<p><strong>ಚಿಂತಾಮಣಿ:</strong> ತಾಲ್ಲೂಕಿನ ನಂದಿಗಾನಹಳ್ಳಿ ಬಳಿ ಭಾನುವಾರ ಆಟವಾಡಲು ಹೋಗಿದ್ದ ವಿದ್ಯಾರ್ಥಿ ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾನೆ.</p>.<p>ನಂದಿಗಾನಹಳ್ಳಿ ಗ್ರಾಮದ ರವಿ ಎಂಬುವವರ ಪುತ್ರ ರಂಜಿತ್ (15) ಮೃತಪಟ್ಟಿರುವ ವಿದ್ಯಾರ್ಥಿ.</p>.<p>ಮುರುಗಮಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದನು. ಭಾನುವಾರ ನಾಲ್ವರು ವಿದ್ಯಾರ್ಥಿಗಳು ಆಟವಾಡಲು ಹೋಗಿದ್ದರು. ಗ್ರಾಮದ ಸಮೀಪವೇ ಇರುವ ಕೃಷಿ ಹೊಂಡದ ಬಳಿ ಆಟವಾಡುತ್ತಿದ್ದಾಗ ರಂಜಿತ್ ಕಾಲುಜಾರಿ ಹೊಂಡಕ್ಕೆ ಬಿದ್ದಿದ್ದಾನೆ.</p>.<p>ಉಳಿದ ಮೂವರು ವಿದ್ಯಾರ್ಥಿಗಳು ಗ್ರಾಮದ ಮಂಜುನಾಥರೆಡ್ಡಿ ಎಂಬುವರಿಗೆ ರಂಜಿತ್ ಕೃಷಿ ಹೊಂಡಕ್ಕೆ ಬಿದ್ದಿರುವುದನ್ನು ತಿಳಿಸಿದ್ದಾರೆ. ಮಂಜುನಾಥರೆಡ್ಡಿ ಮತ್ತಿತರರು ಸ್ಥಳಕ್ಕೆ ತೆರಳಿ ರಂಜಿತ್ನನ್ನು ಹೊರತೆಗೆಯುವ ವೇಳೆಗೆ ಮೃತಪಟ್ಟಿದ್ದನು.</p>.<p>ಮೃತ ವಿದ್ಯಾರ್ಥಿಯ ತಂದೆ ನೀಡಿರುವ ದೂರಿನ ಮೇರೆಗೆ ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ಐ ಶಿವಕುಮಾರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನ ನಂದಿಗಾನಹಳ್ಳಿ ಬಳಿ ಭಾನುವಾರ ಆಟವಾಡಲು ಹೋಗಿದ್ದ ವಿದ್ಯಾರ್ಥಿ ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾನೆ.</p>.<p>ನಂದಿಗಾನಹಳ್ಳಿ ಗ್ರಾಮದ ರವಿ ಎಂಬುವವರ ಪುತ್ರ ರಂಜಿತ್ (15) ಮೃತಪಟ್ಟಿರುವ ವಿದ್ಯಾರ್ಥಿ.</p>.<p>ಮುರುಗಮಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದನು. ಭಾನುವಾರ ನಾಲ್ವರು ವಿದ್ಯಾರ್ಥಿಗಳು ಆಟವಾಡಲು ಹೋಗಿದ್ದರು. ಗ್ರಾಮದ ಸಮೀಪವೇ ಇರುವ ಕೃಷಿ ಹೊಂಡದ ಬಳಿ ಆಟವಾಡುತ್ತಿದ್ದಾಗ ರಂಜಿತ್ ಕಾಲುಜಾರಿ ಹೊಂಡಕ್ಕೆ ಬಿದ್ದಿದ್ದಾನೆ.</p>.<p>ಉಳಿದ ಮೂವರು ವಿದ್ಯಾರ್ಥಿಗಳು ಗ್ರಾಮದ ಮಂಜುನಾಥರೆಡ್ಡಿ ಎಂಬುವರಿಗೆ ರಂಜಿತ್ ಕೃಷಿ ಹೊಂಡಕ್ಕೆ ಬಿದ್ದಿರುವುದನ್ನು ತಿಳಿಸಿದ್ದಾರೆ. ಮಂಜುನಾಥರೆಡ್ಡಿ ಮತ್ತಿತರರು ಸ್ಥಳಕ್ಕೆ ತೆರಳಿ ರಂಜಿತ್ನನ್ನು ಹೊರತೆಗೆಯುವ ವೇಳೆಗೆ ಮೃತಪಟ್ಟಿದ್ದನು.</p>.<p>ಮೃತ ವಿದ್ಯಾರ್ಥಿಯ ತಂದೆ ನೀಡಿರುವ ದೂರಿನ ಮೇರೆಗೆ ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ಐ ಶಿವಕುಮಾರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>