ಈ ಕುರಿತು ಪ್ರತಿಕಾ ಹೇಳಿಕೆ ನೀಡಿರುವ ಅವರು, ಶಿಡ್ಲಘಟ್ಟ ನಗರದ ಒಂದನೇ ನಗರ್ತ ಪೇಟೆಯ ಶ್ರೀಕಾಳಿಕಾಂಬ ಕಮ್ಮಟೇಶ್ವರಸ್ವಾಮಿ ಸಮುದಾಯ ಭವನದಲ್ಲಿ 2020-21 ನೇ ಸಾಲಿನ ಕರಾಟೆ ಚಾಂಪಿಯನ್ಶಿಪ್ ನಡೆಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ಮೊದಲು ಕರಾಟೆಪಟುಗಳ ತಾಲೀಮು ನಡೆಸಿ, ನಂತರ ವಿವಿಧ ಸ್ಪರ್ಧೆಗಳನ್ನು ನಡೆಸಲಾಗುವುದು. ಸಂಜೆ ವೇಳೆಗೆ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.