ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಎಲ್ಲ ವಿರೋಧ ಪಕ್ಷಗಳ ಮುಖಂಡರನ್ನು ಇದೇ 13ರಂದು ಭೋಜನ ಕೂಟಕ್ಕೆ ಆಹ್ವಾನಿಸಿದ್ದಾರೆ. ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಒಗ್ಗಟ್ಟನ್ನು ಗಟ್ಟಿಗೊಳಿಸುವುದು ಇದರ ಉದ್ದೇಶ ಎಂದು ಹೇಳಲಾಗಿದೆ.
ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಒಂದಾಗಿವೆ. ಇದೇ ಒಗ್ಗಟ್ಟನ್ನು 2019ರ ಲೋಕಸಭಾ ಚುನಾವಣೆವರೆಗೆ ಮುಂದು ವರಿಸುವುದು ಇದರ ಉದ್ದೇಶ ಎಂದು ಮುಖಂಡರು ತಿಳಿಸಿದ್ದಾರೆ.