ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸರ್ಕಾರ ವಿವಿಧ ಇಲಾಖೆ, ನಿಗಮಗಳ ಮೂಲಕ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದೆ. ತಾಲ್ಲೂಕಿನ ಕಿತ್ತೂರುರಾಣಿ ಚೆನ್ಮಮ್ಮ, ಮೊರಾರ್ಜಿ ಶಾಲಾ ಕಟ್ಟಡ ನಿರ್ಮಾಣ ಮಾಡಿ ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಗಮನ ನೀಡಿ, ಅನುದಾನ ಬಿಡುಗಡೆ ಮಾಡಿಸಿದ್ದೇನೆ. ₹2 ಕೋಟಿ ವೆಚ್ಚದಲ್ಲಿ ಪೀಠೋಪಕರಣ ಖರೀದಿ ಮಾಡಲಾಗುವುದು. ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.