<p><strong>ಗೌರಿಬಿದನೂರು: </strong>ತಾಲ್ಲೂಕಿನ ಡಿ. ಪಾಳ್ಯ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವಸದಸ್ಯರ ಸಾಮಾನ್ಯ ಸಭೆಯು ಶನಿವಾರ ನಡೆಯಿತು.</p>.<p>ಸಂಘದ ಅಧ್ಯಕ್ಷ ತಿಪ್ಪಣ್ಣ ಮಾತನಾಡಿ, ‘ಉತ್ಪಾದಕರು ರಾಸುಗಳಿಗೆ ಪೌಷ್ಟಿಕ ಆಹಾರ ನೀಡುವ ಮೂಲಕ ಹಾಲಿನ ಗುಣಮಟ್ಟವನ್ನು ಕಾಪಾಡಬೇಕಾಗಿದೆ. ಸಾಕಾಣಿಕೆದಾರರು ರಾಸುಗಳ ಪೋಷಣೆಯನ್ನು ಸರಿಯಾಗಿ ಮಾಡಿದರೆ ಮಾತ್ರ ಗುಣಮಟ್ಟದ ಹಾಲು ಪಡೆಯಲು ಸಾಧ್ಯ. ಇದರಿಂದ ಸಂಘದ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ’ ಎಂದು ಹೇಳಿದರು.</p>.<p>ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಗಜರಾಜ್ ಶಿ. ರಣತೂರ್ ಮಾತನಾಡಿ, ಒಕ್ಕೂಟದಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.</p>.<p>ಕೋವಿಡ್ ಸಂದರ್ಭದಲ್ಲಿ ಒಕ್ಕೂಟವು ಹಾಲು ಉತ್ಪಾದಕರ ನೆರವಿಗೆ ಸದಾ ಬದ್ಧವಿದೆ. ಗುಣಮಟ್ಟದ ಹಾಲನ್ನು ನೀಡುವ ಮೂಲಕ ಸಂಘದ ಅಭಿವೃದ್ಧಿಗೆ ಎಲ್ಲ ಸದಸ್ಯರು ಶ್ರಮಿಸಬೇಕಿದೆ ಎಂದು ಹೇಳಿದರು.</p>.<p>ಸಭೆಯಲ್ಲಿ ಸಂಘಕ್ಕೆ ಹಾಲು ಪೂರೈಸುವ ಎಲ್ಲಾ ಹಾಲು ಉತ್ಪಾದಕರಿಗೆ 10 ಲೀಟರ್ ಸಾಮರ್ಥ್ಯದ ಸ್ಟೀಲ್ ಕ್ಯಾನ್ ವಿತರಿಸಲಾಯಿತು.</p>.<p>ಒಕ್ಕೂಟದ ವಿಸ್ತರಣಾಧಿಕಾರಿ ಕೆ.ಸಿ. ಕಿರಣ್ ಕುಮಾರ್, ಎ. ಮಂಜುನಾಥ್, ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು: </strong>ತಾಲ್ಲೂಕಿನ ಡಿ. ಪಾಳ್ಯ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವಸದಸ್ಯರ ಸಾಮಾನ್ಯ ಸಭೆಯು ಶನಿವಾರ ನಡೆಯಿತು.</p>.<p>ಸಂಘದ ಅಧ್ಯಕ್ಷ ತಿಪ್ಪಣ್ಣ ಮಾತನಾಡಿ, ‘ಉತ್ಪಾದಕರು ರಾಸುಗಳಿಗೆ ಪೌಷ್ಟಿಕ ಆಹಾರ ನೀಡುವ ಮೂಲಕ ಹಾಲಿನ ಗುಣಮಟ್ಟವನ್ನು ಕಾಪಾಡಬೇಕಾಗಿದೆ. ಸಾಕಾಣಿಕೆದಾರರು ರಾಸುಗಳ ಪೋಷಣೆಯನ್ನು ಸರಿಯಾಗಿ ಮಾಡಿದರೆ ಮಾತ್ರ ಗುಣಮಟ್ಟದ ಹಾಲು ಪಡೆಯಲು ಸಾಧ್ಯ. ಇದರಿಂದ ಸಂಘದ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ’ ಎಂದು ಹೇಳಿದರು.</p>.<p>ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಗಜರಾಜ್ ಶಿ. ರಣತೂರ್ ಮಾತನಾಡಿ, ಒಕ್ಕೂಟದಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.</p>.<p>ಕೋವಿಡ್ ಸಂದರ್ಭದಲ್ಲಿ ಒಕ್ಕೂಟವು ಹಾಲು ಉತ್ಪಾದಕರ ನೆರವಿಗೆ ಸದಾ ಬದ್ಧವಿದೆ. ಗುಣಮಟ್ಟದ ಹಾಲನ್ನು ನೀಡುವ ಮೂಲಕ ಸಂಘದ ಅಭಿವೃದ್ಧಿಗೆ ಎಲ್ಲ ಸದಸ್ಯರು ಶ್ರಮಿಸಬೇಕಿದೆ ಎಂದು ಹೇಳಿದರು.</p>.<p>ಸಭೆಯಲ್ಲಿ ಸಂಘಕ್ಕೆ ಹಾಲು ಪೂರೈಸುವ ಎಲ್ಲಾ ಹಾಲು ಉತ್ಪಾದಕರಿಗೆ 10 ಲೀಟರ್ ಸಾಮರ್ಥ್ಯದ ಸ್ಟೀಲ್ ಕ್ಯಾನ್ ವಿತರಿಸಲಾಯಿತು.</p>.<p>ಒಕ್ಕೂಟದ ವಿಸ್ತರಣಾಧಿಕಾರಿ ಕೆ.ಸಿ. ಕಿರಣ್ ಕುಮಾರ್, ಎ. ಮಂಜುನಾಥ್, ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>