<p><strong>ಬಾಗೇಪಲ್ಲಿ</strong>: ಪಟ್ಟಣದ ಡಿವಿಜಿ ಮುಖ್ಯರಸ್ತೆಯಲ್ಲಿರುವ ವಿದ್ಯುತ್ ಕಂಬಗಳು ಹೆಸರಿಗಷ್ಟೇ ಎಂಬಂತಾಗಿದೆ. ಯಾಕೆಂದರೆ, ಈ ವಿದ್ಯುತ್ ಕಂಬಗಳಲ್ಲಿ ದೀಪಗಳೇ ಉರಿಯುವುದಿಲ್ಲ. ಇದರಿಂದಾಗಿ ರಾತ್ರಿ ಹೊತ್ತಿನಲ್ಲಿ ಈ ರಸ್ತೆಯಲ್ಲಿ ವಾಹನ ಸವಾರರು ಮತ್ತು ಪಾದಚಾರಿಗಳು ಕತ್ತಲಲ್ಲೇ ಸಂಚರಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. </p>.<p>ಪುರಸಭೆ ಅಧಿಕಾರಿಗಳು ಮತ್ತು ಆಡಳಿತ ಮಂಡಳಿಯವರು ಗುಣಮಟ್ಟದ ವಿದ್ಯುತ್ ಬೀದಿದೀಪಗಳನ್ನು ಅಳವಡಿಸದೆ ನಿರ್ಲಕ್ಷ್ಯತೆ ವಹಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. </p>.<p>ಪಟ್ಟಣದ ಸಿವಿಲ್ ನ್ಯಾಯಾಲಯದಿಂದ ನ್ಯಾಷನಲ್ ಕಾಲೇಜಿನವರೆಗಿನ ಮುಖ್ಯರಸ್ತೆಯಲ್ಲಿ ಲಾರಿ, ಟೆಂಪೊ, ಆಟೊ, ಮಿನಿ ಬಸ್ ಸೇರಿದಂತೆ ದ್ವಿಚಕ್ರ ವಾಹನಗಳು ಸಂಚರಿಸುತ್ತವೆ. ಪಾದಚಾರಿಗಳು ಮತ್ತು ವಾಯುವಿಹಾರಿಗಳು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಈ ರಸ್ತೆಯ ವಿದ್ಯುತ್ ಕಂಬಗಳಲ್ಲಿ ಗುಣಮಟ್ಟದ ದೀಪಗಳನ್ನು ಅಳವಡಿಸಿಲ್ಲ. ಕೆಲವು ಕಡೆಗಳಲ್ಲಿ ಬಲ್ಬ್ಗಳೇ ಅಳವಡಿಸಲಾಗಿಲ್ಲ. ಇದರಿಂದಾಗಿ ಮುಖ್ಯರಸ್ತೆಯು ರಾತ್ರಿ ಹೊತ್ತಿನಲ್ಲಿ ಕಗ್ಗತ್ತಲ ಕಾರ್ಮೋಡ ಕವಿದಿದೆ. </p>.<p>ಮುಖ್ಯರಸ್ತೆಯಲ್ಲಿ ಡಾ.ಎಚ್.ಎನ್. ವೃತ್ತ, ಡಿಸಿಸಿ ಬ್ಯಾಂಕ್ ಮುಂದೆ ಹಾಗೂ ಸರ್ಕಾರಿ ಬಸ್ ನಿಲ್ದಾಣದ ಮುಂದೆ ಹೈಮಾಸ್ಟ್ ಕಂಬಗಳನ್ನು ಹಾಕಲಾಗಿದೆ. ಆದರೆ ಕಂಬಗಳಿಗೆ ದೀಪಗಳನ್ನೇ ಹಾಕಿಲ್ಲ. ಇಲ್ಲಿ ಅಳವಡಿಸಲಾಗಿರುವ ಹೈಮಾಸ್ಟ್ ಹೆಸರಿಗಷ್ಟೇ ಎಂಬಂತಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. </p>.<p>ವಿದ್ಯುತ್ ಬೀದಿದೀಪಗಳ ನಿರ್ವಹಣೆ, ದುರಸ್ತಿಗಾಗಿ ಪುರಸಭೆಯಿಂದ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಗುತ್ತಿಗೆದಾರರಿಗೆ ನೀಡಲಾಗಿದೆ. ಆದರೆ, ರಸ್ತೆಗಳು ಮಾತ್ರ ಕತ್ತಲೆಯಲ್ಲಿವೆ ಎಂದು ಪುರಸಭೆ ಮಾಜಿ ಸದಸ್ಯ ಜಿ. ಕೃಷ್ಣಪ್ಪ ಅಸಮಾಧಾನ ವ್ಯಕ್ತಪಡಿಸಿದರು. </p>.