ಒಂದೂವರೆ ತಿಂಗಳಿನಿಂದ ಮದ್ಯ ಮಾರಾಟ ಇಲ್ಲದ ಕಾರಣ ಗ್ರಾಮಗಳಲ್ಲಿ ನೆಮ್ಮದಿ, ಶಾಂತಿ ಇತ್ತು. ಕುಡಿದು ಗಲಾಟೆ, ಜಗಳ ಮಾಡುತ್ತಿದ್ದವರು, ಸಾಲ ಕೇಳುವವರು ಇಲ್ಲವಾಗಿದ್ದರು. ಕುಡಿತದ ಚಟವಿದ್ದವರು ಮೂರು ಹೊತ್ತೂ ಚೆನ್ನಾಗಿ ತಿನ್ನುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಂಡಿದ್ದರು. ಕೌಟುಂಬಿಕ ವಾತಾವರಣ ಸುಧಾರಿಸಿತ್ತು. ಕುಡಿತದ ಚಟವಿದ್ದ ಚಿಕ್ಕಮುನಿಯಪ್ಪ, ಉಳಿಸಿದ ಹಣದಲ್ಲಿ ಕುರಿ ಸಾಕಣಿಕೆದಾರನಾದುದು ಸಕಾರಾತ್ಮಕ ಬೆಳವಣಿಗೆ. ಇಂಥಹವರನ್ನು ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎ.ಎಂ.ತ್ಯಾಗರಾಜ್ ತಿಳಿಸಿದರು.