<p><strong>ಚಿಕ್ಕಬಳ್ಳಾಪುರ:</strong> ‘ಭಾರತ ಕಂಡ ಅಪ್ರತಿಮ ದೇಶಭಕ್ತ ಸುಭಾಷ್ ಚಂದ್ರ ಬೋಸ್ ಅವರ ಜೀವನವನ್ನು ಇಂದಿನ ಯುವಜನರು ಆದರ್ಶವಾಗಿಟ್ಟು ಕೊಳ್ಳಬೇಕು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮತನಾಡಿದರು.</p>.<p>‘ದೇಶ ಕಂಡ ಅಪರೂಪದ ಸೇನಾನಿ ಸುಭಾಷ್ ಚಂದ್ರ ಅವರು ತಮ್ಮ ಶಿಸ್ತುಬದ್ದ ಜೀವನದಿಂದ ಯುವಕರಿಗೆ ಮಾದರಿಯಾಗಿದ್ದರು. ಭಾರತದ ವಿಮೋಚನೆಗೆ ಶ್ರಮಿಸಿದವರು. ಕೇವಲ ಹೋರಾಟದಿಂದ ಮಾತ್ರ ದೇಶಕ್ಕೆ ಸ್ವತಂತ್ರ ಸಿಗುವುದು ಎಂದು ನಂಬಿದ್ದ ಅವರು ಅದಕ್ಕಾಗಿ ಕ್ರಾಂತಿಕಾರಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು’ ಎಂದು ತಿಳಿಸಿದರು.</p>.<p>‘ವಿದೇಶ ಪರ್ಯಟನೆ ಮಾಡಿ ಬ್ರಿಟಿಷರ ವಿರುದ್ಧ ಹೋರಾಡಲು ಸ್ವಂತ ಸೇನೆಯನ್ನು ಕಟ್ಟಿದ ಮಹಾನ್ ನಾಯಕ ನೇತಾಜಿ.ಹುಟ್ಟಿನಿಂದ ಯಾರೂ ಶ್ರೇಷ್ಠರಲ್ಲ. ಅವರು ಬದುಕಿದ ಕಾಲದಲ್ಲಿ ಜನಮನ್ನಣೆ ಗಳಿಸಿ ಮಹಾತ್ಮರಾಗುತ್ತಾರೆ. ಸ್ವತಂತ್ರಕ್ಕಾಗಿ 6 ಲಕ್ಷ ಜನ ಪ್ರಾಣ ತ್ಯಾಗ ಮಾಡಿದ್ದಾರೆ. ಇದನ್ನು ಈಗಿನ ಯುವಜನತೆ ನೆನೆಯಬೇಕು’ ಎಂದರು.</p>.<p>ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಮುಖಂಡರಾದ ಕೆ.ವಿ.ನವೀನ್ ಕಿರಣ್, ನಂದಿ ಎಂ ಆಂಜಿನಪ್ಪ, ಯಲುವಹಳ್ಳಿ ರಮೇಶ್, ಎಸ್.ಪಿ.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಂ, ಪ್ರಧಾನ ಕಾರ್ಯದರ್ಶಿ ಸುರೇಶ್, ಕಿಸಾನ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣಪ್ಪ, ಎನ್ಎಸ್ಯುಐ ಸಂಚಾಲಕ ಕುಂದಲಗುರ್ಕಿ ಮುನೀಂದ್ರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ‘ಭಾರತ ಕಂಡ ಅಪ್ರತಿಮ ದೇಶಭಕ್ತ ಸುಭಾಷ್ ಚಂದ್ರ ಬೋಸ್ ಅವರ ಜೀವನವನ್ನು ಇಂದಿನ ಯುವಜನರು ಆದರ್ಶವಾಗಿಟ್ಟು ಕೊಳ್ಳಬೇಕು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮತನಾಡಿದರು.</p>.<p>‘ದೇಶ ಕಂಡ ಅಪರೂಪದ ಸೇನಾನಿ ಸುಭಾಷ್ ಚಂದ್ರ ಅವರು ತಮ್ಮ ಶಿಸ್ತುಬದ್ದ ಜೀವನದಿಂದ ಯುವಕರಿಗೆ ಮಾದರಿಯಾಗಿದ್ದರು. ಭಾರತದ ವಿಮೋಚನೆಗೆ ಶ್ರಮಿಸಿದವರು. ಕೇವಲ ಹೋರಾಟದಿಂದ ಮಾತ್ರ ದೇಶಕ್ಕೆ ಸ್ವತಂತ್ರ ಸಿಗುವುದು ಎಂದು ನಂಬಿದ್ದ ಅವರು ಅದಕ್ಕಾಗಿ ಕ್ರಾಂತಿಕಾರಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು’ ಎಂದು ತಿಳಿಸಿದರು.</p>.<p>‘ವಿದೇಶ ಪರ್ಯಟನೆ ಮಾಡಿ ಬ್ರಿಟಿಷರ ವಿರುದ್ಧ ಹೋರಾಡಲು ಸ್ವಂತ ಸೇನೆಯನ್ನು ಕಟ್ಟಿದ ಮಹಾನ್ ನಾಯಕ ನೇತಾಜಿ.ಹುಟ್ಟಿನಿಂದ ಯಾರೂ ಶ್ರೇಷ್ಠರಲ್ಲ. ಅವರು ಬದುಕಿದ ಕಾಲದಲ್ಲಿ ಜನಮನ್ನಣೆ ಗಳಿಸಿ ಮಹಾತ್ಮರಾಗುತ್ತಾರೆ. ಸ್ವತಂತ್ರಕ್ಕಾಗಿ 6 ಲಕ್ಷ ಜನ ಪ್ರಾಣ ತ್ಯಾಗ ಮಾಡಿದ್ದಾರೆ. ಇದನ್ನು ಈಗಿನ ಯುವಜನತೆ ನೆನೆಯಬೇಕು’ ಎಂದರು.</p>.<p>ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಮುಖಂಡರಾದ ಕೆ.ವಿ.ನವೀನ್ ಕಿರಣ್, ನಂದಿ ಎಂ ಆಂಜಿನಪ್ಪ, ಯಲುವಹಳ್ಳಿ ರಮೇಶ್, ಎಸ್.ಪಿ.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಂ, ಪ್ರಧಾನ ಕಾರ್ಯದರ್ಶಿ ಸುರೇಶ್, ಕಿಸಾನ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣಪ್ಪ, ಎನ್ಎಸ್ಯುಐ ಸಂಚಾಲಕ ಕುಂದಲಗುರ್ಕಿ ಮುನೀಂದ್ರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>