ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ನಿಂದ ಬಿದ್ದು ವಿದ್ಯಾರ್ಥಿ ಸಾವು

Last Updated 30 ಆಗಸ್ಟ್ 2018, 14:04 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಗುರುವಾರ ಸಂಜೆ ಬಸ್‌ನ ಕಿಟಕಿ ಏರಿ ಬ್ಯಾಗ್‌ ಇಟ್ಟು ಸೀಟು ಕಾಯ್ದಿರಿಸಲು ಮುಂದಾದ ವಿದ್ಯಾರ್ಥಿಯೊಬ್ಬ ಆಯತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಗೌರಿಬಿದನೂರು ತಾಲ್ಲೂಕಿನ ಬಿ.ಬೊಮ್ಮಸಂದ್ರದ ನಿವಾಸಿ ಚರಣ್‌ಕುಮಾರ್(೧೮) ಮೃತ ವಿದ್ಯಾರ್ಥಿ. ನಗರದ ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓದುತ್ತಿದ್ದ ಚರಣ್‌ಕುಮಾರ್ ಊರಿಗೆ ವಾಪಸ್ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಚರಣ್‌ಕುಮಾರ್ ಕಿಟಕಿ ಏರಿ ಬ್ಯಾಗ್ ಒಳಗೆ ಹಾಕುತ್ತಿದ್ದ ವೇಳೆ ಚಾಲಕ ಏಕಾಏಕಿ ಬಸ್ ಹಿಂದಕ್ಕೆ ಚಲಾಯಿಸಿದ್ದಾನೆ. ಈ ವೇಳೆ ಆಯತಪ್ಪಿ ಬಸ್‌ನಿಂದ ಬಿದ್ದ ವಿದ್ಯಾರ್ಥಿ ತಲೆ ಸಿಮೆಂಟ್ ನೆಲಹಾಸಿಗೆ ಬಡಿದು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದರು.ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಯಿತು. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT