<p><strong>ಶಿಡ್ಲಘಟ್ಟ</strong>: ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಹೆಚ್ಚು ಅಂಕ ಗಳಿಸಿರುವ ತಾಲ್ಲೂಕಿನ ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಶಾಸಕ ಬಿ.ಎನ್. ರವಿಕುಮಾರ್ ಸತ್ಕರಿಸಿದರು.</p>.<p>ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ಹಂಡಿಗನಾಳ ವಾಸಿ ಎಚ್.ಆರ್.ಜಶ್ವಂತ್ ಯಾದವ್, ದ್ವಿತೀಯ ಸ್ಥಾನ ಪಡೆದ ವಾಸವಿ ಶಾಲೆಯ ದೇಶದಪೇಟೆ ವಾಸಿ ಎಂ.ಜಾಹ್ನವಿ ಹಾಗೂ ಮುತ್ತೂರು ಬೀದಿಯ ವಾಸಿ ಬಿ.ಎಸ್.ಪ್ರಣವಿ ಅವರನ್ನು ಸನ್ಮಾನಿಸಿ, ಸಿಹಿ ತಿನಿಸಿದರು.</p>.<p>ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಿಡ್ಲಘಟ್ಟ ದ್ವಿತೀಯ ಸ್ಥಾನ ಪಡೆದಿದೆ. ಮುಂದಿನ ಬಾರಿ ಮೊದಲ ಸ್ಥಾನ ಪಡೆಯಬೇಕಿದೆ. ಅದಕ್ಕೆ ಅಗತ್ಯವಾದ ಎಲ್ಲ ರೀತಿಯ ಪೂರಕ ಸಹಕಾರ ನೀಡಲಾಗುವುದು ಎಂದರು.</p>.<p> ರಾಜ್ಯದಲ್ಲಿ ಜಿಲ್ಲೆಗೆ 22ನೇ ಸ್ಥಾನ ದೊರೆತಿದೆ. ಇನ್ನಷ್ಟು ಪ್ರಯತ್ನಗಳು ನಡೆಯಬೇಕು. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಫಲಿತಾಂಶ ಇನ್ನಷ್ಟು ಸುಧಾರಿಸಬೇಕು. ಅದಕ್ಕೆ ಪೂರಕವಾದ ಹೆಚ್ಚುವರಿ ತರಗತಿ, ಮಾರ್ಗದರ್ಶನ, ಪರೀಕ್ಷೆಯನ್ನು ಎದುರಿಸುವ ಬಗ್ಗೆ ಮಕ್ಕಳಿಗೆ ತರಬೇತಿ ಅಗತ್ಯವಿದೆ ಎಂದು ಹೇಳಿದರು.</p>.<p>ಪೋಷಕರು ಮಕ್ಕಳ ಮೇಲೆ ಹೆಚ್ಚಿನ ಅಂಕ ಗಳಿಸುವಂತೆ ಒತ್ತಡ ಹಾಕುವ ಬದಲಿಗೆ ಹೆಚ್ಚಿನ ಅಂಕ ಗಳಿಸುವಂತೆ ಅವರನ್ನು ತಯಾರು ಮಾಡಬೇಕು. ಇದಕ್ಕೆ ಪೋಷಕರಷ್ಟೆ ಅಲ್ಲ ಶಿಕ್ಷಕರು ಹಾಗೂ ನಾವೆಲ್ಲರೂ ಸಹಕರಿಸಬೇಕು ಎಂದರು.</p>.<p>ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅಪ್ಪೇಗೌಡನಹಳ್ಳಿ ಲಕ್ಷ್ಮಿನಾರಾಯಣರೆಡ್ಡಿ, ಮುಖಂಡರಾದ ತಾದೂರು ರಘು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಹೆಚ್ಚು ಅಂಕ ಗಳಿಸಿರುವ ತಾಲ್ಲೂಕಿನ ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಶಾಸಕ ಬಿ.ಎನ್. ರವಿಕುಮಾರ್ ಸತ್ಕರಿಸಿದರು.</p>.<p>ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ಹಂಡಿಗನಾಳ ವಾಸಿ ಎಚ್.ಆರ್.ಜಶ್ವಂತ್ ಯಾದವ್, ದ್ವಿತೀಯ ಸ್ಥಾನ ಪಡೆದ ವಾಸವಿ ಶಾಲೆಯ ದೇಶದಪೇಟೆ ವಾಸಿ ಎಂ.ಜಾಹ್ನವಿ ಹಾಗೂ ಮುತ್ತೂರು ಬೀದಿಯ ವಾಸಿ ಬಿ.ಎಸ್.ಪ್ರಣವಿ ಅವರನ್ನು ಸನ್ಮಾನಿಸಿ, ಸಿಹಿ ತಿನಿಸಿದರು.</p>.<p>ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಿಡ್ಲಘಟ್ಟ ದ್ವಿತೀಯ ಸ್ಥಾನ ಪಡೆದಿದೆ. ಮುಂದಿನ ಬಾರಿ ಮೊದಲ ಸ್ಥಾನ ಪಡೆಯಬೇಕಿದೆ. ಅದಕ್ಕೆ ಅಗತ್ಯವಾದ ಎಲ್ಲ ರೀತಿಯ ಪೂರಕ ಸಹಕಾರ ನೀಡಲಾಗುವುದು ಎಂದರು.</p>.<p> ರಾಜ್ಯದಲ್ಲಿ ಜಿಲ್ಲೆಗೆ 22ನೇ ಸ್ಥಾನ ದೊರೆತಿದೆ. ಇನ್ನಷ್ಟು ಪ್ರಯತ್ನಗಳು ನಡೆಯಬೇಕು. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಫಲಿತಾಂಶ ಇನ್ನಷ್ಟು ಸುಧಾರಿಸಬೇಕು. ಅದಕ್ಕೆ ಪೂರಕವಾದ ಹೆಚ್ಚುವರಿ ತರಗತಿ, ಮಾರ್ಗದರ್ಶನ, ಪರೀಕ್ಷೆಯನ್ನು ಎದುರಿಸುವ ಬಗ್ಗೆ ಮಕ್ಕಳಿಗೆ ತರಬೇತಿ ಅಗತ್ಯವಿದೆ ಎಂದು ಹೇಳಿದರು.</p>.<p>ಪೋಷಕರು ಮಕ್ಕಳ ಮೇಲೆ ಹೆಚ್ಚಿನ ಅಂಕ ಗಳಿಸುವಂತೆ ಒತ್ತಡ ಹಾಕುವ ಬದಲಿಗೆ ಹೆಚ್ಚಿನ ಅಂಕ ಗಳಿಸುವಂತೆ ಅವರನ್ನು ತಯಾರು ಮಾಡಬೇಕು. ಇದಕ್ಕೆ ಪೋಷಕರಷ್ಟೆ ಅಲ್ಲ ಶಿಕ್ಷಕರು ಹಾಗೂ ನಾವೆಲ್ಲರೂ ಸಹಕರಿಸಬೇಕು ಎಂದರು.</p>.<p>ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅಪ್ಪೇಗೌಡನಹಳ್ಳಿ ಲಕ್ಷ್ಮಿನಾರಾಯಣರೆಡ್ಡಿ, ಮುಖಂಡರಾದ ತಾದೂರು ರಘು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>