‘ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಶನಿವಾರ, ಭಾನುವಾರ ವಿಶೇಷ ತರಗತಿಗಳನ್ನು ಆಯೋಜಿಸಿ ವಿಶೇಷ ಪಠ್ಯ ಬೋಧನೆ ಮಾಡಬೇಕು. ಜತೆಗೆ ವಿದ್ಯಾರ್ಥಿಗಳ ಸ್ವಚ್ಚತೆ ಮತ್ತು ಆರೋಗ್ಯದ ಕಡೆ ಕೂಡ ಗಮನ ಹರಿಸಬೇಕು. ಫಲಿತಾಂಶ ಉತ್ತಮ ಪಡಿಸಲು ವಿಶೇಷ ತರಬೇತಿ, ಸ್ಪಷ್ಟ ಓದು, ಶುದ್ಧ ಬರಹ, ಸರಳ ಗಣಿತ ಅಂಶಕ್ಕೆ ಹೆಚ್ಚು ಒತ್ತು ನೀಡಬೇಕು’ ಎಂದು ಸೂಚಿಸಿದರು.