<p><strong>ಚಿಂತಾಮಣಿ: </strong>ನಗರದ ವಾಸವಿ ವೃದ್ಧಾಶ್ರಮದಲ್ಲಿ ಇತ್ತೀಚೆಗೆ ನಿಧನರಾದ ಕವಿ ಭೋಜರಾಜ ಅವರ ಶ್ರದ್ಧಾಂಜಲಿ ಸಭೆಯನ್ನು ಶಿಲ್ಪ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.</p>.<p>ವಾಸವಿ ವೃದ್ಧಾಶ್ರಮದ ವ್ಯವಸ್ಥಾಪಕ ಕೆ.ಆರ್. ನರಸಿಂಹಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಎನ್. ಮುನಿಕೃಷ್ಣಪ್ಪ, ಕೆ.ಎನ್. ಅಕ್ರಂಪಾಷಾ, ಎಸ್.ಎಫ್.ಎಸ್. ಸುರೇಶ್ ಮಾತನಾಡಿ, ಭೋಜರಾಜ ಅವರ ಸರಳತೆ, ನಡೆ-ನುಡಿ, ವ್ಯಕ್ತಿತ್ವ ಹಾಗೂ ಸಾಹಿತ್ಯ ಸೇವೆಯನ್ನು ಸ್ಮರಿಸಿದರು.</p>.<p>ಭೋಜರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಭಕ್ತಿಗೀತೆಗಳನ್ನು ಹಾಡುವುದರ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದರು.</p>.<p>ಶಾಲೆಯ ಮುಖ್ಯಶಿಕ್ಷಕಿ ಭಾಗ್ಯಮ್ಮ, ಸಹಶಿಕ್ಷಕಿ ಮಂಜು ಭಾರ್ಗವಿ, ವೃದ್ಧಾಶ್ರಮದ ನಿರ್ವಾಹಕಿ ಜೆ.ಕೆ. ನಿರ್ಮಲಾ, ಕವಿಗಳಾದ ಎಚ್.ಎಸ್. ಅಶೋಕ್, ಶಶಿಕುಮಾರ್, ಭಜನಾ ಮಂಡಳಿಯ ರುಕ್ಮಣಿಯಮ್ಮ, ಸರಸ್ವತಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ: </strong>ನಗರದ ವಾಸವಿ ವೃದ್ಧಾಶ್ರಮದಲ್ಲಿ ಇತ್ತೀಚೆಗೆ ನಿಧನರಾದ ಕವಿ ಭೋಜರಾಜ ಅವರ ಶ್ರದ್ಧಾಂಜಲಿ ಸಭೆಯನ್ನು ಶಿಲ್ಪ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.</p>.<p>ವಾಸವಿ ವೃದ್ಧಾಶ್ರಮದ ವ್ಯವಸ್ಥಾಪಕ ಕೆ.ಆರ್. ನರಸಿಂಹಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಎನ್. ಮುನಿಕೃಷ್ಣಪ್ಪ, ಕೆ.ಎನ್. ಅಕ್ರಂಪಾಷಾ, ಎಸ್.ಎಫ್.ಎಸ್. ಸುರೇಶ್ ಮಾತನಾಡಿ, ಭೋಜರಾಜ ಅವರ ಸರಳತೆ, ನಡೆ-ನುಡಿ, ವ್ಯಕ್ತಿತ್ವ ಹಾಗೂ ಸಾಹಿತ್ಯ ಸೇವೆಯನ್ನು ಸ್ಮರಿಸಿದರು.</p>.<p>ಭೋಜರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಭಕ್ತಿಗೀತೆಗಳನ್ನು ಹಾಡುವುದರ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದರು.</p>.<p>ಶಾಲೆಯ ಮುಖ್ಯಶಿಕ್ಷಕಿ ಭಾಗ್ಯಮ್ಮ, ಸಹಶಿಕ್ಷಕಿ ಮಂಜು ಭಾರ್ಗವಿ, ವೃದ್ಧಾಶ್ರಮದ ನಿರ್ವಾಹಕಿ ಜೆ.ಕೆ. ನಿರ್ಮಲಾ, ಕವಿಗಳಾದ ಎಚ್.ಎಸ್. ಅಶೋಕ್, ಶಶಿಕುಮಾರ್, ಭಜನಾ ಮಂಡಳಿಯ ರುಕ್ಮಣಿಯಮ್ಮ, ಸರಸ್ವತಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>