<p>‘ಬೆಳಕೇ ಇಲ್ಲದ ಮುಖ್ಯರಸ್ತೆಯಲ್ಲಿ ಸಂಚರಿಸಲು ಭಯವಾಗುತ್ತದೆ. ಕಗ್ಗತ್ತಲಿನಿಂದಾಗಿ ಜನರ ಓಡಾಟಕ್ಕೆ ತೊಂದರೆಯಾಗಿದೆ. ವಾಯುವಿಹಾರ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ಪಟ್ಟಣದ ಒಂದನೇ ವಾರ್ಡ್ ನಿವಾಸಿ ನಿರ್ಮಲಮ್ಮ ತಿಳಿಸಿದರು. </p>.<p>ಬೀದಿದೀಪಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಎಂ. ಶ್ರೀನಿವಾಸ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<div><blockquote>ಪುರಸಭೆ ಅಧಿಕಾರಿಗಳು ಆಡಳಿತ ಮಂಡಳಿಯವರು ಕೂಡಲೇ ಗುಣಮಟ್ಟದ ದೀಪಗಳನ್ನು ಹಾಕಿಸಬೇಕು. ಹೈಮಾಸ್ಟ್ ದೀಪಗಳಲ್ಲಿ ಬಲ್ಬ್ ಅಳವಡಿಸಬೇಕು. ಇಲ್ಲವಾದರೆ ಪುರಸಭೆ ಮುಂದೆ ಹೋರಾಟ ಮಾಡಲಾಗುವುದು.</blockquote><span class="attribution">– ಜಬೀವುಲ್ಲಾ, ಕನ್ನಡಪರ ಸಂಘಟನೆ ಮುಖಂಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ</strong>: ಪಟ್ಟಣದ ಡಿವಿಜಿ ಮುಖ್ಯರಸ್ತೆಯಲ್ಲಿರುವ ವಿದ್ಯುತ್ ಕಂಬಗಳು ಹೆಸರಿಗಷ್ಟೇ ಎಂಬಂತಾಗಿದೆ. ಯಾಕೆಂದರೆ, ಈ ವಿದ್ಯುತ್ ಕಂಬಗಳಲ್ಲಿ ದೀಪಗಳೇ ಉರಿಯುವುದಿಲ್ಲ. ಇದರಿಂದಾಗಿ ರಾತ್ರಿ ಹೊತ್ತಿನಲ್ಲಿ ಈ ರಸ್ತೆಯಲ್ಲಿ ವಾಹನ ಸವಾರರು ಮತ್ತು ಪಾದಚಾರಿಗಳು ಕತ್ತಲಲ್ಲೇ ಸಂಚರಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. </p>.<p>ಪುರಸಭೆ ಅಧಿಕಾರಿಗಳು ಮತ್ತು ಆಡಳಿತ ಮಂಡಳಿಯವರು ಗುಣಮಟ್ಟದ ವಿದ್ಯುತ್ ಬೀದಿದೀಪಗಳನ್ನು ಅಳವಡಿಸದೆ ನಿರ್ಲಕ್ಷ್ಯತೆ ವಹಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. </p>.