಯ ಅವಶ್ಯಕತೆ ಇದೆ ಎಂದರು.</p>.<p>ಜಿಲ್ಲೆಯಲ್ಲಿ ಈಗಾಗಲೇ ಎಲ್ಲ ತರಗತಿಗಳು ನಡೆಯುತ್ತಿವೆ. ಇಲ್ಲಿಯವರೆಗೆ ಯಾವ ಶಾಲಾ ಮಕ್ಕಳಿಗೂ ಕೋವಿಡ್ ಬಂದಿಲ್ಲ. ಜಿಲ್ಲೆಯಲ್ಲಿ ಕೋವಿಡ್ ಗಣನೀಯವಾಗಿ ಕಡಿಮೆ ಆಗಿದೆ. ಅಂದಮಾತ್ರಕ್ಕೆ ಯಾರೂ ನಿರ್ಲಕ್ಷ್ಯವಹಿಸಬಾರದು. ಕೋವಿಡ್ ಪ್ರಕರಣಗಳನ್ನು ಶೂನ್ಯಗೊಳಿಸಲು ಸಹಕರಿಸಬೇಕು ಎಂದು ಕೋರಿದರು.</p>.<p>ಬಹುದಿನಗಳ ನಂತರ ಅಂಗನವಾಡಿ ಕೇಂದ್ರಕ್ಕೆ ಬಂದ ಮಕ್ಕಳಲ್ಲಿ ಉಂಟಾದ ಅನುಭವವನ್ನು ಹಾಗೂ ಮಕ್ಕಳ ಯೋಗಕ್ಷೇಮವನ್ನು ಜಿಲ್ಲಾಧಿಕಾರಿ ವಿಚಾರಿಸಿದರು.</p>.<p>ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ನಗರಸಭೆ ಅಧ್ಯಕ್ಷ ಆನಂದ ರೆಡ್ಡಿ ಬಾಬು, ಪೌರಾಯುಕ್ತ ಮಹಂತೇಶ್, ನಗರಸಭೆ ಸದಸ್ಯರಾದ ಸ್ವಾತಿ ಮಂಜುನಾಥ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಶ್ವತ್ಥಮ್ಮ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>