<p><strong>ಚಿಕ್ಕಬಳ್ಳಾಪುರ</strong>: ತಾಲ್ಲೂಕಿನ ಪೆರೇಸಂದ್ರದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯ ಶಿಕ್ಷಕರ ದೇವರಾಜ್ ಅವರನ್ನು ಅಮಾನತುಗೊಳಿಸಿರುವ ಕ್ರಮ ಖಂಡಿಸಿ ಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮನವಿ ಸಲ್ಲಿಸಿದ್ದಾರೆ.</p>.<p>ವಸತಿ ಶಾಲೆಯ ಶಿಕ್ಷಕರ ನಡುವಿನ ತಿಕ್ಕಾಟದಿಂದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲು ತುಳಿಯುವಂತಾಗಿದೆ ಎಂದು ಶಿಕ್ಷಕ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ.</p>.<p>ಹಿಂದಿ ಭಾಷಾ ಶಿಕ್ಷಕ ದೇವರಾಜ್ ಅವರನ್ನು ಎರಡು ದಿನಗಳ ಹಿಂದೆ ಅಲ್ಪಸಂಖ್ಯಾತ ಇಲಾಖೆಯು ಕೆಲಸದಿಂದ ಅಮಾತುಗೊಳಿಸಿತ್ತು. ಈ ಅಮಾನತಿಗೆ ವಸತಿ ಶಾಲೆಯಲ್ಲಿನ ಶಿಕ್ಷಕರ ನಡುವಿನ ತಿಕ್ಕಾಟವೇ ಪ್ರಮುಖ ಕಾರಣ ಎನ್ನುವ ಮಾತುಗಳಿವೆ.</p>.<p>ಅಮಾನತಿಗೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿಗೆ ಬಂದು, ‘ನಮ್ಮ ಶಿಕ್ಷಕರು ಯಾವುದೇ ತಪ್ಪು ಮಾಡಿಲ್ಲ. ಅವರ ಅಮಾನತು ವಾಪಸ್ ಪಡೆಯಬೇಕು’ ಎಂದು ಮನವಿ ಮಾಡಿದರು.</p>.<p>ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಇಲ್ಲದ ಕಾರಣ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅವರಿಗೆ ಮನವಿ ಸಲ್ಲಿಸಿದರು. ಈ ಬಗ್ಗೆ ತನಿಖೆ ನಡೆಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ ಎನ್ನುತ್ತವೆ ಮೂಲಗಳು. </p>.<p>ಅಧಿಕಾರಿಗಳು ಕೆಎಸ್ಆರ್ಟಿಸಿ ಬಸ್ನಲ್ಲಿ ವಿದ್ಯಾರ್ಥಿಗಳನ್ನು ವಸತಿ ಶಾಲೆಗೆ ವಾಪಸ್ ಕಳುಹಿಸಿಕೊಟ್ಟಿದ್ದಾರೆ. ಶುಕ್ರವಾರ ರಾತ್ರಿ ಶಾಲೆಗೆ ತಹಶೀಲ್ದಾರ್ ಸಹ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ತಾಲ್ಲೂಕಿನ ಪೆರೇಸಂದ್ರದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯ ಶಿಕ್ಷಕರ ದೇವರಾಜ್ ಅವರನ್ನು ಅಮಾನತುಗೊಳಿಸಿರುವ ಕ್ರಮ ಖಂಡಿಸಿ ಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮನವಿ ಸಲ್ಲಿಸಿದ್ದಾರೆ.</p>.<p>ವಸತಿ ಶಾಲೆಯ ಶಿಕ್ಷಕರ ನಡುವಿನ ತಿಕ್ಕಾಟದಿಂದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲು ತುಳಿಯುವಂತಾಗಿದೆ ಎಂದು ಶಿಕ್ಷಕ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ.</p>.<p>ಹಿಂದಿ ಭಾಷಾ ಶಿಕ್ಷಕ ದೇವರಾಜ್ ಅವರನ್ನು ಎರಡು ದಿನಗಳ ಹಿಂದೆ ಅಲ್ಪಸಂಖ್ಯಾತ ಇಲಾಖೆಯು ಕೆಲಸದಿಂದ ಅಮಾತುಗೊಳಿಸಿತ್ತು. ಈ ಅಮಾನತಿಗೆ ವಸತಿ ಶಾಲೆಯಲ್ಲಿನ ಶಿಕ್ಷಕರ ನಡುವಿನ ತಿಕ್ಕಾಟವೇ ಪ್ರಮುಖ ಕಾರಣ ಎನ್ನುವ ಮಾತುಗಳಿವೆ.</p>.<p>ಅಮಾನತಿಗೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿಗೆ ಬಂದು, ‘ನಮ್ಮ ಶಿಕ್ಷಕರು ಯಾವುದೇ ತಪ್ಪು ಮಾಡಿಲ್ಲ. ಅವರ ಅಮಾನತು ವಾಪಸ್ ಪಡೆಯಬೇಕು’ ಎಂದು ಮನವಿ ಮಾಡಿದರು.</p>.<p>ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಇಲ್ಲದ ಕಾರಣ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅವರಿಗೆ ಮನವಿ ಸಲ್ಲಿಸಿದರು. ಈ ಬಗ್ಗೆ ತನಿಖೆ ನಡೆಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ ಎನ್ನುತ್ತವೆ ಮೂಲಗಳು. </p>.<p>ಅಧಿಕಾರಿಗಳು ಕೆಎಸ್ಆರ್ಟಿಸಿ ಬಸ್ನಲ್ಲಿ ವಿದ್ಯಾರ್ಥಿಗಳನ್ನು ವಸತಿ ಶಾಲೆಗೆ ವಾಪಸ್ ಕಳುಹಿಸಿಕೊಟ್ಟಿದ್ದಾರೆ. ಶುಕ್ರವಾರ ರಾತ್ರಿ ಶಾಲೆಗೆ ತಹಶೀಲ್ದಾರ್ ಸಹ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>