‘ಇವತ್ತು ಖಾಸಗಿ ಕ್ಷೇತ್ರದಲ್ಲಿ ಕಾರ್ಮಿಕರ ಶೋಷಣೆಯಾಗುತ್ತಿದೆ. ಸರಿಯಾದ ಸಂಬಳ, ಸೌಲಭ್ಯಗಳು ಸಿಗುತ್ತಿಲ್ಲ. ಸಾಮಾಜಿಕ ಭದ್ರತೆ ಇಲ್ಲ. ಕಾರ್ಮಿಕ ಇಲಾಖೆಯಲ್ಲಿ ದೊಡ್ಡ ಸಮಸ್ಯೆ ಇದೆ. ಅದನ್ನು ಅಷ್ಟು ಸುಲಭವಾಗಿ ಜೀರ್ಣಿಸಿಕೊಳ್ಳಲು ಆಗುವುದಿಲ್ಲ. ಇವತ್ತು ಜೀವನ ನಿರ್ವಹಣಾ ವೆಚ್ಚ ದುಬಾರಿಯಾಗಿದೆ. ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ, ಆಹಾರ ಖರ್ಚು ಲೆಕ್ಕ ಹಾಕಿ, ಕಾರ್ಮಿಕರ ಶ್ರಮಕ್ಕೆ ತಕ್ಕಂತೆ ಸಂಬಳ, ಪರಿಹಾರ ಸಿಗಬೇಕಿದೆ’ ಎಂದು ತಿಳಿಸಿದರು.