<p>ಪಟ್ಟಣದ ಸಿವಿಲ್ ನ್ಯಾಯಾಲಯದಿಂದ ನ್ಯಾಷನಲ್ ಕಾಲೇಜಿನವರೆಗಿನ ಮುಖ್ಯರಸ್ತೆಯಲ್ಲಿ ಲಾರಿ, ಟೆಂಪೊ, ಆಟೊ, ಮಿನಿ ಬಸ್ ಸೇರಿದಂತೆ ದ್ವಿಚಕ್ರ ವಾಹನಗಳು ಸಂಚರಿಸುತ್ತವೆ. ಪಾದಚಾರಿಗಳು ಮತ್ತು ವಾಯುವಿಹಾರಿಗಳು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಈ ರಸ್ತೆಯ ವಿದ್ಯುತ್ ಕಂಬಗಳಲ್ಲಿ ಗುಣಮಟ್ಟದ ದೀಪಗಳನ್ನು ಅಳವಡಿಸಿಲ್ಲ. ಕೆಲವು ಕಡೆಗಳಲ್ಲಿ ಬಲ್ಬ್ಗಳೇ ಅಳವಡಿಸಲಾಗಿಲ್ಲ. ಇದರಿಂದಾಗಿ ಮುಖ್ಯರಸ್ತೆಯು ರಾತ್ರಿ ಹೊತ್ತಿನಲ್ಲಿ ಕಗ್ಗತ್ತಲ ಕಾರ್ಮೋಡ ಕವಿದಿದೆ. </p>.<p>ಮುಖ್ಯರಸ್ತೆಯಲ್ಲಿ ಡಾ.ಎಚ್.ಎನ್. ವೃತ್ತ, ಡಿಸಿಸಿ ಬ್ಯಾಂಕ್ ಮುಂದೆ ಹಾಗೂ ಸರ್ಕಾರಿ ಬಸ್ ನಿಲ್ದಾಣದ ಮುಂದೆ ಹೈಮಾಸ್ಟ್ ಕಂಬಗಳನ್ನು ಹಾಕಲಾಗಿದೆ. ಆದರೆ ಕಂಬಗಳಿಗೆ ದೀಪಗಳನ್ನೇ ಹಾಕಿಲ್ಲ. ಇಲ್ಲಿ ಅಳವಡಿಸಲಾಗಿರುವ ಹೈಮಾಸ್ಟ್ ಹೆಸರಿಗಷ್ಟೇ ಎಂಬಂತಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. </p>.<p>ವಿದ್ಯುತ್ ಬೀದಿದೀಪಗಳ ನಿರ್ವಹಣೆ, ದುರಸ್ತಿಗಾಗಿ ಪುರಸಭೆಯಿಂದ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಗುತ್ತಿಗೆದಾರರಿಗೆ ನೀಡಲಾಗಿದೆ. ಆದರೆ, ರಸ್ತೆಗಳು ಮಾತ್ರ ಕತ್ತಲೆಯಲ್ಲಿವೆ ಎಂದು ಪುರಸಭೆ ಮಾಜಿ ಸದಸ್ಯ ಜಿ. ಕೃಷ್ಣಪ್ಪ ಅಸಮಾಧಾನ ವ್ಯಕ್ತಪಡಿಸಿದರು. </p>.<p>‘ಬೆಳಕೇ ಇಲ್ಲದ ಮುಖ್ಯರಸ್ತೆಯಲ್ಲಿ ಸಂಚರಿಸಲು ಭಯವಾಗುತ್ತದೆ. ಕಗ್ಗತ್ತಲಿನಿಂದಾಗಿ ಜನರ ಓಡಾಟಕ್ಕೆ ತೊಂದರೆಯಾಗಿದೆ. ವಾಯುವಿಹಾರ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ಪಟ್ಟಣದ ಒಂದನೇ ವಾರ್ಡ್ ನಿವಾಸಿ ನಿರ್ಮಲಮ್ಮ ತಿಳಿಸಿದರು. </p>.<p>ಬೀದಿದೀಪಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಎಂ. ಶ್ರೀನಿವಾಸ್ ‘ಪ್ರಜಾವಾಣಿ’ಗೆ ತಿಳಿಸಿದರು. </p>.<div><blockquote>ಪುರಸಭೆ ಅಧಿಕಾರಿಗಳು ಆಡಳಿತ ಮಂಡಳಿಯವರು ಕೂಡಲೇ ಗುಣಮಟ್ಟದ ದೀಪಗಳನ್ನು ಹಾಕಿಸಬೇಕು. ಹೈಮಾಸ್ಟ್ ದೀಪಗಳಲ್ಲಿ ಬಲ್ಬ್ ಅಳವಡಿಸಬೇಕು. ಇಲ್ಲವಾದರೆ ಪುರಸಭೆ ಮುಂದೆ ಹೋರಾಟ ಮಾಡಲಾಗುವುದು.</blockquote><span class="attribution">– ಜಬೀವುಲ್ಲಾ, ಕನ್ನಡಪರ ಸಂಘಟನೆ ಮುಖಂಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>