<p><strong>ಚಿಂತಾಮಣಿ: </strong>ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕೋವಿಡ್-19 ಟೆಸ್ಟ್ ಮಾಡಿಸಿಕೊಳ್ಳಲು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ದಿನಗಳಿಂದ ನೂಕು ನುಗ್ಗಲಿನಲ್ಲಿ ಮುಗಿಬೀಳುತ್ತಿದ್ದಾರೆ.</p>.<p>ರಾಜ್ಯ ಸರ್ಕಾರ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಜನವರಿ ಒಂದರಿಂದ ತರಗತಿಗಳನ್ನು ಆರಂಭಿಸಿದೆ. ವಿದ್ಯಾರ್ಥಿಗಳು ಕೋವಿಡ್-19 ಟೆಸ್ಟ್ ಮಾಡಿಸಿಕೊಂಡು ನೆಗೆಟಿವ್ ವರದಿ ತರುವುದು ಕಡ್ಡಾಯ. ವರದಿ ಇದ್ದರೆ ಮಾತ್ರ ಶಾಲಾ, ಕಾಲೇಜಿಗೆ ಪ್ರವೇಶ ನೀಡಲಾಗುತ್ತಿದೆ. ಶುಕ್ರವಾರ, ಶನಿವಾರ ಅಷ್ಟಾಗಿ ಬಿಸಿ ತಟ್ಟಿರಲಿಲ್ಲ. ಸೋಮವಾರದಿಂದ ವಿದ್ಯಾರ್ಥಿಗಳ ಶಾಲಾ ಕಾಲೇಜುಗಳಿಗೆ ಹಾಜರಾಗಲು ಹೆಚ್ಚಿನ ಉತ್ಸಾಹ ತೋರುತ್ತಿದ್ದಾರೆ.</p>.<p>ಕೋವಿಡ್ ಟೆಸ್ಟ್ಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಯಾವುದೇ ಅಂತರವನ್ನು ಪಾಲಿಸದೆ ಒಬ್ಬರ ಮೇಲೆ ಒಬ್ಬರು ಮುಗಿಬೀಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಸೋಮವಾರ ಮತ್ತು ಮಂಗಳವಾರ ಉದ್ದದ ಸಾಲು ಕಂಡುಬಂತು. ನೂರಾರು ವಿದ್ಯಾರ್ಥಿಗಳು ಒಮ್ಮಲೇ ಟೆಸ್ಟ್ಗೆ ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಗಿದೆ.</p>.<p>‘ಶಾಲಾ, ಕಾಲೇಜುಗಳು ಪ್ರಾರಂಭದ ದಿನಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಕೋವಿಡ್-19 ಟೆಸ್ಟ್ಗೆ ಬರುತ್ತಾರೆ. ಟೆಸ್ಟ್ಗಾಗಿ 3-4 ಕೌಂಟರ್ಗಳನ್ನು ತೆರೆಯಬೇಕು. ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಮ<br />ನ್ವಯತೆ ಸಾಧಿಸಿಕೊಂಡು ವ್ಯವಸ್ಥೆ ಮಾಡಬೇಕಾಗಿತ್ತು. ಯಾವ ಕ್ರಮ ಕೈಗೊಳ್ಳದೆ ವಿದ್ಯಾರ್ಥಿಗಳು ನೂಕು ನುಗ್ಗಲಿನಲ್ಲಿ ಗಂಟೆಗಟ್ಟಲೇ ಕಾಯಬೇಕಾಗಿದೆ’ ಎಂದು ಪೋಷಕ ರಾಮಚಂದ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ತಾಲ್ಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಕೋವಿಡ್-19 ಟೆಸ್ಟ್ ಮಾಡಲಾಗುತ್ತಿದೆ. ಎಲ್ಲ ವಿದ್ಯಾರ್ಥಿಗಳು ನಗರದ ಸಾರ್ವಜನಿಕ ಆಸ್ಪತ್ರೆಗೆ ಬರುವ ಅವಶ್ಯಕತೆ ಇಲ್ಲ. ಅವರವರ ಹೋಬಳಿ ಕೇಂದ್ರಗಳಲ್ಲೇ ಟೆಸ್ಟ್ ಮಾಡಿಸಿಕೊಳ್ಳಬಹುದು. ಈ ಬಗ್ಗೆ ಶಿಕ್ಷಣ ಸಂಸ್ಥೆಗಳ ಅಧಿಕಾರಿಗಳು ಜಾಗೃತಿ ಮೂಡಿಸಬೇಕು. ಸಾರ್ವಜನಿಕ ಆಸ್ಪತ್ರೆಯಲ್ಲೂ 3-4 ಜನ ಟೆಸ್ಟ್ ಮಾಡುತ್ತಿದ್ದಾರೆ. ಸೋಮವಾರ 300 ವಿದ್ಯಾರ್ಥಿಗಳಿಗೆ ಟೆಸ್ಟ್ ಮಾಡಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸ್ವಾತಿ ಹೇಳಿದರು.</p>.<p>‘ಶಾಲಾ ಕಾಲೇಜುಗಳು ಆರಂಭವಾಗುತ್ತಿವೆ. ಕೋವಿಡ್-19 ಟೆಸ್ಟ್ಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಆರೋಗ್ಯ ಇಲಾಖೆಗೆ ಪತ್ರ ಬರೆಯಲಾಗಿದೆ. ವಿದ್ಯಾರ್ಥಿಗಳ ನೂಕು ನುಗ್ಗಲಿನ ಕುರಿತು ಮತ್ತೊಮ್ಮೆ ಆರೋಗ್ಯ ಅಧಿಕಾರಿಗಳಿಗೆ ಮನವಿ ಮಾಡಲಾಗುವುದು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ: </strong>ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕೋವಿಡ್-19 ಟೆಸ್ಟ್ ಮಾಡಿಸಿಕೊಳ್ಳಲು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ದಿನಗಳಿಂದ ನೂಕು ನುಗ್ಗಲಿನಲ್ಲಿ ಮುಗಿಬೀಳುತ್ತಿದ್ದಾರೆ.</p>.<p>ರಾಜ್ಯ ಸರ್ಕಾರ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಜನವರಿ ಒಂದರಿಂದ ತರಗತಿಗಳನ್ನು ಆರಂಭಿಸಿದೆ. ವಿದ್ಯಾರ್ಥಿಗಳು ಕೋವಿಡ್-19 ಟೆಸ್ಟ್ ಮಾಡಿಸಿಕೊಂಡು ನೆಗೆಟಿವ್ ವರದಿ ತರುವುದು ಕಡ್ಡಾಯ. ವರದಿ ಇದ್ದರೆ ಮಾತ್ರ ಶಾಲಾ, ಕಾಲೇಜಿಗೆ ಪ್ರವೇಶ ನೀಡಲಾಗುತ್ತಿದೆ. ಶುಕ್ರವಾರ, ಶನಿವಾರ ಅಷ್ಟಾಗಿ ಬಿಸಿ ತಟ್ಟಿರಲಿಲ್ಲ. ಸೋಮವಾರದಿಂದ ವಿದ್ಯಾರ್ಥಿಗಳ ಶಾಲಾ ಕಾಲೇಜುಗಳಿಗೆ ಹಾಜರಾಗಲು ಹೆಚ್ಚಿನ ಉತ್ಸಾಹ ತೋರುತ್ತಿದ್ದಾರೆ.</p>.<p>ಕೋವಿಡ್ ಟೆಸ್ಟ್ಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಯಾವುದೇ ಅಂತರವನ್ನು ಪಾಲಿಸದೆ ಒಬ್ಬರ ಮೇಲೆ ಒಬ್ಬರು ಮುಗಿಬೀಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಸೋಮವಾರ ಮತ್ತು ಮಂಗಳವಾರ ಉದ್ದದ ಸಾಲು ಕಂಡುಬಂತು. ನೂರಾರು ವಿದ್ಯಾರ್ಥಿಗಳು ಒಮ್ಮಲೇ ಟೆಸ್ಟ್ಗೆ ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಗಿದೆ.</p>.<p>‘ಶಾಲಾ, ಕಾಲೇಜುಗಳು ಪ್ರಾರಂಭದ ದಿನಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಕೋವಿಡ್-19 ಟೆಸ್ಟ್ಗೆ ಬರುತ್ತಾರೆ. ಟೆಸ್ಟ್ಗಾಗಿ 3-4 ಕೌಂಟರ್ಗಳನ್ನು ತೆರೆಯಬೇಕು. ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಮ<br />ನ್ವಯತೆ ಸಾಧಿಸಿಕೊಂಡು ವ್ಯವಸ್ಥೆ ಮಾಡಬೇಕಾಗಿತ್ತು. ಯಾವ ಕ್ರಮ ಕೈಗೊಳ್ಳದೆ ವಿದ್ಯಾರ್ಥಿಗಳು ನೂಕು ನುಗ್ಗಲಿನಲ್ಲಿ ಗಂಟೆಗಟ್ಟಲೇ ಕಾಯಬೇಕಾಗಿದೆ’ ಎಂದು ಪೋಷಕ ರಾಮಚಂದ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ತಾಲ್ಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಕೋವಿಡ್-19 ಟೆಸ್ಟ್ ಮಾಡಲಾಗುತ್ತಿದೆ. ಎಲ್ಲ ವಿದ್ಯಾರ್ಥಿಗಳು ನಗರದ ಸಾರ್ವಜನಿಕ ಆಸ್ಪತ್ರೆಗೆ ಬರುವ ಅವಶ್ಯಕತೆ ಇಲ್ಲ. ಅವರವರ ಹೋಬಳಿ ಕೇಂದ್ರಗಳಲ್ಲೇ ಟೆಸ್ಟ್ ಮಾಡಿಸಿಕೊಳ್ಳಬಹುದು. ಈ ಬಗ್ಗೆ ಶಿಕ್ಷಣ ಸಂಸ್ಥೆಗಳ ಅಧಿಕಾರಿಗಳು ಜಾಗೃತಿ ಮೂಡಿಸಬೇಕು. ಸಾರ್ವಜನಿಕ ಆಸ್ಪತ್ರೆಯಲ್ಲೂ 3-4 ಜನ ಟೆಸ್ಟ್ ಮಾಡುತ್ತಿದ್ದಾರೆ. ಸೋಮವಾರ 300 ವಿದ್ಯಾರ್ಥಿಗಳಿಗೆ ಟೆಸ್ಟ್ ಮಾಡಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸ್ವಾತಿ ಹೇಳಿದರು.</p>.<p>‘ಶಾಲಾ ಕಾಲೇಜುಗಳು ಆರಂಭವಾಗುತ್ತಿವೆ. ಕೋವಿಡ್-19 ಟೆಸ್ಟ್ಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಆರೋಗ್ಯ ಇಲಾಖೆಗೆ ಪತ್ರ ಬರೆಯಲಾಗಿದೆ. ವಿದ್ಯಾರ್ಥಿಗಳ ನೂಕು ನುಗ್ಗಲಿನ ಕುರಿತು ಮತ್ತೊಮ್ಮೆ ಆರೋಗ್ಯ ಅಧಿಕಾರಿಗಳಿಗೆ ಮನವಿ ಮಾಡಲಾಗುವುದು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>